ಕೊಡಗು

ಈ ಬಾರಿಯ ಮಡಿಕೇರಿ ದಸರಾದಲ್ಲಿ ಜನಾರ್ಕಷಣೆ ಕಾರ್ಯಕ್ರಮ: 9ದಿನಗಳ ಪಟ್ಟಿ ಹೀಗಿದೆ

ಮಡಿಕೇರಿ : ಮಡಿಕೇರಿ ದಸರಾ ಜನೋತ್ಸವ ಪ್ರಯುಕ್ತ ಅಕ್ಟೋಬರ್ 4 ರಂದು 12 ರವರೆಗೆ ವೈವಿಧ್ಯಮಯ ಸಾಂಸ್ಕøತಿಕ ಕಾರ್ಯಕ್ರಮಗಳು ಆಯೋಜಿಸಲ್ಪಟ್ಟಿದೆ.

ಜಿಲ್ಲಾಧಿಕಾರಿ ವೆಂಕಟರಾಜಾ ಅಧ್ಯಕ್ಷತೆಯಲ್ಲಿ ನಡೆದ ಮಡಿಕೇರಿ ನಗರ ದಸರಾ ಸಮಿತಿ ಪ್ರಮುಖರ ಸಭೆಯಲ್ಲಿ ದಸರಾ ಸಾಂಸ್ಕøತಿಕ ಸಮಿತಿ ಅಧ್ಯಕ್ಷ ಅನಿಲ್ ಎಚ್.ಟಿ. ಸಾಂಸ್ಕøತಿಕ ಸಮಿತಿ ವತಿಯಿಂದ ಹಮ್ಮಿಕೊಂಡಿರುವ ವಿವಿಧ ಕಾರ್ಯಕ್ರಮಗಳ ಮಾಹಿತಿ ನೀಡಿದರು.

ಅ.4 ರಂದು ಸಂಜೆ 6 ಗಂಟೆಗೆ ಗಾಂಧಿ ಮೈದಾನದಲ್ಲಿ ಸಾಂಸ್ಕøತಿಕ ಕಾರ್ಯಕ್ರಮಗಳಿಗೆ ಚಾಲನೆ ದೊರೆಯಲಿದೆ. ಅ. 5 ರಂದು ಬೆಳಗ್ಗೆ 9.30 ಗಂಟೆಯಿಂದ ರೋಟರಿ ಮಿಸ್ಟಿ ಹಿಲ್ಸ್ ಸಹಯೋಗದಲ್ಲಿ 11 ನೇ ವರ್ಷದ ಮಕ್ಕಳ ದಸರಾ ಅಂಗವಾಗಿ ಮಕ್ಕಳ ಸಂತೆ, ಮಕ್ಕಳ ಅಂಗಡಿ, ಮಕ್ಕಳ ಮಂಟಪ, ಛದ್ಮವೇಷ ಕ್ಲೇಮಾಡೆಲಿಂಗ್ ಸ್ಪರ್ಧೆಗಳು ಆಯೋಜಿತವಾಗಿದೆ, ಅಂದು ಸಂಜೆ 6 ಗಂಟೆಯಿಂದ ಮಕ್ಕಳಿಂದಲೇ ವೈವಿಧ್ಯಮಯ ಕಾರ್ಯಕ್ರಮಗಳು ನಡೆಯಲಿದೆ.

