Categories: ಕೊಡಗು

ಮಡಿಕೇರಿ: ಅನಧಿಕೃತ ಲಾಟರಿ ಹಾಗೂ ಮಟ್ಕಾ ಹಾವಳಿ ನಿಯಂತ್ರಿಸಲು ಹೆಚ್ಚುವರಿ ಜಿಲ್ಲಾಧಿಕಾರಿ ಸೂಚನೆ

ಮಡಿಕೇರಿ: ಜಿಲ್ಲೆಯಲ್ಲಿ ಅನಧಿಕೃತ ಲಾಟರಿ ಹಾಗೂ ಮಟ್ಕಾ ಹಾವಳಿಯನ್ನು ನಿಯಮಾನುಸಾರ ನಿಯಂತ್ರಿಸುವ ಸಂಬಂಧ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಪ್ಲೈಯಿಂಗ್ ಸ್ಕ್ವಾಡ್‍ನ ಕಾರ್ಯಾಚರಣೆ ತ್ರೈಮಾಸಿಕ ಸಭೆಯು ಸೋಮವಾರ ನಡೆಯಿತು.

ನಗರದ ಹೆಚ್ಚುವರಿ ಜಿಲ್ಲಾಧಿಕಾರಿ ಅವರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿ ಜಿಲ್ಲೆಯಲ್ಲಿ ಅಕ್ರಮ ಲಾಟರಿ, ಇತರೆ ರಾಜ್ಯದ ಲಾಟರಿಗಳು, ಮಟ್ಕಾವನ್ನು ಪೂರ್ಣ ಪ್ರಮಾಣದಲ್ಲಿ ಕಡಿವಾಣ ಹಾಕುವಲ್ಲಿ ಯಶಸ್ವಿಯಾಗಬೇಕು ಎಂದರು.

ಅಕ್ರಮ ಲಾಟರಿ ಮತ್ತು ಮಟ್ಕಾ ದಂಧೆಗಳು ನಡೆಯುತ್ತಿರುವುದು ಸಾರ್ವಜನಿಕರ ಗಮನಕ್ಕೆ ಬಂದಲ್ಲಿ ಸ್ಥಳೀಯ ಪೊಲೀಸ್ ಠಾಣೆ ಅಥವಾ ಸಮಿತಿಯ ಅಧಿಕೃತ ದೂರವಾಣಿ ಸಂಖ್ಯೆ 08272-228678 ಗೆ ಮಾಹಿತಿ ನೀಡಬಹುದಾಗಿದೆ ಎಂದು ಹೇಳಿದರು.

ಅಕ್ರಮ ಲಾಟರಿ ಮತ್ತು ಮಟ್ಕಾ ದಂಧೆಯನ್ನು ನಿಯಂತ್ರಿಸಲು ಸಮಿತಿಯು ಪರಿಶೀಲನೆ ನಡೆಸಬೇಕು. ಲಾಟರಿ ಪ್ಲೈಯಿಂಗ್ ಸ್ಕ್ವಾಡ್ ಸಮಿತಿ ಕಾರ್ಯನಿರ್ವಹಿಸಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಅವರು ಹೇಳಿದರು.

ವ್ಯಾಪಾರ ಮಳಿಗೆಗಳನ್ನು ಪರಿಶೀಲನೆ ಮಾಡುವ ಸಂದರ್ಭದಲ್ಲಿ ಅಕ್ರಮ ಲಾಟರಿ ಮಾರಾಟ ನಡೆಯುತ್ತಿದೆಯೇ ಎಂಬ ಬಗ್ಗೆ ಪರಿಶೀಲಿಸಬೇಕು ಎಂದು ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಗೆ ಸಲಹೆ ಮಾಡಿದರು.

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್.ಸುಂದರರಾಜ್ ಅವರು ಮಾತನಾಡಿ ಜಿಲ್ಲೆಯಲ್ಲಿ 2023 ರ ಜನವರಿಯಿಂದ 2024 ರ ಸೆಪ್ಟೆಂಬರ್ ರವರೆಗೆ ಜಿಲ್ಲೆಯ ವಿವಿಧ ಠಾಣೆಗಳಲ್ಲಿ 49 ಅನಧಿಕೃತ ಲಾಟರಿ ಪ್ರಕರಣಗಳು ವರದಿಯಾಗಿದೆ. ಹಾಗೆಯೇ 6 ಮಟ್ಕಾ ಪ್ರಕರಣಗಳು ವರದಿಯಾಗಿದೆ ಎಂದು ಮಾಹಿತಿ ನೀಡಿದರು.

