ಮಡಿಕೇರಿ: ಐತಿಹಾಸಿಕ ಮಡಿಕೇರಿ ದಸರಾದ ಪ್ರಮುಖ ಆಕರ್ಷಣೆಯಾದ ದಶಮಂಟಪಗಳ ಶೋಭಾಯಾತ್ರೆ ಇಂದು ರಾತ್ರಿ 10 ಗಂಟೆಗೆ ಆರಂಭವಾಗಿದ್ದು, ಮುಂಜಾನೆವರೆಗೆ ಯಾತ್ರೆ ನಡೆಯಲಿದೆ. ಈ ಮೂಲಕ ನವರಾತ್ರಿಯ ಉತ್ಸವಕ್ಕೆ ಸಂಭ್ರಮದ ತೆರೆ ಬೀಳಲಿದೆ.
ಮೈಸೂರು ದಸರಾಗೆ ತೆರೆ ಬೀಳುತ್ತಿದ್ದಂತೆ ಇತ್ತ ಬೆಳಕಿನ ದಸರಾ ಎಂದೇ ಹೆಸರಾದ ಮಡಿಕೇರಿ ದಸರಾ ಆರಂಭವಾಗುತ್ತದೆ. ಮೈಸೂರು ದಸರಾ ಸಂಜೆ ಮುಕ್ತಾಯಗೊಂಡರೆ, ಮಡಿಕೇರಿ ದಸರಾ ಮೆರವಣಿಗೆ ಆರಂಭವಾಗುವುದೇ ರಾತ್ರಿ… ಮೈಸೂರು ದಸರಾದಂತೆ ಮಡಿಕೇರಿ ದಸರಾ ಕೂಡ ಜನರ ಕಣ್ಮನ ಸೆಳೆಯುತ್ತಿದ್ದು ದಶಮಂಟಪಗಳ ಮೆರವಣಿಗೆಯನ್ನು ಕಣ್ತುಂಬಿಕೊಳ್ಳಲು ಸಹಸ್ರಾರು ಜನರು ದೂರದ ಊರುಗಳಿಂದ ಆಗಮಿಸಿದ್ದಾರೆ.
ಬೆಳಕು ಸರಿದು ಕತ್ತಲಾವರಿಸುತ್ತಿದ್ದಂತೆ ಇಡೀ ನಗರದಲ್ಲಿ ವರ್ಣರಂಜಿತ ಮಾಯಲೋಕ ಅನಾವರಣವಾಗಿದೆ. ಮತ್ತೊಂದೆಡೆ ಗಾಂಧಿ ಮೈದಾನದಲ್ಲಿ ಕಲಾಸಂಭ್ರಮ ವೇದಿಕೆಯಲ್ಲಿ ಸಂಗೀತ ರಸಮಂಜರಿಯ ಕಾರ್ಯಕ್ರಮಗಳು ದಸರಾಗೆ ಮೆರಗು ನೀಡಿವೆ.
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…
ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…
ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…
ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…