ಮಡಿಕೇರಿ : ದಸರಾ ಕಾರ್ಯಕ್ರಮದಲ್ಲಿ ರಾಜಾಸೀಟ್ ಉದ್ಘಾಟನೆ

ಆಂದೋಲನ’ ದಿನಪತ್ರಿಕೆ ಸಂದರ್ಶನದಲ್ಲಿ ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕ ಡಾ. ಯತೀಶ್ ಉಳ್ಳಾಲ್ ವಾಹಿತಿ

ಸಂದರ್ಶನ: ನವೀನ್ ಡಿಸೋಜ
ಮಡಿಕೇರಿ: ದಸರಾ ಕಾರ್ಯಕ್ರಮದಲ್ಲಿ ನಗರದ ಪ್ರವಾಸಿ ತಾಣ ಗ್ರೇಟರ್ ರಾಜಾಸೀಟ್ ಅನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ನಾಗೇಶ್ ಉದ್ಘಾಟಿಸಲಿದ್ದಾರೆ ಎಂದು ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕ ಡಾ. ಯತೀಶ್ ಉಳ್ಳಾಲ್ ತಿಳಿಸಿದರು.
ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ‘ಆಂದೋಲನ’ ದಿನಪತ್ರಿಕೆ ನಡೆದ ಸಂದರ್ಶನದಲ್ಲಿ ವಾತನಾಡಿದ ಅವರು, ಪ್ರವಾಸೋದ್ಯಮದ ದಿನದ ಕಾರ್ಯಕ್ರಮಗಳು ಹಾಗೂ ಜಿಲ್ಲೆಯ ಪ್ರವಾಸಿ ತಾಣಗಳ ಸ್ಥಿತಿಗತಿ ಬಗ್ಗೆ ವಿವರವಾಗಿ ವಾಹಿತಿ ನೀಡಿದರು.

ಪ್ರಶ್ನೆ: ಪ್ರವಾಸಿಗರ ಸ್ವರ್ಗ ಕೊಡಗು ಜಿಲ್ಲೆಯಲ್ಲಿ ಪ್ರವಾಸೋದ್ಯಮ ದಿನವನ್ನು ಹೇಗೆ ಆಚರಿಸಲಾಗುತ್ತದೆ?

ಡಾ.ಯತೀಶ್ ಉಳ್ಳಾಲ್: ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ವಿವಿಧ ಸಂಘಟನೆಗಳ ಸಹಕಾರದೊಂದಿಗೆ ಸೆ.೨೭ರಂದು ಬೆಳಿಗ್ಗೆ ೬.೩೦ ಗದ್ದುಗೆಯಿಂದ ರಾಜಾಸೀಟ್‌ವರೆಗೆ ಜಾಥಾ ನಡೆಸುವ ಮೂಲಕ ಪ್ಲಾಸ್ಟಿಕ್ ಮುಕ್ತ ನಗರವನ್ನಾಗಿ ವಾಡುವ ನಿಟ್ಟಿನಲ್ಲಿ ಅರಿವು ಕಾರ್ಯಕ್ರಮ ನಡೆಸಲಾಗುತ್ತದೆ. ಅಂದು ನೀರಿನ ಬಾಟಲ್ ವಿಲೇವಾರಿಗೊಳಿಸುವ ಸಾಧನವನ್ನು ಉದ್ಘಾಟಿಸಲಾಗುತ್ತದೆ. ಬೆಳಿಗ್ಗೆ ೧೦.೩೦ಕ್ಕೆ ಮಯೂರ ವ್ಯಾಲಿವ್ಯೆ ಹೊಟೇಲ್ ಸಭಾಂಗಣದಲ್ಲಿ ಕೊಡಗಿನಲ್ಲಿ ಪ್ರವಾಸೋದ್ಯಮ ಪುನಶ್ಚೇತನ ಸಂಬಂಧ ಸಂವಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಪ್ರಶ್ನೆ: ನಾಡಹಬ್ಬ ದಸರಾ ಪ್ರವಾಸೋದ್ಯಮದ ಮೇಲೆ ಹೇಗೆ ಪರಿಣಾಮ ಬೀರಲಿದೆ?
ಉತ್ತರ: ದಸರಾ ಅಂಗವಾಗಿ ಸಿಂಗಲ್ ಟಿಕೆಟ್ ಪರ್ ಮೆನಿ ಡೆಸ್ಟಿನೇಷನ್ ಯೋಜನೆ ಅನ್ವಯ ಮೈಸೂರಿಗೆ ಬರುವ ಪ್ರವಾಸಿಗರನ್ನು ಕೊಡಗಿನತ್ತ ಸೆಳೆುುಂವ ಪ್ರುಂತ್ನ ವಾಡಲಾಗಿದೆ. ಪ್ರವಾಸಿಗರು ಆನ್‌ಲೈನ್‌ನಲ್ಲಿ ಒನ್ ಟಿಕೆಟ್ ಇನ್ ಪೋರ್ಟಲ್ ಮೂಲಕ ಟಿಕೆಟ್ ಪಡೆದಲ್ಲಿ ೨೫ಕ್ಕೂ ಹೆಚ್ಚು ತಾಣಗಳಿಗೆ ನೇರವಾಗಿ ಪ್ರವೇಶಿಸಬಹುದಾಗಿದೆ. ಪ್ರವಾಸಿ ತಾಣಗಳಲ್ಲಿ ಸರತಿ ಸಾಲಿನಲ್ಲಿ ನಿಲ್ಲಬೇಕಾದ ಅನಿವಾರ್ಯತೆ ಇರುವುದಿಲ್ಲ. ರಾಜಾಸೀಟ್, ಅಬ್ಬೀ ಫಾಲ್ಸ್, ಇರ್ಪು ಫಾಲ್ಸ್, ದುಬಾರೆ, ನಿಸರ್ಗಧಾಮ ಸೇರಿದಂತೆ ಎಲ್ಲಾ ಭಾಗಗಳಿಗೆ ಪ್ರವೇಶ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಮೊಬೈಲ್‌ಗೆ ಬರುವ ಟಿಕೆಟ್ ತೋರಿಸಿ ಪ್ರವೇಶ ಪಡೆಯಬಹುದಾಗಿದೆ.

