ಮಡಿಕೇರಿ: ಅಕ್ಟೋಬರ್.12ರಂದು ಮಡಿಕೇರಿ ಹಾಗೂ ಗೋಣಿಕೊಪ್ಪದಲ್ಲಿ ಮಂಟಪಗಳ ಶೋಭಾಯಾತ್ರೆ ನಡೆಯಲಿದೆ.
ವಿಜಯದಶಮಿ ದಿನ ಮಂಟಪಗಳ ಶೋಭಾಯಾತ್ರೆ ಸುಸೂತ್ರವಾಗಿ ನಡೆಯಲು ಸುಮಾರು 2000ಕ್ಕೂ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ.
ಈ ಬಗ್ಗೆ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಮಾಹಿತಿ ನೀಡಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಸರ್ಪಗಾವಲು ಇರಲಿದೆ ಎಂದು ಹೇಳಿದ್ದಾರೆ.
ಇನ್ನು ಕಳೆದ ಬಾರಿ ನಡೆದ ಸಣ್ಣಪುಟ್ಟ ಲೋಪಗಳನ್ನು ಈ ಬಾರಿ ಸರಿಪಡಿಸಿಕೊಂಡು ಹೋಗುವ ನಿಟ್ಟಿನಲ್ಲಿ ಪೊಲೀಸರು ಕಾರ್ಯ ನಿರ್ವಹಿಸಲಿದ್ದಾರೆ.
ಮಂಜಿನ ನಗರಿ ಮಡಿಕೇರಿ ದಸರಾಗೆ 1.5 ಲಕ್ಷ ಜನ ಆಗಮಿಸುವ ನಿರೀಕ್ಷೆಯಿದ್ದು, ಮಹಿಳೆಯರು ಹಾಗೂ ಮಕ್ಕಳ ರಕ್ಷಣೆಗೆ ಹೆಚ್ಚಿನ ನಿಗಾ ವಹಿಸಲಾಗುತ್ತದೆ.
ಇನ್ನು ಗೋಣಿಕೊಪ್ಪ ದಸರಾದಲ್ಲಿ ಹೆಚ್ಚು ಜನ ಸೇರುವುದರಿಂದ ಸಂಚಾರ ವ್ಯವಸ್ಥೆಯಲ್ಲಿ ನಿಯಂತ್ರಣ ಮಾಡಲಾಗುವುದು. ಈ ವ್ಯವಸ್ಥೆಯ ಬದಲಾವಣೆಗಾಗಿ 11 ಕಡೆಗಳಲ್ಲಿ ಚೆಕ್ಪೋಸ್ಟ್ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಆಯಾಯ ಕಟ್ಟುನಿಟ್ಟಿನ ಸ್ಥಳಗಳಲ್ಲಿ ಪೊಲೀಸರು ಗಸ್ತು ತಿರುಗಲಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರ ವಹಿಸಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಬೆಂಗಳೂರು: ಮುಂಬರುವ 2028ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗಿರುವ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ…
ಇಂಪಾಲ: ಮಣಿಪುರದಲ್ಲಿ ಮನೆಯೊಂದರ ಮೇಲೆ ಬಾಂಬ್ ದಾಳಿ ನಡೆದಿದ್ದು, ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಮಣಿಪುರದ ಬಿಷ್ಣುಪುರ ಜಿಲ್ಲೆಯ…
ಹುಬ್ಬಳ್ಳಿ: ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂಬ ಸಚಿವ ಜಮೀರ್ ಅಹ್ಮಮದ್ ಖಾನ್ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.…
ಬೆಂಗಳೂರು: ನಮ್ಮ ಅಣ್ಣ ಸಿಎಂ ಆಗಬೇಕು ಎಂಬ ಆಸೆ ಇದೆ. ಆದರೆ ಇವತ್ತೇ ಸಿಎಂ ಆಗಬೇಕು ಅಂತೇನಿಲ್ಲ. ಇನ್ನೂ ಸಮಯವಿದೆ…
ಮಡಿಕೇರಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಏಪ್ರಿಲ್.17ರಂದು ಕೊಡಗು ಜಿಲ್ಲೆಗೆ ಭೇಟಿ ನೀಡುವ ಸಾಧ್ಯತೆ ಇದ್ದು, ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಸಂಬಂಧಪಟ್ಟ…
ಟೆಹರಾನ್: ಮಧ್ಯಪ್ರಾಚ್ಯದಲ್ಲಿ ಯುದ್ಧದ ಜ್ವಾಲೆ ಮತ್ತಷ್ಟು ಭೀಕರ ಸ್ವರೂಪ ಪಡೆದುಕೊಂಡಿದೆ. ಇಸ್ರೇಲ್ ಈಗ ಇರಾನ್ ನಾಗರಿಕರಿಗೆ ಅತ್ಯಂತ ಗಂಭೀರವಾದ ಎಚ್ಚರಿಕೆಯನ್ನು…