ಕೊಡಗು

ಮಡಿಕೇರಿ: ಮುದ್ದಂಡ ಹಾಕಿ ಉತ್ಸವದಲ್ಲಿ ಪರಿಸರ ಜಾಗೃತಿ

ಮಡಿಕೇರಿ: ಪರಿಸರ ಜಾಗೃತಿ ಮೂಡಿಸುವ ಉದ್ದೇಶದಿಂದ ಕೊಡವ ಕುಟುಂಬಗಳ ಮುದ್ದಂಡ ಕಪ್‌ ಹಾಕಿ ಉತ್ಸವದಲ್ಲಿ ಕಳೆದ 10 ದಿನಗಳಲ್ಲಿ 2 ಟನ್‌ನಷ್ಟು ತ್ಯಾಜ್ಯ ಸಂಗ್ರಹಿಸಲಾಗಿದೆ. ಶೂನ್ಯ ತ್ಯಾಜ್ಯ ನಿರ್ವಹಣೆಗೆ ಬೆಂಗಳೂರಿನ ವೇದನ್‌ ಟ್ರಸ್ಟ್‌ ಕೈ ಜೋಡಿಸಿದೆ.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುದ್ದಂಡ ಕಪ್ ಹಾಕಿ ಉತ್ಸವ ಸಮಿತಿಯ ಅಧ್ಯಕ್ಷ ಮುದ್ದಂಡ ರಶಿನ್ ಸುಬ್ಬಯ್ಯ, ಹಾಕಿ ಉತ್ಸವದಲ್ಲಿ ಶೂನ್ಯ ತ್ಯಾಜ್ಯ ನಿರ್ವಹಣೆಯ ನಮ್ಮ ವಿನೂತನ ಪ್ರಯತ್ನ ಇಡೀ ಜಿಲ್ಲೆಗೆ ಮಾದರಿಯಾಗಲಿದೆ. ಇದರಿಂದ ಜನರಲ್ಲಿ ಪರಿಸರದ ಕುರಿತು ಕಾಳಜಿ ಮೂಡುತ್ತಿದೆ ಎಂದರು.

ಮುದ್ದಂಡ ಹಾಕಿ ಉತ್ಸವ ಆರಂಭಗೊಂಡು 10 ದಿನಗಳೇ ಕಳೆದಿದ್ದು, ಈ ಅವಧಿಯಲ್ಲಿ ವೇದನ್ ಟ್ರಸ್ಟ್ ನ ಸ್ವಯಂ ಸೇವಕರ ಮೂಲಕ 2 ಟನ್ ತ್ಯಾಜ್ಯ ಸಂಗ್ರಹಿಸಲಾಗಿದೆ. ಹಾಕಿ ಉತ್ಸವ ಮುಗಿಯುವ ವೇಳೆಗೆ ಸುಮಾರು 10 ಟನ್ ಗೂ ಅಧಿಕ ತ್ಯಾಜ್ಯ ಸಂಗ್ರಹವಾಗುವ ನಿರೀಕ್ಷೆ ಇದೆ ಎಂದು ತಿಳಿಸಿದರು.

ಬೆಂಗಳೂರಿನ ವೇದನ್ ಟ್ರಸ್ಟ್ ನ ಸದಸ್ಯರು ಹಸಿ ಕಸ ಮತ್ತು ಒಣಕಸ ಬೇರ್ಪಡಿಸಿ ಶೂನ್ಯ ತ್ಯಾಜ್ಯ ನಿರ್ವಹಣೆಯ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿಭಾಯಿಸುತ್ತಿದ್ದಾರೆ. ಈ ವೈಜ್ಞಾನಿಕ ರೂಪದ ಕಾರ್ಯನಿರ್ವಹಣೆಯನ್ನು ಮಡಿಕೇರಿ ನಗರಸಭೆ ಅಳವಡಿಸಿಕೊಳ್ಳಬಹುದು ಎಂದು ರಶಿನ್ ಸುಬ್ಬಯ್ಯ ಅಭಿಪ್ರಾಯಪಟ್ಟರು.

ವೇದನ್ ಟ್ರಸ್ಟ್ ನ ಪ್ರಮುಖ ಎಸ್.ಸಿ.ಗಣೇಶ್ ಮಾತನಾಡಿ, ಕೊಡಗು ಜಿಲ್ಲೆಯಲ್ಲಿ ಸ್ವಚ್ಛ ಪರಿಸರದ ಕುರಿತು ಜನರಲ್ಲಿ ಜಾಗೃತಿ ಮೂಡಿಸಬೇಕು ಎನ್ನುವುದು ನಮ್ಮ ಗುರಿಯಾಗಿದೆ. ಇದಕ್ಕಾಗಿ ಮುದ್ದಂಡ ಹಾಕಿ ಉತ್ಸವದಲ್ಲಿ ಶೂನ್ಯ ತ್ಯಾಜ್ಯ ನಿರ್ವಹಣೆಯ ಜವಾಬ್ದಾರಿ ನಿಭಾಯಿಸುತ್ತಿದ್ದೇವೆ ಎಂದರು.