ಪ್ರಶ್ನೆ: ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಯಾವ ಕಾರ್ಯಕ್ರಮಗಳು ನಡೆಯುತ್ತಿದೆ ?
ಉತ್ತರ: ಗ್ರೇಟರ್ ರಾಜಾಸೀಟ್ ಕಾಮಗಾರಿ ಈಗಾಗಲೇ ಪೂರ್ಣಗೊಂಡಿದ್ದು, ದಸರಾ ಕಾರ್ಯಕ್ರಮದಲ್ಲಿ ಉಸ್ತುವಾರಿ ಸಚಿವರು ಉದ್ಘಾಟಿಸಲಿದ್ದಾರೆ. ಅಬ್ಬಿ ಫಾಲ್ಸ್‌ನಲ್ಲಿ ಪಾರ್ಕಿಂಗ್, ಟಿಕೆಟ್ ಕೌಂಟರ್ ಅಭಿವೃದ್ಧಿ ವಾಡಲಾಗಿದೆ. ದುಬಾರೆಯಲ್ಲಿ ಪಾರ್ಕಿಂಗ್ ಏರಿಯಾ ಅಭಿವೃದ್ಧಿ ಜೊತೆಗೆ ಫೆನ್ಸಿಂಗ್ ಕೆಲಸ ನಡೆಯುತ್ತಿದೆ. ಚೇಲಾವರ ಫಾಲ್ಸ್‌ನಲ್ಲಿ ವೀಕ್ಷಣಾ ಗೋಪುರ ನಿರ್ವಾಣ ವಾಡಲು ಚಿಂತನೆ ನಡೆಸಲಾಗಿದ್ದು, ಶೀಘ್ರದಲ್ಲಿ ಕಾಮಗಾರಿ ಆರಂಭಿಸಲಾಗುತ್ತದೆ. ಮೆಲ್ಲಳ್ಳಿ ಜಲಪಾತದ ಬಳಿಯೂ ಇಂಟರ್‌ಲಾಕ್ ಅಳವಡಿಕೆ, ವೀಕ್ಷಣ ಗೋಪುರ ನಿರ್ವಾಣ ಸೇರಿದಂತೆ ಅಭಿವೃದ್ಧಿ ವಾಡಲು ಚಿಂತಿಸಲಾಗಿದೆ.

ಪ್ರಶ್ನೆ: ಕೂರ್ಗ್ ವಿಲೇಜ್ ಉದ್ಘಾಟನೆಗೊಂಡರೂ ಪ್ರಸಿದ್ಧಿ ಪಡೆಯುತ್ತಿಲ್ಲವೆಕೆ?
ಉತ್ತರ: ಕೂರ್ಗ್ ವಿಲೇಜ್‌ನಲ್ಲಿ ಅಭಿವೃದ್ಧಿ ಕಾರ್ಯ ನಡೆಸಿ ಉದ್ಘಾಟಿಸಲಾಗಿದೆ. ನಗರದ ಒಳಭಾಗದಲ್ಲಿ ಇರುವುದರಿಂದ ಅಷ್ಟಾಗಿ ಪ್ರವಾಸಿಗರು ಭೇಟಿ ನೀಡುತ್ತಿಲ್ಲ. ಪ್ರವಾಸೋದ್ಯಮ ಇಲಾಖೆ ಅಭಿವೃದ್ಧಿಪಡಿಸಿದರೂ ಅದರ ನಿರ್ವಹಣೆ ಹೊಣೆ ತೋಟಗಾರಿಕೆ ಇಲಾಖೆಯಲ್ಲಿದೆ. ಪ್ರವಾಸೋದ್ಯಮ ದಿನಾಚರಣೆಯಂದು ಅಲ್ಲಿಗೂ ಪ್ರಚಾರ ಒದಗಿಸುವುದರೊಂದಿಗೆ ದಸರಾದಲ್ಲಿ ಲೈಟಿಂಗ್ಸ್ ಮೂಲಕ ಪ್ರವಾಸಿಗರನ್ನು ಆಕರ್ಷಿಸುವಂತೆ ವಾಡಲಾಗುವುದು.

