ಮಡಿಕೇರಿ: ಪ್ರೀತಿಸಿ ವಿವಾಹವಾಗಿದ್ದ ದಂಪತಿಯ ನಡುವೆ ಉಂಟಾದ ಕಲಹ ವಿಕೋಪಕ್ಕೆ ತೆರಳಿದ ಪರಿಣಾಮ ಪತ್ನಿ, ಚಾಕುವಿನಿಂದ ಇರಿದು ಪತಿಯನ್ನು ಕೊಲೆ ಮಾಡಿರುವ ಘಟನೆ ಭಾನುವಾರ ಮೂರ್ನಾಡುವಿನ ಗಾಂಧಿನಗರದಲ್ಲಿ ನಡೆದಿದೆ.
ಗಾಂಧಿನಗರದ ಬಾಡಿಗೆಗೆ ವಾಸವಾಗಿದ್ದ ಧರ್ಮ (26) ಕೊಲೆಯಾದವನು. ಪತ್ನಿ ಶ್ರೀಜಾ (24) ಹತ್ಯೆ ಮಾಡಿದವರು ಎಂದು ಹೇಳಲಾಗಿದೆ.
ದಂಪತಿ ಕಳೆದ 10 ತಿಂಗಳ ಹಿಂದೆ ಪ್ರೀತಿಸಿ ವಿವಾಹವಾಗಿದ್ದರು. ಭಾನುವಾರ ಬೆಳಿಗ್ಗೆ ದಂಪತಿ ನಡುವೆ ಜಗಳವಾಗಿದೆ. ಈ ವೇಳೆ ಪತ್ನಿ ಶ್ರೀಜಾ ತನ್ನ ಕೈಲಿದ್ದ ಚಾಕುವಿನಿಂದ ಆತನನ್ನು ತಿವಿದ ಪರಿಣಾಮ ಮೃತಪಟ್ಟಿದ್ದಾನೆ ಎಂದು ಹೇಳಲಾಗಿದೆ. ಆರೋಪಿ ಶ್ರೀಜಾಳನ್ನು ಪೊಲೀಸರು ಬಂಧಿಸಿದ್ದಾರೆ. ಮೃತ ಧರ್ಮ ಕುಶಾಲನಗರದ ಮೂಲನವನಾಗಿದ್ದು, ಶ್ರೀಜ ಬೈರಂಬಾಡದ ನಿವಾಸಿಯಾಗಿದ್ದಾಳೆ. ಇಬ್ಬರು ಪ್ರೀತಿಸಿ ವಿವಾಹದ ನಂತರ ಮೂರ್ನಾಡಿನ ಗಾಂಧಿನಗರದಲ್ಲಿ ವಾಸವಾಗಿದ್ದರು.
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…
ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…