ಕೊಡಗು

ಮಡಿಕೇರಿ: ಗ್ರೇಟರ್ ರಾಜಾಸೀಟ್ ಅಕ್ರಮ;ತನಿಖೆ ಆರಂಭಿಸಿದ ಲೋಕಾಯುಕ್ತ

ಮಡಿಕೇರಿ:  ಇಲ್ಲಿ ನಿರ್ಮಾಣವಾಗಿರುವ ಗ್ರೇಟರ್ ರಾಜಾ ಸೀಟ್ ಕಾಮಗಾರಿಯಲ್ಲಿ ಬಹು ಅಕ್ರಮ ನಡೆದಿದೆ ಹಾಗೂ ನಕಲಿ ಎಂ.ಬಿ.ಪುಸ್ತಕ ಸೃಷ್ಟಿಸಿ ಅಪರಾಧ ಎಸಗಿದ್ದಾರೆ ಎಂದು ಅಂದಿನ ಲೋಕೋಪಯೋಗಿ ಜ್ಯೂನಿಯರ್ ಇಂಜಿನಿಯರ್ ಕೆ.ಎಲ್.ದೇವರಾಜ್ ಮತ್ತು ಮೇಲಾಧಿಕಾರಿಗಳ ವಿರುದ್ಧ ಕಾಂಗ್ರೆಸ್ ಮುಖಂಡ ತೆನ್ನಿರ ಮೈನಾ ಕರ್ನಾಟಕ ಲೋಕಾಯುಕ್ತ ಕ್ಕೆ ಸಲ್ಲಿಸಿದ್ದ ದೂರಿನ ಹಿನ್ನಲೆಯಲ್ಲಿ ಸೋಮವಾರ
ಕರ್ನಾಟಕ ಲೋಕಾಯುಕ್ತದ ತಾಂತ್ರಿಕ ವಿಭಾಗದ ತನಿಖಾಧಿಕಾರಿ ತೇಜಶ್ರೀ ಬಿ.ಮದ್ದೋಡಿ ಲೋಕೋಪಯೋಗಿ ಅಧಿಕಾರಿಗಳನ್ನು ತೀವ್ರ ವಿಚಾರಣೆಗೆ ಒಳಪಡಿಸಿ ದಾಖಲೆಗಳನ್ನು ಪರಿಶೀಲಿಸಿ ಸಂಗ್ರಹಿಸಿದರು.

ಆರಂಭದಲ್ಲಿ ಆರೋಪಿತ ಕಿರಿಯ ಇಂಜಿನಿಯರ್ ಎಂ.ಬಿ‌.ಪುಸ್ತಕ ಅಸಲಿ ಎಂದು ವಾದಿಸಿದರೂ ಕೊನೆಗೆ ತನಿಖಾಧಿಕಾರಿ ಎಲ್ಲಾ ಕೋನಗಳಲ್ಲಿ ಪರಿಶೀಲಿಸಿ ನಕಲಿ ಎನ್ನಲು ಒಟ್ಟು ಐದು ಆಧಾರಗಳನ್ನು ಗುರುತಿಸಿ ನೋಟ್ ಮಾಡಿಕೊಂಡರು.

ಕಾರ್ಯಪಾಲಕ ಅಭಿಯಂತರರಾದ ಸಿದ್ದೇ ಗೌಡ  ಕಾಮಗಾರಿಗಳ ವಿವರಣೆಗಳನ್ನು ಸಹಾಯಕ ಕಾರ್ಯಪಾಲಕ ಅಭಿಯಂತರರು ವರದಿ ಮಾಡಿ ಸಲ್ಲಿಸಿದ್ದನ್ನು ಲೋಕಾಯುಕ್ತ ಅಧಿಕಾರಿಣಿ ತೇಜಶ್ರೀಗೆ ನೀಡಿದರು.

ನಂತರ ದೂರುದಾರ ತೆನ್ನಿರ ಮೈನಾ ಮತ್ತು ಲೋಕೋಪಯೋಗಿ ಅಧಿಕಾರಿಗಳೊಂದಿಗೆ ತೇಜಶ್ರೀ  ರಾಜಾಸೀಟ್ ಗೆ ತೆರಳಿ ಸ್ಥಳ ಪರಿಶೀಲನೆ ಮಾಡಿದರು.

