ಮಡಿಕೇರಿ: ಅಕ್ಟೋಬರ್.12ರಂದು ಮಡಿಕೇರಿ ಹಾಗೂ ಗೋಣಿಕೊಪ್ಪದಲ್ಲಿ ಮಂಟಪಗಳ ಶೋಭಾಯಾತ್ರೆ ನಡೆಯಲಿದೆ.
ವಿಜಯದಶಮಿ ದಿನ ಮಂಟಪಗಳ ಶೋಭಾಯಾತ್ರೆ ಸುಸೂತ್ರವಾಗಿ ನಡೆಯಲು ಸುಮಾರು 2000ಕ್ಕೂ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ.
ಈ ಬಗ್ಗೆ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಮಾಹಿತಿ ನೀಡಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಸರ್ಪಗಾವಲು ಇರಲಿದೆ ಎಂದು ಹೇಳಿದ್ದಾರೆ.
ಇನ್ನು ಕಳೆದ ಬಾರಿ ನಡೆದ ಸಣ್ಣಪುಟ್ಟ ಲೋಪಗಳನ್ನು ಈ ಬಾರಿ ಸರಿಪಡಿಸಿಕೊಂಡು ಹೋಗುವ ನಿಟ್ಟಿನಲ್ಲಿ ಪೊಲೀಸರು ಕಾರ್ಯ ನಿರ್ವಹಿಸಲಿದ್ದಾರೆ.
ಮಂಜಿನ ನಗರಿ ಮಡಿಕೇರಿ ದಸರಾಗೆ 1.5 ಲಕ್ಷ ಜನ ಆಗಮಿಸುವ ನಿರೀಕ್ಷೆಯಿದ್ದು, ಮಹಿಳೆಯರು ಹಾಗೂ ಮಕ್ಕಳ ರಕ್ಷಣೆಗೆ ಹೆಚ್ಚಿನ ನಿಗಾ ವಹಿಸಲಾಗುತ್ತದೆ.
ಇನ್ನು ಗೋಣಿಕೊಪ್ಪ ದಸರಾದಲ್ಲಿ ಹೆಚ್ಚು ಜನ ಸೇರುವುದರಿಂದ ಸಂಚಾರ ವ್ಯವಸ್ಥೆಯಲ್ಲಿ ನಿಯಂತ್ರಣ ಮಾಡಲಾಗುವುದು. ಈ ವ್ಯವಸ್ಥೆಯ ಬದಲಾವಣೆಗಾಗಿ 11 ಕಡೆಗಳಲ್ಲಿ ಚೆಕ್ಪೋಸ್ಟ್ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಆಯಾಯ ಕಟ್ಟುನಿಟ್ಟಿನ ಸ್ಥಳಗಳಲ್ಲಿ ಪೊಲೀಸರು ಗಸ್ತು ತಿರುಗಲಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರ ವಹಿಸಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಮೈಸೂರು: ಆದಾಯಕ್ಕಿಂತ ಹೆಚ್ಚು ಹಣ ಸಂಪಾದಿಸಿದ್ದಾರೆ ಎಂಬ ಆರೋಪದ ಮೇರೆಗೆ ಲೋಕಾಯುಕ್ತ ಪೊಲೀಸರು ಏಕಕಾಲದಲ್ಲಿ ಏಳು ಕಡೆ ದಾಳಿ ನಡೆಸಿದ್ದಾರೆ.…
ಸರಗೂರು: ಬಹುರ್ದೆಸೆಗೆಂದು ಬಯಲಿಗೆ ತೆರಳಿದ್ದ ವ್ಯಕ್ತಿಯ ಮೇಲೆ ಕಾಡಾನೆಯೊಂದು ದಾಳಿ ನಡೆಸಿದ ಪರಿಣಾಮ ವ್ಯಕ್ತಿಯ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು…
ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ಅರಸಿನಕೆರೆ ಗ್ರಾಮದಲ್ಲಿ ವಾಲ್ಮೀಕಿ ಭವನ ನಿರ್ಮಾಣವಾಗಿ ಎರಡು ವರ್ಷ ಕಳೆದಿದ್ದರೂ ಉದ್ಘಾಟನೆಯಾಗದೇ ಇರುವುದರಿಂದ ಸಾರ್ವಜನಿಕರು…
ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಬಾಳೆಕೆರೆ ಗ್ರಾಮದಲ್ಲಿ ರಸ್ತೆ ಹಾಳಾಗಿದ್ದು, ಮಳೆಗಾಲದಲ್ಲಿ ಗ್ರಾಮಸ್ಥರು ಓಡಾಡಲು ಸಾಧ್ಯವಾಗುತ್ತಿಲ್ಲ. ಗ್ರಾಮದ ಹೊಸ ಬಡಾವಣೆಗಳಿಗೆ…
ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಸಂಚರಿಸುವ ಕೆಲವು ಸಾರಿಗೆ ನಿಗಮದ ಬಸ್ಸುಗಳು ಹಾಗೂ ಮೈಸೂರು ಮತ್ತು, ಬೆಂಗಳೂರು ನಗರ ಸಾರಿಗೆ ಬಸ್ಸುಗಳಲ್ಲಿ…
ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಗಳು ಸಮೀಪಿಸುತ್ತಿದ್ದು, ಅದಕ್ಕೆ ಪೂರಕವಾಗಿ ಸಂಜೆ ೭ರಿಂದ ರಾತ್ರಿ ೯ ರವರೆಗೆ ಎಲ್ಲ ಮನೆಗಳಲ್ಲೂ ಟಿವಿ…