ಕೊಡಗು

ಮಡಿಕೇರಿ : ಇಂದಿನಿಂದ ನಾಲ್ಕು ದಿನ ಫಲಪುಷ್ಪ ಪ್ರದರ್ಶನ

ಮಡಿಕೇರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ತೋಟಗಾರಿಕೆ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಫಲಪುಷ್ಪ ಪ್ರದರ್ಶನವು ಜನವರಿ, 24 ರಿಂದ 27 ರವರೆಗೆ ನಗರದ ರಾಜಾಸೀಟು ಉದ್ಯಾನವನ ಹಾಗೂ ಗಾಂಧಿ ಮೈದಾನದಲ್ಲಿ ನಡೆಯಲಿದೆ.

ಮಕ್ಕಳಿಗೆ ಆಕರ್ಷಣೀಯವಾಗುವ ನಿಟ್ಟಿನಲ್ಲಿ ವಿವಿಧ ಕಲಾಕೃತಿಗಳ ಫಲಪುಷ್ಪ ಪ್ರದರ್ಶನವನ್ನು ಏರ್ಪಡಿಸಲಾಗಿದೆ. ಜೊತೆಗೆ ಗಾಂಧಿ ಮೈದಾನದಲ್ಲಿ ವಸ್ತುಪ್ರದರ್ಶನವೂ ನಡೆಯಲಿದೆ.

ಸಮವಸ್ತ್ರದಲ್ಲಿ ಬರುವ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ. ಉಳಿದಂತೆ ವಯಸ್ಕರಿಗೆ 20 ರೂ. ಪ್ರವೇಶ ಶುಲ್ಕ ನಿಗದಿಮಾಡಲಾಗಿದೆ. ಫಲಪುಷ್ಪ ಪ್ರದರ್ಶನಗಳಂದು ಬೆಳಗ್ಗೆ 8 ರಿಂದ ರಾತ್ರಿ 8.30 ಗಂಟೆವರೆಗೆ ವೀಕ್ಷಣೆ ಮಾಡಬಹುದಾಗಿದೆ.

ಈ ಬಾರಿ ನಾಲ್ಕು ದಿನಗಳ ಕಾಲ ಫಲಪುಷ್ಪ ಪ್ರದರ್ಶನ ನಡೆಯುತ್ತಿರುವುದು ವಿಶೇಷವಾಗಿದೆ. ಫಲಪುಷ್ಪ ಪ್ರದರ್ಶನಕ್ಕೆ ಕಳೆದ ಬಾರಿ 32 ಲಕ್ಷ ರೂ. ವೆಚ್ಚವಾಗಿದ್ದು, ಈ ವರ್ಷದಲ್ಲಿ 35 ಲಕ್ಷ ರೂ. ಅಂದಾಜು ಮಾಡಲಾಗಿದೆ. ಕರ್ನಾಟಕ ಸರ್ಕಾರದ ತೋಟಗಾರಿಕೆ ಇಲಾಖೆಯಿಂದ ರಾಜ್ಯದಲ್ಲಿ ಉತ್ಪತ್ತಿಯಾಗುವ ಜೇನುತುಪ್ಪವನ್ನು ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಸಿದ್ದಿಗೊಳಿಸಿ ಮಾರಾಟ ಮಾಡುವ ಉದ್ದೇಶದಿಂದ “ಝೇಂಕಾರ (JHENKARA)” ಬ್ರಾಂಡ್ ಅಡಿಯಲ್ಲಿ ನೊಂದಾಯಿಸಲ್ಪಟಿದ್ದು, “ಝೇಂಕಾರ ಬ್ರಾಂಡ್ ಹಾಗೂ ಕೊಡಗು ಜೇನಿನ “ಕೂರ್ಗ್ ಹನಿ” ಮಾರಾಟ ಬ್ರ್ಯಾಂಡ್ ಗಳ ವಿವಿಧ ಕಲಾಕೃತಿಗಳನ್ನು ಹೂವುಗಳಿಂದ ಅಲಂಕರಿಸಿ ನಿರ್ಮಾಣ ಮಾಡಲಾಗಿದೆ.

ಮತ್ತಷ್ಟು ಮಾಹಿತಿ: ತೋಟಗಾರಿಕೆ ಇಲಾಖೆಯು ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ ಹಾಗೂ ಇತರೆ ಅಭಿವೃದ್ದಿ ಇಲಾಖೆಗಳ ಸಹಯೋಗದೊಂದಿಗೆ ಭಾರತ ದೇಶದ ಗಣರಾಜ್ಯೋತ್ಸವದ ಪ್ರಯುಕ್ತ ಜನವರಿ, 24 ರ ಇಂದ 27 ರವರೆಗೆ ಮಡಿಕೇರಿ ನಗರದ ರಾಜಾಸೀಟು ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನವನ್ನು ಆಯೋಜಿಸಿರುತ್ತದೆ.

