ಮಡಿಕೇರಿ: ಅಕ್ಟೋಬರ್.4ರಿಂದ 12ರವರೆಗೆ ಮಡಿಕೇರಿ ದಸರಾ ನಡೆಯಲಿದ್ದು, ಕಾರ್ಯಕ್ರಮಗಳಿಗೆ ಭಾಗವಹಿಸಲು ಕಲಾವಿದರಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಮಡಿಕೇರಿ ದಸರಾ ಸಾಂಸ್ಕೃತಿಕ ಸಮಿತಿ ವತಿಯಿಂದ ಅಕ್ಟೋಬರ್.4 ರಿಂದ 12ರವರೆಗೆ ನಗರದ ಗಾಂಧಿ ಮೈದಾನದಲ್ಲಿ ಆಯೋಜಿತ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರು, ಕಲಾತಂಡಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಕಲಾವಿದರು, ಕಲಾತಂಡಗಳು ಸೆಪ್ಟೆಂಬರ್ 2ರ ಒಳಗಾಗಿ ಅರ್ಜಿ ಮಾಹಿತಿಯನ್ನು ಮೇಲ್ ಮಾಡುವಂತೆ ಸೂಚಿಸಲಾಗಿದೆ.
ನಿಗದಿತ ದಿನಾಂಕದ ನಂತರ ಬಂದ ಅರ್ಜಿಗಳನ್ನು ಪರಿಶೀಲಿಸಲಾಗುವುದಿಲ್ಲ ಎಂದು ಮಡಿಕೇರಿ ದಸರಾ ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ಅನಿಲ್ ಎಚ್.ಟಿ ತಿಳಿಸಿದ್ದಾರೆ.
ಮಹಿಳಾ ದಸರಾ, ಮಕ್ಕಳ ದಸರಾ, ಜಾನಪದ ದಸರಾಗಳಿಗೆ ಕಾರ್ಯಕ್ರಮ ನೀಡುವವರು ಅರ್ಜಿಯಲ್ಲಿ ಈ ಬಗ್ಗೆ ನಮೂದಿಸಬೇಕು. ಒಂದು ಕಲಾತಂಡಕ್ಕೆ ಒಂದು ಪ್ರದರ್ಶನಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.
ಸೋಲೋ ನೃತ್ಯ ಹಾಗೂ ಸೋಲೋ ಹಾಡಿಗೆ ಅವಕಾಶವಿಲ್ಲ. ನೃತ್ಯತಂಡದಲ್ಲಿ ಕನಿಷ್ಠ 4 ಮಂದಿ ಇರಬೇಕು. ಕಲಾವಿದರ ಆಯ್ಕೆಯ ಅಂತಿಮ ತೀರ್ಮಾನ ದಸರಾ ಸಾಂಸ್ಕೃತಿಕ ಸಮಿತಿಯದ್ದಾಗಿರುತ್ತದೆ ಎಂದು ಮಾಹಿತಿ ನೀಡಿದ್ದಾರೆ.
ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…
ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…
ಲಕ್ಷ್ಮೀಕಾಂತ್ ಕೊಮಾರಪ್ಪ ಮಣ್ಣಿನೊಂದಿಗೆ ಯುವಜನರ ನಂಟು ಬೆಸೆಯುವ ಉದ್ದೇಶ ನಾಳೆ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಗದ್ದೆ ನಾಟಿ…
ಎಂ.ನಾರಾಯಣ ತಿ.ನರಸೀಪುರ: ಹೂ ಕಚ್ಚದ ಕಡಲೆಕಾಯಿ, ಸೂರ್ಯಕಾಂತಿ, ಮುಸುಕಿನ ಜೋಳದ ಬೆಳೆಗಳು ತಿ.ನರಸೀಪುರ: ತಾಲ್ಲೂಕಿನಲ್ಲಿ ಸಮರ್ಪಕ ಮಳೆ ಬಾರದಿರುವುದರಿಂದ ರೈತರು…
ಭೇರ್ಯ ಮಹೇಶ್ ಭೇರ್ಯ: ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಮಳಿಗೆಗಳು ತೆರೆಯದೆ ಪ್ರಯಾಣಿಕರಿಗೆ ಸಮಸ್ಯೆ ಭೇರ್ಯ: ಭೇರ್ಯ ಗ್ರಾಮದ ಬಸ್ ನಿಲ್ದಾಣದಲ್ಲಿ…