2023 ರ ಮಾರ್ಚ್ 18 ರಂದು ಲೋಕಾರ್ಪಣೆ ಆದ ಗ್ರೇಟರ್ ರಾಜಾ ಸೀಟ್ ಇನ್ನೂ ತೋಟಗಾರಿಕೆ ಇಲಾಖೆಗೆ ಹಸ್ತಾಂತರ ಮಾಡದೇ ಇರುವ ಬಗ್ಗೆ ಲೋಕೋಪಯೋಗಿ ಇಂಜಿನಿಯರ್ ಗಳಿಂದ ವಿವರಣೆ ಪಡೆದರು. ಉತ್ತರ ನೀಡಲು ತಡಬಡಿಸಿದ ಇಂಜಿನಿಯರ್ ಅನ್ನು ತರಾಟೆಗೆ ತೆಗೆದುಕೊಂಡರು.

ಅಲ್ಲಲ್ಲಿ ಬಿರುಕು ಬಿಟ್ಟ ಕಾಮಗಾರಿಗಳು,ಹಾರಿಹೋದ ಹೆಂಚುಗಳು , ಕರೆಂಟ್ ಸಂಪರ್ಕ ಇಲ್ಲದ ಲೈಟುಗಳು. ಒಡೆದು ಹೋದ ಗ್ರಾನೆಟ್ ಕಲ್ಲುಗಳು, ಯದ್ವಾ ತದ್ವಾ ಹರಿದಾಡಿದ್ದ ಇಂಟರ್ ಲಾಕ್ ,ದೂರ ದೂರ ಇರುವ ಗಿಡಗಳು ಸೇರಿದಂತೆ ಎಲ್ಲವನ್ನೂ ತಮ್ಮ ಸಿಬ್ಬಂದಿಯಿಂದ ಚಿತ್ರೀಕರಿಸಿಕೊಂಡರು.

ನಾಳೆ ದಿನ ನಿರ್ವಹಣೆ ಹೊತ್ತ ಎ.ಇ.ಇ ಮತ್ತು ಇ.ಇ ರವರಿಗೆ ಮಡಿಕೇರಿಗೆ ಬಂದು ತನಿಖೆಗೆ ಹಾಜರಾಗಲು ಸೂಚನೆಯನ್ನು ನೀಡಿದ್ದಾರೆ.ನಾಳೆ ಪೂರ್ಣವಾಗಿ ತನಿಖೆ ನಡೆಯಲಿದೆ.

ಈ ಸಂಧರ್ಭದಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ತೆನ್ನಿರ ಮೈನಾ, ಈಗಾಗಲೇ ಕಿರಿಯ ಇಂಜಿನಿಯರ್ ಕೆ.ಎಲ್.ದೇವರಾಜ್ ನಕಲಿ ಎಂಬಿ ಪುಸ್ತಕ ರಚಿಸಿ ಅಪರಾಧ ಎಸಗಿದ್ದು ಕಂಡು ಬಂದಿದ್ದು ಮುಂದೆ ಅಕ್ರಮದ ವಿವರಗಳು ಬಹಿರಂಗವಾಗಿ ತಪ್ಪಿತಸ್ಥರಿಗೆ ಶಿಕ್ಷೆ ಆಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ಸಂಧರ್ಭದಲ್ಲಿ ಮಡಿಕೇರಿ ನಗರ ಸಭೆಯ ಅಧ್ಯಕ್ಷರಾದ ಹೆಚ್.ಎಂ.ನಂದಕುಮಾರ್ ಉಪಸ್ಥಿತರಿದ್ದು, ಕಾಮಗಾರಿಯ ಗುಣಮಟ್ಟದ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

5 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

5 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

5 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

5 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

5 hours ago

ಹಿಂದಿನ ಉಸ್ತುವಾರಿಗಿದ್ದ ಖಾತೆಗಳು ಪುಟ್ಟರಂಗಶೆಟ್ಟರಿಗೆ!

ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ  ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…

5 hours ago