ಅಕ್ಟೋಬರ್ 6 ರಂದು ಬೆಳಗ್ಗೆ 10 ಗಂಟೆಗೆ ಮೊದಲ ವರ್ಷದ ಕಾಫಿ ದಸರಾ ಚಾಲನೆಗೊಳ್ಳಲಿದೆ. ಕಾಫಿ ಮಂಡಳಿ, ಕರ್ನಾಟಕ ಬೆಳೆಗಾರರ ಸಂಘ, ಕೊಡಗು ಪ್ಲಾಂಟರ್ಸ್ ಅಸೋಸಿಯೇಷನ್ ತೋಟಗಾರಿಕಾ ಇಲಾಖೆ, ಕೃಷಿ ಇಲಾಖೆ, ಮೀನುಗಾರಿಕಾ ಇಲಾಖೆ, ಚೆಟ್ಟಳ್ಳಿ ತೋಟಗಾರಿಕಾ ಸಂಶೋಧನಾ ಕೇಂದ್ರ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದಲ್ಲಿ ಕಾಫಿ ದಸರಾ ಆಯೋಜಿತವಾಗಿದೆ, ಕಾಫಿ ದಸರಾ ಪ್ರಯುಕ್ತ ನಿರ್ಮಾಣಗೊಳ್ಳುವ 31 ಮಳಿಗೆಗಳಲ್ಲಿ ಕಾಫಿ, ಕೃಷಿ ಸಂಬಂಧಿತ ಪ್ರದರ್ಶನ, ಮಾರಾಟ ಮೇಳ ಇರಲಿದೆ, 11 ಗಂಟೆಯಿಂದ ಕಲಾ ಸಂಭ್ರಮ ವೇದಿಕೆಯಲ್ಲಿ ಕಾಫಿ ಮತ್ತು ಕೃಷಿ ಸಂಬಂಧಿತ ಪರಿಣಿತರಿಂದ ವಿಚಾರಸಂಕಿರಣ ಆಯೋಜಿತವಾಗಿದೆ, ಸಂಜೆ 5 ಗಂಟೆಯವರೆಗೆ ಮಳಿಗೆಗಳು ಸಾರ್ವಜನಿಕರ ಭೇಟಿಗೆ ತೆರೆದಿರುತ್ತದೆ, ಸಂಜೆ 6 ಗಂಟೆಯಿಂದ ವೈವಿಧ್ಯಮಯ ಸಾಂಸ್ಕøತಿಕ ಕಾರ್ಯಕ್ರಮಗಳು ಆಯೋಜಿತವಾಗಿದೆ.

ಅಕ್ಟೋಬರ್ 7 ರಂದು ಬೆಳಗ್ಗೆ 10 ಗಂಟೆಯಿಂದ ಕಾಫಿ ದಸರಾ ಅಂಗವಾಗಿ ವಿವಿಧ ಮಳಿಗೆಗಳು ಸಂಜೆ 5 ಗಂಟೆಯವರೆಗೆ ತೆರೆದಿರುತ್ತವೆ, ಬೆಳಗ್ಗೆ 10 ಗಂಟೆಯಿಂದ ಕಾಫಿ ಕೃಷಿ ಸಂಬಂಧಿತ ವಿಚಾರಸಂಕಿರಣಗಳು ಆಯೋಜಿಸಲ್ಪಟ್ಟಿದೆ, ಕಾಫಿ ದಸರಾವನ್ನು ಮಡಿಕೇರಿ ಕ್ಷೇತ್ರ ಶಾಸಕ ಡಾ.ಮಂತರ್ ಗೌಡ ಅವರ ಮಾರ್ಗದರ್ಶನದಲ್ಲಿ ಆಯೋಜಿಸಲಾಗುತ್ತಿದೆ ಎಂದು ಅನಿಲ್ ಸಭೆಗೆ ಮಾಹಿತಿ ನೀಡಿದರು. ಅಂದು ಸಂಜೆ 6 ಗಂಟೆಯಿಂದ ವೈವಿಧ್ಯಮಯ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿದೆ.

