ಕೊಡಗು

ಮಡಿಕೇರಿ: ಮುದ್ದಂಡ ಹಾಕಿ ಉತ್ಸವದಲ್ಲಿ ಪರಿಸರ ಜಾಗೃತಿ

ಮಡಿಕೇರಿ: ಪರಿಸರ ಜಾಗೃತಿ ಮೂಡಿಸುವ ಉದ್ದೇಶದಿಂದ ಕೊಡವ ಕುಟುಂಬಗಳ ಮುದ್ದಂಡ ಕಪ್‌ ಹಾಕಿ ಉತ್ಸವದಲ್ಲಿ ಕಳೆದ 10 ದಿನಗಳಲ್ಲಿ 2 ಟನ್‌ನಷ್ಟು ತ್ಯಾಜ್ಯ ಸಂಗ್ರಹಿಸಲಾಗಿದೆ. ಶೂನ್ಯ ತ್ಯಾಜ್ಯ ನಿರ್ವಹಣೆಗೆ ಬೆಂಗಳೂರಿನ ವೇದನ್‌ ಟ್ರಸ್ಟ್‌ ಕೈ ಜೋಡಿಸಿದೆ.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುದ್ದಂಡ ಕಪ್ ಹಾಕಿ ಉತ್ಸವ ಸಮಿತಿಯ ಅಧ್ಯಕ್ಷ ಮುದ್ದಂಡ ರಶಿನ್ ಸುಬ್ಬಯ್ಯ, ಹಾಕಿ ಉತ್ಸವದಲ್ಲಿ ಶೂನ್ಯ ತ್ಯಾಜ್ಯ ನಿರ್ವಹಣೆಯ ನಮ್ಮ ವಿನೂತನ ಪ್ರಯತ್ನ ಇಡೀ ಜಿಲ್ಲೆಗೆ ಮಾದರಿಯಾಗಲಿದೆ. ಇದರಿಂದ ಜನರಲ್ಲಿ ಪರಿಸರದ ಕುರಿತು ಕಾಳಜಿ ಮೂಡುತ್ತಿದೆ ಎಂದರು.

ಮುದ್ದಂಡ ಹಾಕಿ ಉತ್ಸವ ಆರಂಭಗೊಂಡು 10 ದಿನಗಳೇ ಕಳೆದಿದ್ದು, ಈ ಅವಧಿಯಲ್ಲಿ ವೇದನ್ ಟ್ರಸ್ಟ್ ನ ಸ್ವಯಂ ಸೇವಕರ ಮೂಲಕ 2 ಟನ್ ತ್ಯಾಜ್ಯ ಸಂಗ್ರಹಿಸಲಾಗಿದೆ. ಹಾಕಿ ಉತ್ಸವ ಮುಗಿಯುವ ವೇಳೆಗೆ ಸುಮಾರು 10 ಟನ್ ಗೂ ಅಧಿಕ ತ್ಯಾಜ್ಯ ಸಂಗ್ರಹವಾಗುವ ನಿರೀಕ್ಷೆ ಇದೆ ಎಂದು ತಿಳಿಸಿದರು.

ಬೆಂಗಳೂರಿನ ವೇದನ್ ಟ್ರಸ್ಟ್ ನ ಸದಸ್ಯರು ಹಸಿ ಕಸ ಮತ್ತು ಒಣಕಸ ಬೇರ್ಪಡಿಸಿ ಶೂನ್ಯ ತ್ಯಾಜ್ಯ ನಿರ್ವಹಣೆಯ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿಭಾಯಿಸುತ್ತಿದ್ದಾರೆ. ಈ ವೈಜ್ಞಾನಿಕ ರೂಪದ ಕಾರ್ಯನಿರ್ವಹಣೆಯನ್ನು ಮಡಿಕೇರಿ ನಗರಸಭೆ ಅಳವಡಿಸಿಕೊಳ್ಳಬಹುದು ಎಂದು ರಶಿನ್ ಸುಬ್ಬಯ್ಯ ಅಭಿಪ್ರಾಯಪಟ್ಟರು.

ವೇದನ್ ಟ್ರಸ್ಟ್ ನ ಪ್ರಮುಖ ಎಸ್.ಸಿ.ಗಣೇಶ್ ಮಾತನಾಡಿ, ಕೊಡಗು ಜಿಲ್ಲೆಯಲ್ಲಿ ಸ್ವಚ್ಛ ಪರಿಸರದ ಕುರಿತು ಜನರಲ್ಲಿ ಜಾಗೃತಿ ಮೂಡಿಸಬೇಕು ಎನ್ನುವುದು ನಮ್ಮ ಗುರಿಯಾಗಿದೆ. ಇದಕ್ಕಾಗಿ ಮುದ್ದಂಡ ಹಾಕಿ ಉತ್ಸವದಲ್ಲಿ ಶೂನ್ಯ ತ್ಯಾಜ್ಯ ನಿರ್ವಹಣೆಯ ಜವಾಬ್ದಾರಿ ನಿಭಾಯಿಸುತ್ತಿದ್ದೇವೆ ಎಂದರು.

ಮುದ್ದಂಡ ಕಪ್ ಹಾಕಿ ಉತ್ಸವದ ಕಾರ್ಯದರ್ಶಿ ಆದ್ಯ ಪೊವಣ್ಣ ಮಾತನಾಡಿ, ನಮ್ಮ ಈ ಪ್ರಯತ್ನ ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ನಡೆಯುವ ದೊಡ್ಡ ಕ್ರೀಡೋತ್ಸವ ಮತ್ತು ಸಮಾರಂಭಗಳಲ್ಲಿ ಶೂನ್ಯ ತ್ಯಾಜ್ಯ ನಿರ್ವಹಣೆಗೆ ಪ್ರೇರಣೆಯನ್ನು ನೀಡಲಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಕೊಡವ ಹಾಕಿ ಅಕಾಡೆಮಿಯ ಉಪಾಧ್ಯಕ್ಷ ಕುಕ್ಕೇರ ಜಯ ಚಿಣ್ಣಪ್ಪ ಹಾಗೂ ಮುದ್ದಂಡ ಕಪ್ ಹಾಕಿ ಉತ್ಸವ ಸಮಿತಿಯ ಉಪಾಧ್ಯಕ್ಷ ಡೀನ್ ಬೋಪಣ್ಣ ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

2 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

2 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

4 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

10 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

16 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

16 hours ago