ಮಡಿಕೇರಿ: ಪ್ರೀತಿಸಿ ವಿವಾಹವಾಗಿದ್ದ ದಂಪತಿಯ ನಡುವೆ ಉಂಟಾದ ಕಲಹ ವಿಕೋಪಕ್ಕೆ ತೆರಳಿದ ಪರಿಣಾಮ ಪತ್ನಿ, ಚಾಕುವಿನಿಂದ ಇರಿದು ಪತಿಯನ್ನು ಕೊಲೆ ಮಾಡಿರುವ ಘಟನೆ ಭಾನುವಾರ ಮೂರ್ನಾಡುವಿನ ಗಾಂಧಿನಗರದಲ್ಲಿ ನಡೆದಿದೆ.
ಗಾಂಧಿನಗರದ ಬಾಡಿಗೆಗೆ ವಾಸವಾಗಿದ್ದ ಧರ್ಮ (26) ಕೊಲೆಯಾದವನು. ಪತ್ನಿ ಶ್ರೀಜಾ (24) ಹತ್ಯೆ ಮಾಡಿದವರು ಎಂದು ಹೇಳಲಾಗಿದೆ.
ದಂಪತಿ ಕಳೆದ 10 ತಿಂಗಳ ಹಿಂದೆ ಪ್ರೀತಿಸಿ ವಿವಾಹವಾಗಿದ್ದರು. ಭಾನುವಾರ ಬೆಳಿಗ್ಗೆ ದಂಪತಿ ನಡುವೆ ಜಗಳವಾಗಿದೆ. ಈ ವೇಳೆ ಪತ್ನಿ ಶ್ರೀಜಾ ತನ್ನ ಕೈಲಿದ್ದ ಚಾಕುವಿನಿಂದ ಆತನನ್ನು ತಿವಿದ ಪರಿಣಾಮ ಮೃತಪಟ್ಟಿದ್ದಾನೆ ಎಂದು ಹೇಳಲಾಗಿದೆ. ಆರೋಪಿ ಶ್ರೀಜಾಳನ್ನು ಪೊಲೀಸರು ಬಂಧಿಸಿದ್ದಾರೆ. ಮೃತ ಧರ್ಮ ಕುಶಾಲನಗರದ ಮೂಲನವನಾಗಿದ್ದು, ಶ್ರೀಜ ಬೈರಂಬಾಡದ ನಿವಾಸಿಯಾಗಿದ್ದಾಳೆ. ಇಬ್ಬರು ಪ್ರೀತಿಸಿ ವಿವಾಹದ ನಂತರ ಮೂರ್ನಾಡಿನ ಗಾಂಧಿನಗರದಲ್ಲಿ ವಾಸವಾಗಿದ್ದರು.
ಕೋಲ್ಕತ್ತಾ : ಟಿ20 ವಿಶ್ವಕಪ್ನ ಸೂಪರ್ 8 ಪಂದ್ಯದಲ್ಲಿ ಭಾರತ ತಂಡ ಹೀನಾಯ ಸೋಲು ಕಂಡಿದೆ. ದಕ್ಷಿಣ ಆಫ್ರಿಕಾ ನೀಡಿದ್ದ…
ಬೆಂಗಳೂರು : ಈ ವರ್ಷ ರಾಜ್ಯದಲ್ಲಿ ಬೇಸಿಗೆಯ ಬಿಸಿಲು ಸಾಮಾನ್ಯಕ್ಕಿಂತ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD)…
ಬೆಂಗಳೂರು : ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಅವರು ಹೂಡಿರುವ ಮಾನಹಾನಿ ಪ್ರಕರಣವನ್ನು ರದ್ದುಗೊಳಿಸುವಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ…
ಬೆಂಗಳೂರು : ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) 608 ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಇದು…
ಬೆಂಗಳೂರು : ಸಿಎಂ ಸ್ಥಾನ ಬದಲಾವಣೆ, ಡಿಸಿಎಂ ದಿಲ್ಲಿ ಪ್ರವಾಸ, ಹೈಕಮಾಂಡ್ ಭೇಟಿ ಹೀಗೆ ಹೇಳಿಕೆಗಳನ್ನು ನೀಡುತ್ತಿರುವ ಕಾಂಗ್ರೆಸ್ ಶಾಸಕರು…
ಹೊಸದಿಲ್ಲಿ : ದೆಹಲಿಯನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನದ ಐಎಸ್ಐ ಮತ್ತು ಬಾಂಗ್ಲಾದೇಶ ಮೂಲದ ಭಯೋತ್ಪಾದಕ ಗುಂಪುಗಳ ಬೆಂಬಲದೊಂದಿಗೆ ಭಯೋತ್ಪಾದಕ ಪಿತೂರಿ ನಡೆಸುತ್ತಿದ್ದ…