ಕೊಡಗು

ಮಡಿಕೇರಿ | ಗಾಂಜಾ ಮಾರಾಟ ; ಇಬ್ಬರ ಬಂಧನ

ಮಡಿಕೇರಿ : ನಿಷೇಧಿತ ಮಾದಕ ವಸ್ತು ಗಾಂಜಾ ಮಾರಾಟ / ಸರಬರಾಜು ಮಾಡುತ್ತಿದ್ದ ಇಬ್ಬರು ಆರೋಪಿಗಳು ಪೊಲೀಸರ ಅತಿಥಿಗಳಾಗಿದ್ದಾರೆ.

ಕುಂಜಿಲ ಗ್ರಾಮದ ಕೆ.ಯು. ಮೊಹಮ್ಮದ್ ಅಶ್ರಫ್ (37) ಮತ್ತು ಅಯ್ಯಂಗೇರಿ ಗ್ರಾಮದ ಪಿ.ಕೆ. ಆಸ್ಕರ್ (24) ಎಂಬುವವರೇ ಪೊಲೀಸರು ಬೀಸಿದ ಬಲೆಗೆ ಬಿದ್ದಿರುವ ಆರೋಪಿಗಳಾಗಿದ್ದಾರೆ. ಇವರಿಂದ 1 ಕೆ.ಜಿ. 151 ಗ್ರಾಂ ಗಾಂಜಾ ಹಾಗೂ ಕೃತ್ಯಕ್ಕೆ ಬಳಸಿದ ಆಟೋ ರಿಕ್ಷಾವನ್ನು ವಶಕ್ಕೆ ಪಡೆಯಲಾಗಿದೆ.

ಆರೋಪಿಗಳು ಮಾರ್ಚ್‌ 18ರಂದು ಅಯ್ಯಂಗೇರಿ – ನಾಪೋಕ್ಲು ರಸ್ತೆಯಲ್ಲಿ ಗಾಂಜಾ ಮಾರಾಟ / ಸರಬರಾಜು ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಪೊಲೀಸರಿಂದ ದಾಳಿ ನಡೆದಿದೆ. ಮಡಿಕೇರಿ ಡಿಎಸ್ಪಿ ಪಿ.ಎ. ಸೂರಜ್, ಮಡಿಕೇರಿ ಗ್ರಾಮಾಂತರ ಪೊಲೀಸ್ ವೃತ್ತ ನಿರೀಕ್ಷಕ2ರಾದ (ಪ್ರಭಾರ) ಪಿ. ಅನೂಪ್ ಮಾದಪ್ಪ, ಭಾಗಮಂಡಲ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಶೋಭಾ ಲಮಾಣಿ ಮತ್ತು ಸಿಬ್ಬಂದಿಗಳು ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಎಸ್ಪಿ ಶ್ಲಾಘನೆ:
ಈ ಪ್ರಕರಣವನ್ನು ಪತ್ತೆಹಚ್ಚಿ ಆರೋಪಿಗಳನ್ನು ಬಂಧಿಸುವಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸಿರುವ ಪೊಲೀಸ್ ಅಧಿಕಾರಿಗಳನ್ನು ಮತ್ತು ಸಿಬ್ಬಂದಿಗಳನ್ನು ಜಿಲ್ಲಾ ಪೊಲೀಸ್ ಅಧೀಕ್ಪಕ ಕೆ.ರಾಮರಾಜನ್ ಆವರು ಶ್ಲಾಘಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಾ.23ರಿಂದ ವಿಜೃಂಭಣೆಯ ವೈರಮುಡಿ ಬ್ರಹ್ಮೋತ್ಸವ

ಮೇಲುಕೋಟೆ: ಮಾ.೨೩ರಿಂದ ಏ.೩ರವರೆಗೆ ನಡೆಯುವ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿಯ ಪ್ರಖ್ಯಾತ ವೈರಮುಡಿ ಬ್ರಹ್ಮೋತ್ಸವವನ್ನು ವಿಜೃಂಭಣೆಯಿಂದ ನೆರವೇರಿಸಲು ಸಿದ್ಧತೆ ಮಾಡಲಾಗುತ್ತಿದೆ ಎಂದು…

43 mins ago

ಓದುಗರ ಪತ್ರ: ಮೊಬೈಲ್ ಸ್ಟೇಟಸ್ !

ಮೊಬೈಲ್ ಸ್ಟೇಟಸ್ ! ಶಾಲೆಗಳಲ್ಲಿ ಮೊಬೈಲ್ ನಿಷೇಧ..? ಸರ್ಕಾರದ ಮೆಸೇಜ್‌ಗೆ ಲೈಕ್ ನೀಡಬಹುದು ಪೋಷಕರು ! ಆದರೆ, ಸ್ಟೂಡೆಂಟ್‌ಗಳು ?…

48 mins ago

ಓದುಗರ ಪತ್ರ: ಕಿಡಿಗೇಡಿಗಳಿಂದ ವಿದ್ಯಾರ್ಥಿಗಳು ವಿಚಲಿತರಾಗದಿರಿ

ಫೆ.೨೮ರ ಶನಿವಾರದಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯಲಿದೆ. ಎಲ್ಲಾ ಕಾಲೇಜುಗಳಲ್ಲಿ ವ್ಯವಸ್ಥಿತವಾಗಿ ಪಾಠವನ್ನು ಮುಗಿಸಿ ಮಾದರಿ ಪ್ರಶ್ನೆ ಪತ್ರಿಕೆ…

49 mins ago

ಓದುಗರ ಪತ್ರ; ಸಫಾರಿಗೆ ಅನುಮತಿ ಖಂಡನೀಯ

ಮೈಸೂರು ಜಿಲ್ಲೆ, ಹೆಗ್ಗಡದೇವನ ಕೋಟೆ ತಾಲ್ಲೂಕು ವನಸಿರಿಗೆ ಹೆಸರುವಾಸಿ, ಇಲ್ಲಿನ ಉತ್ತಮ ಹವಾಗುಣಕ್ಕೆ ಸನಿಹದಲ್ಲೇ ಇರುವ ಅರಣ್ಯ ಪ್ರದೇಶ ಕೂಡ…

51 mins ago

ತಂಪಾದ ಕೊಡಗಿನಲ್ಲಿಯೂ ಹೆಚ್ಚುತ್ತಿದೆ ತಾಪ

ನವೀನ್ ಡಿಸೋಜ ೩೦ ಡಿಗ್ರಿ ಸೆಲ್ಸಿಯಸ್ ದಾಟುತ್ತಿರುವ ತಾಪಮಾನ; ಅಗತ್ಯ ಮುನ್ನೆಚ್ಚರಿಕೆಗೆ ವೈದ್ಯರ ಸಲಹೆ ಮಡಿಕೇರಿ: ಫೆಬ್ರವರಿ ತಿಂಗಳು ಕೊನೆಗೊಳ್ಳುತ್ತಿರುವಂತೆಯೇ…

1 hour ago

ಜೀವವೂ ಉಳಿಯಬೇಕು, ಜೀವನೋಪಾಯವೂ ನಡೆಯಬೇಕು

ಸಫಾರಿ ಪುನಾರಂಭದ ಸಂಬಂಧ ‘ಆಂದೋಲನ’ ದಿನಪತ್ರಿಕೆಯು ನಡೆಸಿದ ಅಭಿಯಾನಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ದೊರೆತಿದೆ. ಇದಕ್ಕೆ ಪೂರಕವಾಗಿ ಪತ್ರಿಕೆ ನಡೆಸಿದ…

2 hours ago