ಮಡಿಕೇರಿ : ಸರ್ಕಾರಿ ಬಸ್ವೊಂದು ನಿಯಂತ್ರಣ ತಪ್ಪಿ ಬಸ್ ನಿಲ್ದಾಣದಲ್ಲಿದ್ದ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದ್ದು, ಭಾರೀ ಅನಾಹುತ ತಪ್ಪಿದೆ.
ಮಡಿಕೇರಿಯಿಂದ ಸುಳ್ಯಕ್ಕೆ ತೆರಳಬೇಕಿದ್ದ ಬಸ್ ನಿಲ್ದಾಣದಲ್ಲೇ ಮುಂಭಾಗದಲ್ಲಿದ್ದ ಕಂಬಕ್ಕೆ ಡಿಕ್ಕಿಯಾಗಿದೆ. ಮುಂಬದಿ ಯಾರೂ ಪ್ರಯಾಣಿಕರು ಇಲ್ಲದರಿಂದ ಅನಾಹುತ ತಪ್ಪಿದೆ. ಜೊತೆಗೆ ಕಂಬ ಇಲ್ಲದೇ ಹೋಗಿದ್ದರೆ ಇತರ ಬಸ್ಗೆ ಕಾಯುತ್ತಿದ್ದ ಮತ್ತು ನಿಲ್ದಾಣದಲ್ಲಿ ಕುಳಿತಿದ್ದ ಹತ್ತಾರು ಪ್ರಯಾಣಿಕರ ಜೀವಕ್ಕೆ ಅಪಾಯ ಸಂಭವಿಸುವ ಸಾಧ್ಯತೆ ಇತ್ತು. ಸದ್ಯ ಕಂಬ ಇದ್ದಿದ್ದರಿಂದ ಭಾರೀ ಅನಾಹುತ ತಪ್ಪಿದ್ದು, ಬಸ್ನ ಬ್ರೇಕ್ ವಿಫಲಗೊಂಡಿದ್ದೇ ಘಟನೆಗೆ ಕಾರಣ ಎನ್ನಲಾಗಿದೆ. ಘಟನೆಯಿಂದ ಬಸ್ನ ಮುಂಬದಿ ಜಖಂಗೊಂಡಿದೆ.