ಅ.8 ರಂದು ಮಂಗಳವಾರ 7 ನೇ ವರ್ಷದ ಮಹಿಳಾ ದಸರಾ ನಡೆಯಲಿದ್ದು, ವೈವಿಧ್ಯಮಯ ಮನರಂಜನಾ ಸ್ಪರ್ಧೆಗಳು ಮಹಿಳೆಯರಿಗಾಗಿ ಆಯೋಜಿತವಾಗಿದ್ದು, ಮಡಿಕೇರಿ ನಗರಸಭಾ ಸದಸ್ಯೆಯರು, ಕೊಡಗು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಮಹಿಳಾ ದಸರಾ ಆಯೋಜಿಸಲ್ಪಟ್ಟಿದೆ, ಸಂಜೆ 6 ಗಂಟೆಗೆ ಮಹಿಳೆಯರಿಂದಲೇ ವೈವಿಧ್ಯಮಯ ಕಾರ್ಯಕ್ರಮಗಳು ನಡೆಯಲಿದೆ.

ಅ.9 ರಂದು ಸಂಜೆ 6 ಗಂಟೆಯಿಂದ ವೈವಿಧ್ಯಮಯ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿದೆ.

ಅ 10 ರಂದು ಬೆಳಗ್ಗೆ 9 ಗಂಟೆಗೆ ಕೊಡಗು ಜಿಲ್ಲಾ ಜಾನಪದ ಪರಿಷತ್ ಸಹಯೋಗದಲ್ಲಿ ಜಾನಪದ ದಸರಾ ಆಯೋಜಿಸಲಾಗಿದ್ದು, ಕಲಾಜಾಥಾ, ವೈವಿಧ್ಯಮಯ ಜಾನಪದ ಕಲಾ ತಂಡಗಳ ಪ್ರದರ್ಶನ ಆಯೋಜಿತವಾಗಿದೆ, ಸಂಜೆ 6 ಗಂಟೆಗೆ ಸೋಮು ಮತ್ತು ಅಜ್ಜೇಟಿರ ಲೋಕೇಶ್ ಸಂಚಾಲಕತ್ವದಲ್ಲಿ ಯುವ ದಸರಾ ಆಯೋಜಿತವಾಗಿದೆ.

ಅ.11 ರಂದು ಆಯುಧಪೂಜಾ ಪ್ರಯುಕ್ತ ಸಂಜೆ 7 ಗಂಟೆಗೆ ರಾಜ್ಯದ ಹೆಸರಾಂತ ಗಾಯಕರಾದ ಅರ್ಜುನ್ ಜನ್ಯ ಮತ್ತು ರಾಜೇಶ್ ಕೃಷ್ಣನ್ ತಂಡದಿಂದ ಸಂಗೀತ ರಸಮಂಜರಿ ಕಾರ್ಯಕ್ರಮ ಆಯೋಜಿತವಾಗಿದೆ,
ಅ.12 ರಂದು ವಿಜಯದಶಮಿ ಹಿನ್ನೆಲೆಯಲ್ಲಿ 7 ಗಂಟೆಯಿಂದ 10 ಗಂಟೆಯವರೆಗೆ ವೈವಿಧ್ಯಮಯ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿದೆ, ರಾತ್ರಿ 10 ಗಂಟೆಯಿಂದ ಮರುದಿನ ಬೆಳಗ್ಗಿನ ಜಾವದವರೆಗೆ ರಾಜ್ಯದ ಹೆಸರಾಂತ ಸಂಗೀತ ತಂಡದಿಂದ ಸಂಗೀತ ರಸಮಂಜರಿ ನಡೆಯಲಿದೆ,
ಕಾರ್ಯಕ್ರಮ ನೀಡುವ ಕಲಾತಂಡಗಳು, ಕಲಾವಿದರಿಗೆ ಅಗತ್ಯ ಸೌಲಭ್ಯ ನೀಡುವಂತೆ ಜಿಲ್ಲಾಧಿಕಾರಿ ವೆಂಕಟರಾಜಾ ಸೂಚಿಸಿದರು.

