ಕೊಡಗು

ಮಡಿಕೇರಿ | ಗಾಂಜಾ ಮಾರಾಟ ; ಇಬ್ಬರ ಬಂಧನ

ಮಡಿಕೇರಿ : ನಿಷೇಧಿತ ಮಾದಕ ವಸ್ತು ಗಾಂಜಾ ಮಾರಾಟ / ಸರಬರಾಜು ಮಾಡುತ್ತಿದ್ದ ಇಬ್ಬರು ಆರೋಪಿಗಳು ಪೊಲೀಸರ ಅತಿಥಿಗಳಾಗಿದ್ದಾರೆ.

ಕುಂಜಿಲ ಗ್ರಾಮದ ಕೆ.ಯು. ಮೊಹಮ್ಮದ್ ಅಶ್ರಫ್ (37) ಮತ್ತು ಅಯ್ಯಂಗೇರಿ ಗ್ರಾಮದ ಪಿ.ಕೆ. ಆಸ್ಕರ್ (24) ಎಂಬುವವರೇ ಪೊಲೀಸರು ಬೀಸಿದ ಬಲೆಗೆ ಬಿದ್ದಿರುವ ಆರೋಪಿಗಳಾಗಿದ್ದಾರೆ. ಇವರಿಂದ 1 ಕೆ.ಜಿ. 151 ಗ್ರಾಂ ಗಾಂಜಾ ಹಾಗೂ ಕೃತ್ಯಕ್ಕೆ ಬಳಸಿದ ಆಟೋ ರಿಕ್ಷಾವನ್ನು ವಶಕ್ಕೆ ಪಡೆಯಲಾಗಿದೆ.

ಆರೋಪಿಗಳು ಮಾರ್ಚ್‌ 18ರಂದು ಅಯ್ಯಂಗೇರಿ – ನಾಪೋಕ್ಲು ರಸ್ತೆಯಲ್ಲಿ ಗಾಂಜಾ ಮಾರಾಟ / ಸರಬರಾಜು ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಪೊಲೀಸರಿಂದ ದಾಳಿ ನಡೆದಿದೆ. ಮಡಿಕೇರಿ ಡಿಎಸ್ಪಿ ಪಿ.ಎ. ಸೂರಜ್, ಮಡಿಕೇರಿ ಗ್ರಾಮಾಂತರ ಪೊಲೀಸ್ ವೃತ್ತ ನಿರೀಕ್ಷಕ2ರಾದ (ಪ್ರಭಾರ) ಪಿ. ಅನೂಪ್ ಮಾದಪ್ಪ, ಭಾಗಮಂಡಲ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಶೋಭಾ ಲಮಾಣಿ ಮತ್ತು ಸಿಬ್ಬಂದಿಗಳು ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಎಸ್ಪಿ ಶ್ಲಾಘನೆ:
ಈ ಪ್ರಕರಣವನ್ನು ಪತ್ತೆಹಚ್ಚಿ ಆರೋಪಿಗಳನ್ನು ಬಂಧಿಸುವಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸಿರುವ ಪೊಲೀಸ್ ಅಧಿಕಾರಿಗಳನ್ನು ಮತ್ತು ಸಿಬ್ಬಂದಿಗಳನ್ನು ಜಿಲ್ಲಾ ಪೊಲೀಸ್ ಅಧೀಕ್ಪಕ ಕೆ.ರಾಮರಾಜನ್ ಆವರು ಶ್ಲಾಘಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹೆಚ್ಚಾಯ್ತು ಸಫಾರಿ ವಿರೋಧ : 25ಕ್ಕೂ ಹೆಚ್ಚು ಗ್ರಾ.ಪಂ ಪಿಡಿಒಗಳಿಗೆ ಮನವಿ ಸಲ್ಲಿಸಿ ರೈತರು

ಗುಂಡ್ಲುಪೇಟೆ : ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ ಪುನರಾರಂಭಿಸುವ ಸರ್ಕಾರದ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ, ಕರ್ನಾಟಕ ರಾಜ್ಯ…

4 hours ago

ಟ್ರಂಪ್‌ ಸುಂಕ ರದ್ದುಪಡಿಸಿದ ಅಮೆರಿಕಾ ಸುಪ್ರೀಂಕೋರ್ಟ್‌ : ಭಾರತ ಹೇಳಿದ್ದೇನು?

