ಮಡಿಕೇರಿ: ಅಕ್ಟೋಬರ್.12ರಂದು ಮಡಿಕೇರಿ ಹಾಗೂ ಗೋಣಿಕೊಪ್ಪದಲ್ಲಿ ಮಂಟಪಗಳ ಶೋಭಾಯಾತ್ರೆ ನಡೆಯಲಿದೆ.
ವಿಜಯದಶಮಿ ದಿನ ಮಂಟಪಗಳ ಶೋಭಾಯಾತ್ರೆ ಸುಸೂತ್ರವಾಗಿ ನಡೆಯಲು ಸುಮಾರು 2000ಕ್ಕೂ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ.
ಈ ಬಗ್ಗೆ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಮಾಹಿತಿ ನೀಡಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಸರ್ಪಗಾವಲು ಇರಲಿದೆ ಎಂದು ಹೇಳಿದ್ದಾರೆ.
ಇನ್ನು ಕಳೆದ ಬಾರಿ ನಡೆದ ಸಣ್ಣಪುಟ್ಟ ಲೋಪಗಳನ್ನು ಈ ಬಾರಿ ಸರಿಪಡಿಸಿಕೊಂಡು ಹೋಗುವ ನಿಟ್ಟಿನಲ್ಲಿ ಪೊಲೀಸರು ಕಾರ್ಯ ನಿರ್ವಹಿಸಲಿದ್ದಾರೆ.
ಮಂಜಿನ ನಗರಿ ಮಡಿಕೇರಿ ದಸರಾಗೆ 1.5 ಲಕ್ಷ ಜನ ಆಗಮಿಸುವ ನಿರೀಕ್ಷೆಯಿದ್ದು, ಮಹಿಳೆಯರು ಹಾಗೂ ಮಕ್ಕಳ ರಕ್ಷಣೆಗೆ ಹೆಚ್ಚಿನ ನಿಗಾ ವಹಿಸಲಾಗುತ್ತದೆ.
ಇನ್ನು ಗೋಣಿಕೊಪ್ಪ ದಸರಾದಲ್ಲಿ ಹೆಚ್ಚು ಜನ ಸೇರುವುದರಿಂದ ಸಂಚಾರ ವ್ಯವಸ್ಥೆಯಲ್ಲಿ ನಿಯಂತ್ರಣ ಮಾಡಲಾಗುವುದು. ಈ ವ್ಯವಸ್ಥೆಯ ಬದಲಾವಣೆಗಾಗಿ 11 ಕಡೆಗಳಲ್ಲಿ ಚೆಕ್ಪೋಸ್ಟ್ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಆಯಾಯ ಕಟ್ಟುನಿಟ್ಟಿನ ಸ್ಥಳಗಳಲ್ಲಿ ಪೊಲೀಸರು ಗಸ್ತು ತಿರುಗಲಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರ ವಹಿಸಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…
ಮಂಡ್ಯ: ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಭಾಗದ ರೈತರನ್ನು ಆರ್ಥಿಕವಾಗಿ ಅಭಿವೃದ್ಧಿ ಮಾಡಲು ಮಂಡ್ಯದ ವಿ.ಸಿಫಾರಂನಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು…
ಬೆಂಗಳೂರು: ಆರ್.ಅಶೋಕ್ ಅವರನ್ನು ವಿಪಕ್ಷ ನಾಯಕನ ಸ್ಥಾನದಿಂದ ಇಳಿಸದೇ ಹೋದರೆ ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿ ಇರುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್…
ನವದೆಹಲಿ: ಭಾರತ-ರಷ್ಯಾ ಉಭಯ ದೇಶಗಳ ನಡುವೆ ನಡೆದ ದ್ವಿಪಕ್ಷೀಯ ಮಾತುಕತೆ ವೇಳೆ ಹಲವಾರು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ನವದೆಹಲಿಯ…
ಬೆಂಗಳೂರು: ನಾನು ನನ್ನ ವಾಚ್ ವಿಚಾರವಾಗಿ ಲೋಕಾಯುಕ್ತ ಸೇರಿದಂತೆ ಎಲ್ಲೆಲ್ಲಿ ಮಾಹಿತಿ ನೀಡಬೇಕೋ, ಎಲ್ಲಾ ನೀಡಿದ್ದೇನೆ. ನಾನು ಈ ವಿಚಾರದಲ್ಲಿ…