ಫಲಪುಷ್ಪ ಪ್ರದರ್ಶನದ ಅಂಗವಾಗಿ ಈಗಾಗಲೇ ರಾಜಾಸೀಟು ಉದ್ಯಾನವನದಲ್ಲಿ ಸುಮಾರು 7,000 ಸಾವಿರ ಕುಂಡಗಳಲ್ಲಿ ವಿವಿಧ ಜಾತಿಯ ಹೂವುಗಳು ಹಾಗೂ ಬೆಡ್‍ಗಳಲ್ಲಿ ಸುಮಾರು 20,000 ವಿವಿಧ ಜಾತಿಯ ಹೂವುಗಳಾದ ಸಾಲ್ವಿಯ, ಸೇವಂತಿಗೆ, ಚಂಡು ಹೂ, ಜೀನಿಯಾ, ಡಯಾಂಥಸ್, ಇಂಪೇಷಿಯನ್ಸ್, ವಿಂಕಾ ರೋಸಿಯಾ, ಕಾಕ್ಸ್ ಕೋಂಬ್, ಡೇಲಿಯಾ, ಇತ್ಯಾದಿಗಳನ್ನು ಪಾತಿಯಲ್ಲಿ ಹಾಗೂ ಕುಂಡಗಳಲ್ಲಿ ಬೆಳೆಯಲಾಗಿದೆ.

ಈ ವರ್ಷದ ಫಲಪುಷ್ಪ ಪ್ರದರ್ಶನದ ಪ್ರಮುಖ ಆಕರ್ಷಣೆಗಳು: ಕೊಡಗಿನ ಪ್ರಸಿದ್ದ ಶ್ರೀ ಓಂಕಾರೇಶ್ವರ ದೇವಸ್ಥಾನದ ಕಲಾಕೃತಿಯನ್ನು 22 ಅಡಿ ಎತ್ತರದಲ್ಲಿ 30 ಅಡಿ ಉದ್ದ, 38 ಅಡಿ ಅಗಲದಲ್ಲಿ ವಿವಿಧ ಬಣ್ಣಗಳ ಗುಲಾಬಿ, ಸೇವಂತಿಗೆ, ಆಸ್ಟರ್ ಜಾತಿಯ ಸುಮಾರು 5 ಲಕ್ಷ ಹೂವುಗಳಿಂದ ಅಲಂಕರಿಸಿ ನಿರ್ಮಾಣ ಮಾಡಲಾಗಿದೆ.

ಹೂ ಹಾಗೂ ಜೇನು ಹುಳುವಿನ ಕಲಾಕೃತಿಯನ್ನು ವಿವಿಧ ಬಣ್ಣದ ಹೂವುಗಳಿಂದ ಅಲಂಕರಿಸಿ ನಿರ್ಮಾಣ ಮಾಡಲಾಗುವುದು. ಗಣರಾಜ್ಯೋತ್ಸವದ ಅಂಗವಾಗಿ ಯೋಧ, ಪಿರಂಗಿ ಹಾಗೂ ರಾಷ್ಟ್ರದ್ವಜದ ಕಲಾಕೃತಿಯನ್ನು ವಿವಿಧ ಬಣ್ಣದ ಹೂವುಗಳಿಂದ ಅಲಂಕರಿಸಿ ನಿರ್ಮಾಣ ಮಾಡಲಾಗಿದೆ.

ವಿವಿಧ ಅಲಂಕಾರಿಕ ಗಿಡಗಳು ಬೋನ್ಸಾಯ್ ಗಿಡಗಳ ಪ್ರದರ್ಶನ, ಇಕೆಬಾನೆ ಹೂವಿನ ಜೋಡನೆಯ ಪ್ರದರ್ಶನಗಳನ್ನು ಏರ್ಪಾಡಿಸಲಾಗುತ್ತಿದೆ. ಈ ರೀತಿಯಾಗಿ ಹದಿನಾರು ವಿವಿಧ ರೀತಿಯ ಹೂವಿನ ಕಲಾಕೃತಿಗಳನ್ನು ಒಟ್ಟು 8 ರಿಂದ 10 ಲಕ್ಷ ಸಂಖ್ಯೆಯ ಸೇವಂತಿಗೆ, ಆರ್ಕಿಡ್, ಡೆಸ್ಸಿ ಹಾಗೂ ವಿವಿಧ ಹೂವುಗಳಿಂದ ಅಲಂಕರಿಸಿ ನಿರ್ಮಾಣ ಮಾಡಲಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

17 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

17 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

17 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

17 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

17 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

20 hours ago