ಕೊಡಗು

ಮಡಿಕೇರಿ | ಕ್ಷುಲ್ಲಕ ಕಾರಣ ; ಮಚ್ಚಿನಿಂದ ವ್ಯಕ್ತಿ ಮೇಲೆ ಹಲ್ಲೆ

ಮಡಿಕೇರಿ : ಕ್ಷುಲ್ಲಕ ಕಾರಣಕ್ಕಾಗಿ ವ್ಯಕ್ತಿ ತಲೆಗೆ ಮಚ್ಚಿನಿಂದ ಹಲ್ಲೆ ಮಾಡಿರುವ ಘಟನೆ ಸುಂಟಿಕೊಪ್ಪ ಸಮೀಪದ ಕಲ್ಲೂರು ಗ್ರಾಮದಲ್ಲಿ ಸೋಮವಾರ ರಾತ್ರಿ‌ ನಡೆದಿದೆ.

ಗ್ರಾಮದ ನಿವಾಸಿ ರವೀಂದ್ರ ಶೆಟ್ಟಿ (54)ಹಲ್ಲೆಗೊಳಗಾದವರು.

ಕಲ್ಲೂರು ಗ್ರಾಮದ ಬಸವೇಶ್ವರ ದೇವಾಲಯದಲ್ಲಿ ವಾರ್ಷಿಕ ಪೂಜೋತ್ಸವವು ಸೋಮವಾರ ಬೆಳಿಗ್ಗೆಯಿಂದ ನಡೆದಿದೆ.
ರಾತ್ರಿ ನಡೆದ ಮಂಗಳಾರತಿ ಸಮಯದಲ್ಲಿ ಸ್ಥಳೀಯ ನಿವಾಸಿ ಮೋಹನ ಎಂಬುವವನು ಕ್ಷುಲ್ಲಕ ಕಾರಣಕ್ಕೆ ರವೀಂದ್ರಶೆಟ್ಟಿಯೊಂದಿಗೆ ಜಗಳ ಮಾಡಿದ್ದಾನೆ ಎನ್ನಲಾಗಿದೆ.

ಈ ವೇಳೆ ಮಾತಿಗೆ ಮಾತು ಬೆಳೆದು ಆರೋಪಿ ಮೋಹನ ಎಂಬಾತ ರವೀಂದ್ರ ಶೆಟ್ಟಿಯ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾನೆ.

ರವೀಂದ್ರ ಶೆಟ್ಟಿ ಅವರಿಗೆ ತಲೆ ಭಾಗಕ್ಕೆ ತೀವ್ರ ಸ್ಚರೂಪದ ಪೆಟ್ಟಾಗಿದ್ದು, ಮಡಿಕೇರಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕುಶಾಲನಗರ ಡಿವೈಎಸ್ಪಿ ಗಂಗಾಧರಪ್ಪ, ಸುಂಟಿಕೊಪ್ಪ ಪಿಎಸ್ ಐ ಜಗದೀಶ್ ಮತ್ತು ಸಿಬ್ಬಂದಿಗಳು ಸ್ಥಳಕ್ಕೆ ಬೇಟಿ ನೀಡಿ ಘಟನೆ ಸಂಬಂಧ ದೂರು ದಾಖಲಿಸಿಕೊಂಡು ಆರೋಪಿಯ ಪತ್ತೆಗೆ ಬಲೆ ಬೀಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

12 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

12 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

12 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

12 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

12 hours ago