ಜಿಲ್ಲೆಯ ಅಂತರ ರಾಜ್ಯ ಗಡಿಭಾಗ ಭಾಗದಲ್ಲಿ ಪೇಪರ್ ಲಾಟರಿ ಮಾರಾಟವಾಗುವ ಸಂಭವವಿದ್ದು, ಈ ಭಾಗದಲ್ಲಿ ಹೆಚ್ಚಿನ ಪೊಲೀಸ್ ನಿಗಾ ವಹಿಸಲಾಗಿದೆ ಎಂದರು.

ಪಿಂಚಣಿ, ಸಣ್ಣ ಉಳಿತಾಯ ಮತ್ತು ಆಸ್ತಿ ಋಣ ನಿರ್ವಹಣೆ ಇಲಾಖೆಯ ಸಹಾಯಕ ನಿರ್ದೇಶಕರಾದ ಪಿ.ಸಿಂಧು ಅವರು ಹಲವು ಮಾಹಿತಿ ನೀಡಿದರು. ವಾಣಿಜ್ಯ ತೆರಿಗೆ ನಿರೀಕ್ಷಕರು ಆದ ಧನರಾಜ್, ಸಣ್ಣ ಉಳಿತಾಯ ಇಲಾಖೆಯ ಅಭಿವೃದ್ಧಿ ಅಧಿಕಾರಿ ಕುಮಾರ ಇತರರು ಇದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೊದಲ ಬಾರಿ ಗೆದ್ದವರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ: ಶಾಸಕ ಕೆ.ಹರೀಶ್‌ ಗೌಡ

ಮೈಸೂರು: ಮೊದಲ ಬಾರಿ ಗೆದ್ದವರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ ಎಂದು ಶಾಸಕ ಕೆ.ಹರೀಶ್‌ ಗೌಡ ಹೇಳಿದ್ದಾರೆ. ಈ ಕುರಿತು…

5 hours ago

ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಫಲರಾಗಿದ್ದೇವೆ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಫಲರಾಗಿದ್ದೇವೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಗ್ಯಾರಂಟಿ…

6 hours ago

ಕಾಂಗ್ರೆಸ್‌ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಅಧಿಕಾರ ಹಸ್ತಾಂತರ ವಿಚಾರದಲ್ಲಿ ರಾಜ್ಯದಲ್ಲಿ ಗೊಂದಲವಿದೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ…

6 hours ago

ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ ಮಲ್ಲಿಕಾರ್ಜುನ ಮುತ್ಯಾ

ಯಾದಗಿರಿ: ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ನಾಪತ್ತೆಯಾಗಿರುವ ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ…

6 hours ago

ಟಿ.ನರಸೀಪುರ ತಾಲ್ಲೂಕಿನಲ್ಲಿ ಚಿರತೆಗಳ ಹಾವಳಿ: ಭಯಭೀತರಾದ ಜನತೆ

ಟಿ.ನರಸೀಪುರ: ತಾಲ್ಲೂಕಿನಲ್ಲಿ ಚಿರತೆಗಳ ಹಾವಳಿ ಮಿತಿಮೀರಿದ್ದು, ಜನತೆ ಭಯಭೀತರಾಗಿದ್ದಾರೆ. ತಾಲ್ಲೂಕಿನ ಎಸ್.ಕೆಬ್ಬೆಹುಂಡಿ, ಕನ್ನಾಯಕನಹಳ್ಳಿ ಗ್ರಾಮದ ಮಧ್ಯೆ ಚಿರತೆ ಪ್ರತ್ಯಕ್ಷವಾಗಿದ್ದು, ಈ…

6 hours ago

ರಾಜಧಾನಿಯ ಮಾಲಿನ್ಯ ನಿಯಂತ್ರಣಕ್ಕೆ ನಿರ್ದಿಷ್ಟ ಮಾನದಂಡ- ಪರಿಸರ ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಂತೆ ಬೆಂಗಳೂರು ಸಹ ಮತ್ತೊಂದು ಗ್ಯಾಸ್ ಛೇಂಬರ್ ಆಗದಂತೆ ಕ್ರಮ ವಹಿಸಲು ಶೀಘ್ರವೇ ನಗರದ ಎಲ್ಲ…

6 hours ago