ದಸರಾ ಕವಿಗೋಷ್ಟಿ: ಅ.9 ರಂದು 60 ಕವಿಗಳು ಕವನ ವಾಚಿಸಲಿರುವ ದಸರಾ ಬಹುಭಾμÁ ಕವಿಗೋಷ್ಠಿ ಗಾಂಧಿ ಮೈದಾನದಲ್ಲಿ ನಡೆಯಲಿದೆ ಎಂದು ದಸರಾ ಬಹುಭಾμÁ ಕವಿಗೋಷ್ಠಿ ಸಮಿತಿ ಅಧ್ಯಕ್ಷ ಉಜ್ವಲ್ ರಂಜಿತ್ ಮಾಹಿತಿ ನೀಡಿದರು.

ವಾಚಿಸಲ್ಪಡುವ ಕವನಗಳನ್ನು ಪುಸ್ತಕರೂಪದಲ್ಲಿ ಸಂಕಲವನಾಗಿ ಪ್ರಕಟಿಸಲಾಗುತ್ತದೆ, 200 ಅಧಿಕ ಕವನಗಳು ಆಯ್ಕೆ ಪ್ರಕ್ರಿಯೆಗೆ ಬಂದಿದ್ದವು, ಈ ಪೈಕಿ 60 ಕವಿತೆಗಳನ್ನು ಆಯ್ಕೆ ಮಾಡಲಾಗಿದೆ ಎಂದರು.
ದಸರಾ ಕ್ರೀಡಾಕೂಟ –ಅ.5 ರಂದು ಬೆಳಗ್ಗೆ 7 ಗಂಟೆಗೆ ರಸ್ತೆ ಓಟ, ಜಿಲ್ಲಾ ಕ್ರೀಡಾಂಗಣದಲ್ಲಿ ಫುಟ್ಬಾಲ್ ಮತ್ತು ಬಾಸ್ಕೆಟ್ ಬಾಲ್ ಕ್ರೀಡೆಗಳು ಆಯೋಜಿತವಾಗಿದೆ, ಅ.6 ರಂದು ಬೆಳಗ್ಗೆ 7 ಗಂಟೆಗೆ ನಗರದ ಬನ್ನಿಮಂಟಪದಿಂದ ಕ್ರೀಡಾಜ್ಯೋತಿಯನ್ನು ತಂದು ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣಕ್ಕೆ ತರಲಾಗುತ್ತದೆ, ಅಂದು ಇಡೀ ದಿನ ವಾಲಿಬಾಲ್, ಮಕ್ಕಳ ಕ್ರೀಡಾಕೂಟ ಆಯೋಜಿತವಾಗಿದೆ.

ಅ.9 ರಂದು ಹೋಟೆಲ್ ರಾಜದರ್ಶನ್ ನಲ್ಲಿ ಚೆಸ್ ಮತ್ತು ಕೇರಂಬೋರ್ಡ್ ಸ್ಪರ್ಧೆಗಳು ಆಯೋಜಿತವಾಗಿದೆ. ಅ.10 ರಂದು ನಗರದ ಗಾಂಧಿ ಮೈದಾನದಲ್ಲಿ ಕಬ್ಬಡ್ಡಿ ಸ್ಪರ್ಧೆ ಆಯೋಜಿತವಾಗಿದೆ ಎಂದು ದಸರಾ ಕ್ರೀಡಾ ಸಮಿತಿ ಅಧ್ಯಕ್ಷ ಪ್ರದೀಪ್ ಕರ್ಕೇರ ಮಾಹಿತಿ ನೀಡಿದ್ದಾರೆ.

ದಸರಾ ಸಮಿತಿ ಕಾರ್ಯಾಧ್ಯಕ್ಷ ಪ್ರಕಾಶ್ ಆಚಾರ್ಯ, ಪ್ರಧಾನ ಕಾರ್ಯದರ್ಶಿ ರಾಜೇಶ್ ಬಿ.ವೈ, ಖಜಾಂಜಿ ಅರುಣ್ ಶೆಟ್ಟಿ ಸೇರಿದಂತೆ ದಸರಾ ಸಮಿತಿ ಪ್ರಮುಖರು ಸಭೆಯಲ್ಲಿ ಹಾಜರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

7 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

7 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

8 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

9 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

14 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

14 hours ago