ಮಡಿಕೇರಿ: ಐತಿಹಾಸಿಕ ಮಡಿಕೇರಿ ದಸರಾದ ಪ್ರಮುಖ ಆಕರ್ಷಣೆಯಾದ ದಶಮಂಟಪಗಳ ಶೋಭಾಯಾತ್ರೆ ಇಂದು ರಾತ್ರಿ 10 ಗಂಟೆಗೆ ಆರಂಭವಾಗಿದ್ದು, ಮುಂಜಾನೆವರೆಗೆ ಯಾತ್ರೆ ನಡೆಯಲಿದೆ. ಈ ಮೂಲಕ ನವರಾತ್ರಿಯ ಉತ್ಸವಕ್ಕೆ ಸಂಭ್ರಮದ ತೆರೆ ಬೀಳಲಿದೆ.
ಮೈಸೂರು ದಸರಾಗೆ ತೆರೆ ಬೀಳುತ್ತಿದ್ದಂತೆ ಇತ್ತ ಬೆಳಕಿನ ದಸರಾ ಎಂದೇ ಹೆಸರಾದ ಮಡಿಕೇರಿ ದಸರಾ ಆರಂಭವಾಗುತ್ತದೆ. ಮೈಸೂರು ದಸರಾ ಸಂಜೆ ಮುಕ್ತಾಯಗೊಂಡರೆ, ಮಡಿಕೇರಿ ದಸರಾ ಮೆರವಣಿಗೆ ಆರಂಭವಾಗುವುದೇ ರಾತ್ರಿ… ಮೈಸೂರು ದಸರಾದಂತೆ ಮಡಿಕೇರಿ ದಸರಾ ಕೂಡ ಜನರ ಕಣ್ಮನ ಸೆಳೆಯುತ್ತಿದ್ದು ದಶಮಂಟಪಗಳ ಮೆರವಣಿಗೆಯನ್ನು ಕಣ್ತುಂಬಿಕೊಳ್ಳಲು ಸಹಸ್ರಾರು ಜನರು ದೂರದ ಊರುಗಳಿಂದ ಆಗಮಿಸಿದ್ದಾರೆ.
ಬೆಳಕು ಸರಿದು ಕತ್ತಲಾವರಿಸುತ್ತಿದ್ದಂತೆ ಇಡೀ ನಗರದಲ್ಲಿ ವರ್ಣರಂಜಿತ ಮಾಯಲೋಕ ಅನಾವರಣವಾಗಿದೆ. ಮತ್ತೊಂದೆಡೆ ಗಾಂಧಿ ಮೈದಾನದಲ್ಲಿ ಕಲಾಸಂಭ್ರಮ ವೇದಿಕೆಯಲ್ಲಿ ಸಂಗೀತ ರಸಮಂಜರಿಯ ಕಾರ್ಯಕ್ರಮಗಳು ದಸರಾಗೆ ಮೆರಗು ನೀಡಿವೆ.
ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹಿರಿಯೂರು ಬಳಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 5 ಲಕ್ಷ ರೂ…
ಹಾಸನ: ಚಿತ್ರದುರ್ಗ ಜಿಲ್ಲೆ ಹಿರಿಯೂರು ಬಳಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಹಾಸನದ ಚನ್ನರಾಯಪಟ್ಟಣ ಮೂಲದ ಇಬ್ಬರು ಯುವತಿಯರು ಕಣ್ಮರೆಯಾಗಿದ್ದಾರೆ.…
ಬೆಂಗಳೂರು: ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಬಳಿ ಸಂಭವಿಸಿದ ಕಂಟೇನರ್ ಹಾಗೂ ಖಾಸಗಿ ಬಸ್ ಭೀಕರ ಅಪಘಾತದಲ್ಲಿ ಮೃತಪಟ್ಟವರಿಗೆ…
ಬೆಂಗಳೂರು: ಮಧ್ಯರಾತ್ರಿಯಿಂದಲೇ ಎಲ್ಲೆಡೆ ಕ್ರಿಸ್ಮಸ್ ಸಡಗರ ಮನೆ ಮಾಡಿದೆ. ಪ್ರತಿ ವರ್ಷದಂತೆ ಈ ವರ್ಷವು ಸಹ ಕ್ರಿಸ್ಮಸ್ ಹಬ್ಬವು ನಂಬಿಕೆಯೆಂಬ…
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಗೋರ್ಲತ್ತು ಬಳಿ ತಡರಾತ್ರಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 10ಕ್ಕೂ…
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಗೋರ್ಲತ್ತು ಕ್ರಾಸ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 10ಕ್ಕೂ ಹೆಚ್ಚು ಮಂದಿ ಸಜೀವ…