ಕೊಡಗು

ಮಡಿಕೇರಿ: ಪೊನ್ನಂಪೇಟೆಯಲ್ಲಿ ವೈಭವ ಪೂರಿತ ಗಣೇಶ ಹಬ್ಬ

ಸಂಪೂರ್ಣ ಹೂವಿನಿಂದ ಶೃಂಗಾರಗೊಂಡ ಬಸವೇಶ್ವರ ದೇವಾಲಯ…..

ಮಡಿಕೇರಿ: ಪೊನ್ನಂಪೇಟೆಯಲ್ಲಿ ಇಂದು(ಸೆ.7) ಬೆಳಿಗ್ಗೆ ಗಣೇಶನನ್ನು ಪುರದ ಬಸವೇಶ್ವರ ದೇವಸ್ಥಾನಕ್ಕೆ ಗೌರಿ ಕೆರೆಯಿಂದ ವಾಲಗಸಹಿತ ಬರಮಾಡಿಕೊಳ್ಳಲಾಯಿತು.

ದೇವಾಲಯದಲ್ಲಿ ಗಣೇಶನ ವಿಗ್ರಹವನ್ನು ಸ್ಥಾಪಿಸಿ ಪೂಜೆ ನೆರವರಿಸಲಾಯಿತು. ಪೊನಂಪೇಟೆಯ ಇತರ ಒಂಬತ್ತು ಸಮಿತಿಯವರು ಬಸವೇಶ್ವರ ದೇವಾಲಯದಲ್ಲಿ ಇರಿಸಲಾದ ಗಣೇಶ ಮೂರ್ತಿಗಳಿಗೆ ಪೂಜೆ ನೆರವೇರಿಸಿದ ನಂತರ ತಮ್ಮ ತಮ್ಮ ಸ್ಥಳಕ್ಕೆ ಮಂಟಪಗಳ ಮೂಲಕ ಮೆರವಣಿಗೆಯೊಂದಿಗೆ ತೆರಳಿ ಗಣೇಶನ ವಿಗ್ರಹವನ್ನು ಪ್ರತಿಷ್ಠಾಪಿಸಲಾಯಿತು. ಬೆಳಿಗ್ಗೆ 9 ಸಮಿತಿಯವರು ಒಟ್ಟಿಗೆ ಸೇರಿ ಬಸವೇಶ್ವರ ದೇವಾಲಯದಲ್ಲಿ ಪೂಜೆ ನೆರವೇರಿಸಿ ವೈಭವಪೂರಿತವಾಗಿ ವಿಗ್ರಹಗಳನ್ನು ಮೆರವಣಿಗೆಯಲ್ಲಿ ತೆಗೆದುಕೊಂಡು ಹೋದ ದೃಶ್ಯ ಮನಮೋಹಕವಾಗಿತ್ತು.

ಬ್ಯಾಂಡ್ ಸೆಟ್, ವಾಲಗ, ಚಂಡೆ ವಾದ್ಯಗಳೊಂದಿಗೆ ಗಣೇಶನನ್ನು ಶುದ್ಧಾ ಭಕ್ತಿಯಿಂದ ಬರಮಾಡಿಕೊಂಡರು. ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದ ವಿದ್ಯಾರ್ಥಿಗಳಂತೂ ಸಾಂಪ್ರದಾಯಿಕ ಉಡುಗೆ ತೊಟ್ಟು ಗಣೇಶ ಮೂರ್ತಿಯನ್ನು ಮೆರವಣಿಗೆ ನಡೆಸಿ ವಿದ್ಯಾರ್ಥಿಗಳೇ ಚೆಂಡೆ ವಾದ್ಯವನ್ನು ನುಡಿಸುತ ಕಾಲೇಜು ಆವರಣದಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ ಪೂಜೆ ನೆರವೇರಿಸಿದರು.

ಬೆಳಿಗ್ಗೆ ಪೊನ್ನಂಪೇಟೆ ಬಸವೇಶ್ವರ ದೇವಾಲಯದಲ್ಲಿ ಸಾಮೂಹಿಕ ಗಣ ಹೋಮ ಜರುಗಿತು. ದೇವಾಲಯದ ಅಧ್ಯಕ್ಷರಾದ ಕೊಳೇರ ದಯ ಚೆಂಗಪ್ಪ ಮತ್ತು ದೇವಾಲಯದ ಪದಾಧಿಕಾರಿಗಳು, ಸಮಿತಿ ಸದಸ್ಯರು ಸಕಲ ವ್ಯವಸ್ತೆಯನ್ನು ಸಜ್ಜುಗೊಳಿಸಿದರು.