ಪ್ರಶ್ನೆ: ಕೊಡಗಿನ ಸಂಸ್ಕೃತಿ ಬಿಂಬಿಸುವ ಕೊಡವ ಹೆರಿಟೇಜ್ ಸೆಂಟರ್ ಕಾಮಗಾರಿ ಪೂರ್ಣಗೊಳ್ಳುವುದು ಯಾವಾಗ?ಉತ್ತರ: ಕೊಡವ ಹೆರಿಟೇಜ್ ಸೆಂಟರ್ ಐನ್‌ಮನೆ ಮಾದರಿಯಲ್ಲಿ ನಿರ್ಮಿಸಲಾಗುತ್ತಿದೆ. ಈ ಗಾಗಲೇ ೩.೪೫ ಕೋಟಿ ರೂ. ಅನುದಾನ ಬಳಸಿಕೊಳ್ಳಲಾಗಿದೆ. ೋ ಯೋಜನೆ ಪೂರ್ಣಗೊಳ್ಳಲು ಒಟ್ಟು ೪.೯೫ ಕೋಟಿ ರೂ. ಅನುದಾನ ಬೇಕಿದ್ದು, ಹೆಚ್ಚುವರಿ ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಕಾಂಪೌಂಡ್, ಒಳಂಗಾಣ ವಿನ್ಯಾಸ ಸೇರಿದಂತೆ ಹಲವು ಕೆಲಸಗಳು ಬಾಕಿ ಉಳಿದಿವೆ. ಅನುದಾನ ಬಂದ ತಕ್ಷಣ ಕಾಮಗಾರಿ ಪೂರ್ಣಗೊಳಿಸಲಾಗುವುದು.
ಡಾ. ಯತೀಶ್ ಉಳ್ಳಾಲ್

andolanait

Recent Posts

ಪರಿಷತ್‌ ಚುನಾವಣೆಯಲ್ಲಿ ಕ್ರಾಸ್‌ ವೋಟ್‌ ಮಾಡಿದ ಶಾಸಕರು ಗೊತ್ತಿದೆ ; ಎಚ್‌.ಡಿ.ಕುಮಾರಸ್ವಾಮಿ

ಮೈಸೂರು : ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆದ ಚುನಾವಣೆಯಲ್ಲಿ ಜಾ.ದಳದಿಂದ ಕ್ರಾಸ್ ವೋಟ್ ಮಾಡಿದ ನಾಲ್ಕು ಜನರು ಯಾರೆಂದು ಗೊತ್ತಿದೆ.…

8 hours ago

ಮಂಡ್ಯ | ಐವರು ಅಂತರ್‌ ಜಿಲ್ಲಾ ಕಳ್ಳರ ಬಂಧನ

ಮಂಡ್ಯ : ಜಿಲ್ಲೆಯ ವಿವಿಧೆಡೆ ನಡೆದ 21 ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ 553 ಗ್ರಾಂ…

8 hours ago

ಜೂನ್‌ 21ರಂದು ನೀಟ್‌ ಮರುಪರೀಕ್ಷೆ ; ಮೈಸೂರು ಜಿಲ್ಲೆಯಲ್ಲಿ 7886 ಪರೀಕ್ಷಾರ್ಥಿಗಳ ನೋಂದಣಿ

ಮೈಸೂರು : ಜಿಲ್ಲೆಯಲ್ಲಿ ನೀಟ್ ಪರೀಕ್ಷೆಯನ್ನು ಯಾವುದೇ ಲೋಪ ಉಂಟಾಗದಂತೆ ವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಅಪರ…

8 hours ago

ನೀಟ್‌ಗಾಗಿ ಟೆಲಿಗ್ರಾಂ ನಿಷೇಧ ; ಕೇಂದ್ರದ ನಿರ್ಧಾರ ಎತ್ತಿ ಹಿಡಿದ ಕೋರ್ಟ್‌

ಹೊಸದಿಲ್ಲಿ : ನೀಟ್‌-ಯುಜಿ 2026 ಮರುಪರೀಕ್ಷೆ ಹಿನ್ನೆಲೆ ಟೆಲಿಗ್ರಾಂನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.…

9 hours ago

ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ ; ಡಾ.ಎಚ್.ಸಿ.ಮಹದೇವಪ್ಪ

ಮೈಸೂರು : ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ. ಅತ್ತು-ಕರೆದು ಅಧಿಕಾರ ಪಡೆದಿಲ್ಲ. ನನ್ನ-ಸಿದ್ದರಾಮಯ್ಯರ ನಡುವೆ ಯಾವ ವೈಮನಸ್ಸು ಇಲ್ಲ.…

10 hours ago

ಮೈಸೂರು | ಠಾಣಾ ಮಟ್ಟದಲ್ಲಿ ರೌಡಿ ಪ್ರತಿಬಂಧಕ ದಳ ಸ್ಥಾಪನೆ

ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…

18 hours ago