ಹೊಸದಿಲ್ಲಿ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವಿವಿಧ ದೇಶಗಳ ಮೇಲೆ ಹೇರಿರುವ ಹೆಚ್ಚುವರಿ ಸಾಮೂಹಿಕ ಸುಂಕಗಳನ್ನು ಅಮೆರಿಕ…

5 hours ago

ಗಡಿ ಭದ್ರತೆಗೆ ಒತ್ತು : ತಮಿಳುನಾಡು ಚುನಾವಣೆಗೆ ಕರ್ನಾಟಕ ಪೊಲೀಸ್ ಸಹಕಾರ ಭರವಸೆ

ಹನೂರು : ಮುಂದಿನ ದಿನಗಳಲ್ಲಿ ತಮಿಳುನಾಡು ವಿಧಾನಸಭೆ ಚುನಾವಣೆ ನಡೆಯಲಿದ್ದು ಯಶಸ್ವಿಯಾಗಿ ನಡೆಸಲು ಕರ್ನಾಟಕ ಪೊಲೀಸರು ಹಾಗೂ ಅಬಕಾರಿ ಇಲಾಖೆ…

5 hours ago

ಶಾರ್ಟ್ ಸರ್ಕ್ಯೂಟ್ : ಎಲೆಕ್ಟ್ರಾನಿಕ್ಸ್ ಅಂಗಡಿ ಸುಟ್ಟು ಭಸ್ಮ, ಲಕ್ಷಾಂತರ ರೂ. ನಷ್ಟ

ಕೆ.ಆರ್.ಪೇಟೆ : ಪಟ್ಟಣದ ಪಿ.ಎಲ್.ಡಿ ಬ್ಯಾಂಕ್ ಮುಂಭಾಗದಲ್ಲಿ ಶಫಿಉಲ್ಲಾ ಅವರು ನಡೆಸುತ್ತಿದ್ದ ಮೊಬೈಲ್ ಹಾಗೂ ಎಲೆಕ್ಟ್ರಾನಿಕ್ಸ್ ಅಂಗಡಿಯು ವಿದ್ಯುತ್ ಶಾರ್ಟ್…

5 hours ago

ಇವಿ ಹಬ್ ಆಗಿ ಕರ್ನಾಟಕ ರೂಪಾಂತರ ; ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ವಿಶ್ವಾಸ

ಬೆಂಗಳೂರು : ಬೆಂಗಳೂರು ನಗರ ಮಾತ್ರವಲ್ಲದೆ ಇಡೀ ಕರ್ನಾಟಕ ಎಲೆಕ್ಟ್ರಿಕ್ ವಾಹನ ಉದ್ಯಮದ ಹಬ್ ಆಗಿ ಅಭಿವೃದ್ಧಿ ಹೊಂದುತ್ತಿದ್ದು, ಅದಕ್ಕೆ…

6 hours ago

ಶೇ.10 ರಷ್ಟು ಜಾಗತಿಕ ಸುಂಕ ಘೋಷಿಸಿದ ಡೊನಾಲ್ಡ್ ಟ್ರಂಪ್

ಸುಪ್ರೀಂ ತೀರ್ಪಿಗೆ ಆಕ್ರೋಶ ವ್ಯಕ್ತಪಡಿಸಿದ ಅಮೆರಿಕ ಅಧ್ಯಕ್ಷ ವಾಷಿಂಗ್ಟನ್ : ವಿವಿಧ ದೇಶಗಳ ಸರಕುಗಳ ಮೇಲೆ ವಿಧಿಸಿದ್ದ ಭಾರಿ ಸುಂಕಗಳನ್ನು…

6 hours ago