ದೇವಾಲಯದ ಅರ್ಚಕರಾದ ಪಂಚಾಕ್ಷರಿ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದರು. ದೇವಾಲಯವು ಸಂಪೂರ್ಣವಾಗಿ ಹೂವಿನಿಂದ ಅಲಂಕರಿಸಲಾಗಿತ್ತು. ಒಟ್ಟಿನಲ್ಲಿ ಪೊನ್ನಂಪೇಟೆಯಲ್ಲಿ ಈ ಬಾರಿ ಗೌರಿ ಗಣೇಶನನ್ನು ಶುದ್ಧಾ ಭಕ್ತಿ ಹಾಗೂ ವಿಜೃಂಭಣೆಯಿಂದ ಬರ ಮಾಡಿಕೊಂಡಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಡಿ.24ರಂದು ಮಹಾಸಭಾದಿಂದ ಶಾಮನೂರು ನುಡಿ ನಮನ: ಈಶ್ವರ ಖಂಡ್ರೆ

ಬೆಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಹಿರಿಯ ಶಾಸಕ, ಕೊಡುಗೈ ದಾನಿ ಡಾ.ಶಾಮನೂರು ಶಿವಶಂಕರಪ್ಪ ಅವರಿಗೆ ಇದೇ 24ರಂದು ಅಖಿಲ ಭಾರತ…

12 mins ago

ಸೋನಿಯಾ ಗಾಂಧಿ, ರಾಹುಲ್‌ ಗಾಂಧಿಗೆ ಹೈಕೋರ್ಟ್‌ನಿಂದ ನೋಟಿಸ್‌

ನವದೆಹಲಿ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹಾಗೂ ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ…

22 mins ago

6 ತಿಂಗಳಿಂದ ಸಂಬಳ ಕೊಡದ ಸರ್ಕಾರ: ರಾಜೀನಾಮೆ ಕೊಟ್ಟ ವೈದ್ಯ

ಮಂಗಳೂರು: ಗುತ್ತಿಗೆ ಆಧಾರದ ಮೇಲೆ ನೇಮಕಗೊಂಡಿದ್ದ ಕೊಲ್ಲಮೊಗ್ರು ಪ್ರಾಥಮಿಕ ಕೇಂದ್ರದ ವೈದ್ಯಾಧಿಕಾರಿಗಳು ಆರು ತಿಂಗಳಿಂದ ಸರಿಯಾಗಿ ಸಂಬಳ ಆಗದ ಕಾರಣ…

1 hour ago

ಸರಗೂರು ತಾಲ್ಲೂಕು ಕಚೇರಿಯಲ್ಲಿ ಆರ್‌ಡಿಎಕ್ಸ್‌ ಸ್ಫೋಟಕ ಇಟ್ಟಿರುವುದಾಗಿ ಬೆದರಿಕೆ

ಮೈಸೂರು: ಮೈಸೂರು ಜಿಲ್ಲೆ ಸರಗೂರಿನ ತಾಲ್ಲೂಕು ಕಚೇರಿ ಹಾಗೂ ಹಾಸನದ ಆಲೂರು ತಾಲ್ಲೂಕು ಕಚೇರಿಗಳಿಗೆ ಇ-ಮೇಲ್‌ ಮೂಲಕ ಬಾಂಬ್‌ ಬೆದರಿಕೆ…

2 hours ago

ಕುಂಬಳಕಾಯಿ ಕಳ್ಳ ಅಂದರೆ ಬಿಜೆಪಿಯವರು ಯಾಕೆ ಹೆಗಲು ಮುಟ್ಟಿ ನೋಡಿಕೊಳ್ಳುತ್ತಿದ್ದಾರೆ? ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಮೈಸೂರು: ಪ್ರಚೋದನಕಾರಿ ಭಾಷಣ ಮಾಡುವವರು ಮಾತ್ರ ವಿರೋಧಿಸುತ್ತಾರೆ. ಪ್ರಚೋದನಾಕಾರಿ ಭಾಷಣ ಮಾಡದೆ ಹೋದರೆ ಸುಮ್ಮನೆ ಪ್ರಕರಣ ದಾಖಲಿಸುವುದಿಲ್ಲ ಎಂದರು. ಬಿಜೆಪಿಯವರು…

2 hours ago

ಮೈಸೂರು| ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ

ಮೈಸೂರು: ಸಿಎಂ ಸಿದ್ದರಾಮಯ್ಯ ಅವರಿಂದು ತಮ್ಮ ನಿವಾಸದ ಬಳಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಕೆಲ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ಸೂಚಿಸಿದ…

2 hours ago