ಮುದ್ದಂಡ ಕಪ್ ಹಾಕಿ ಉತ್ಸವದ ಕಾರ್ಯದರ್ಶಿ ಆದ್ಯ ಪೊವಣ್ಣ ಮಾತನಾಡಿ, ನಮ್ಮ ಈ ಪ್ರಯತ್ನ ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ನಡೆಯುವ ದೊಡ್ಡ ಕ್ರೀಡೋತ್ಸವ ಮತ್ತು ಸಮಾರಂಭಗಳಲ್ಲಿ ಶೂನ್ಯ ತ್ಯಾಜ್ಯ ನಿರ್ವಹಣೆಗೆ ಪ್ರೇರಣೆಯನ್ನು ನೀಡಲಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಕೊಡವ ಹಾಕಿ ಅಕಾಡೆಮಿಯ ಉಪಾಧ್ಯಕ್ಷ ಕುಕ್ಕೇರ ಜಯ ಚಿಣ್ಣಪ್ಪ ಹಾಗೂ ಮುದ್ದಂಡ ಕಪ್ ಹಾಕಿ ಉತ್ಸವ ಸಮಿತಿಯ ಉಪಾಧ್ಯಕ್ಷ ಡೀನ್ ಬೋಪಣ್ಣ ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ವಂಚನೆ ತಡೆಗಾಗಿ ನಿರ್ಬಂಧ

ನೀಟ್ -ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಇದೇ ಜೂನ್ ೨೧ ರಂದು ಮರು ಪರೀಕ್ಷೆ ನಡೆಯಲಿದೆ. ವಂಚನೆ ಜಾಲ…

1 hour ago

ಓದುಗರ ಪತ್ರ: ಮರಗಳ ಹನನ ಏಕೆ?

ಮೈಸೂರಿನ ಕುಕ್ಕರಹಳ್ಳಿ ಕೆರೆ ಬಳಿ ಮೈಸೂರು ವಿಶ್ವವಿದ್ಯಾನಿಲಯದ ಹಿಂಭಾಗ ಮೈಸೂರು - ಚಾಮರಾಜನಗರ ರೈಲ್ವೆ ಹಳಿಯ ಪಕ್ಕದಲ್ಲಿದ್ದ ೩೫ ಮರಗಳನ್ನು…

1 hour ago

ಓದುಗರ ಪತ್ರ: ಎಥೆನಾಲ್: ಪ್ರಚಾರದ ಗಿಮಿಕ್ಕೋ?

ಜೂನ್ ೧೪ರಂದು ಆರಂಭವಾದ ಎಥೆನಾಲ್ ಜಗೃತಿ ಕೇವಲ ಕಾರ್ಪೊರೇಟ್ ಪ್ರಚಾರದ ಗಿಮಿಕ್‌ನಂತೆ ಕಾಣುತ್ತಿದೆ. ಪೆಟ್ರೋಲ್‌ಗೆ ಶೇ.೨೦ ಮಿಶ್ರಣದ ಗುರಿ ಮತ್ತು…

1 hour ago

ಓದುಗರ ಪತ್ರ: ದುಡ್ಡಿಗೆ ಬೆಲೆ ಇಲ್ಲವೇ?

ಕಳೆದ ಆರ್ಥಿಕ ವರ್ಷದಲ್ಲಿ (೨೦೨೫-೨೬), ನಮ್ಮ ಭಾರತೀಯ ಬ್ಯಾಂಕ್ಗಳು, ಕೇವಲ ಪೆನ್ನು,ಪೇಪರ್, ಸ್ಟೇಷನರಿ ವಸ್ತುಗಳು ಮತ್ತು ಮುದ್ರಣಕ್ಕಾಗಿ ೩,೮೭೦ ಕೋಟಿ…

1 hour ago

ಪರಿಷತ್‌ ಚುನಾವಣೆಯಲ್ಲಿ ಕ್ರಾಸ್‌ ವೋಟ್‌ ಮಾಡಿದ ಶಾಸಕರು ಗೊತ್ತಿದೆ ; ಎಚ್‌.ಡಿ.ಕುಮಾರಸ್ವಾಮಿ

ಮೈಸೂರು : ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆದ ಚುನಾವಣೆಯಲ್ಲಿ ಜಾ.ದಳದಿಂದ ಕ್ರಾಸ್ ವೋಟ್ ಮಾಡಿದ ನಾಲ್ಕು ಜನರು ಯಾರೆಂದು ಗೊತ್ತಿದೆ.…

14 hours ago