ಕೊಡಗು

ಮಡಿಕೇರಿ | ಮನೆಗಳವು ಮಾಡಿದ್ದ ಖದೀಮರು ಬಂಧನ

ಮಡಿಕೇರಿ : ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಒಳನುಗ್ಗಿ ನಗದು ಹಾಗೂ ಚಿನ್ನಾಭರಣ ಕಳವು ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಮಡಿಕೇರಿ ಗ್ರಾಮಾಂತರ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ.

ಶಿವಮೊಗ್ಗ ಜಿಲ್ಲೆ ಭದ್ರವತಿ ತಾಲ್ಲೂಕಿನ ಸಿದ್ದಾಪುರ ಗ್ರಾಮದ ನಿವಾಸಿಗಳಾದ ಎನ್.ಸಿದ್ದಲಿಂಗ (28) ಮತ್ತು ಎನ್.ರಘು (26) ಬಂಧಿತ ಆರೋಪಿಗಳು.

ನ.5ರಂದು ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ಸರಹದ್ದಿನಲ್ಲಿರುವ ಎಂ.ಚೆಂಬು ಗ್ರಾಮದ ನಿವಾಸಿ ಪಿ.ಪಿ. ವೀರಪ್ಪ ಅವರ ಮನೆಯ ರೂಮಿನಲ್ಲಿದ್ದ ಗಾಡ್ರೇಜ್‌ನ ಸಣ್ಣ ಕ್ಯಾಶ್ ಲಾಕರ್‌ನಲ್ಲಿ ಇಟ್ಟಿದ್ದ 15,000 ರೂ. ನಗದು ಮತ್ತು 120 ಗ್ರಾಂ ಚಿನ್ನಾಭರಣಗಳನ್ನು ಕಳವು ಮಾಡಲಾಗಿತ್ತು. ಈ ಸಂಬಂಧ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನು ಓದಿ: ಶಬರಿಮಲೆಯಲ್ಲಿ ಚಿನ್ನ ಕಳ್ಳತನ ಪ್ರಕರಣ: ಮಾಜಿ ಕಾರ್ಯನಿರ್ವಾಹಕ ಅಧಿಕಾರಿ ಸುಧೀಶ್‌ ಕುಮಾರ್‌ ಬಂಧನ

ಪ್ರಕರಣದ ಆರೋಪಿಗಳ ಪತ್ತೆಗಾಗಿ ಮಡಿಕೇರಿ ಉಪವಿಭಾಗ ಡಿಎಸ್‌ಪಿ ಪಿ.ಎ.ಸೂರಜ್, ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆ ಪಿಐ ಹೆಚ್.ವಿ. ಚಂದ್ರಶೇಖರ್, ಸಿದ್ದಾಪುರ ಪೊಲೀಸ್ ಠಾಣೆ ಪಿಎಸ್‌ಐ ಮಂಜುನಾಥ್ ಮತ್ತು ಉಪವಿಭಾಗ ಮಟ್ಟದ ಅಪರಾಧ ಪತ್ತೆ ಸಿಬ್ಬಂದಿ ಮತ್ತು ತಾಂತ್ರಿಕ ಸಿಬ್ಬಂದಿ ಒಳಗೊಂಡಂತೆ ವಿಶೇಷ ತನಿಖಾ ತಂಡವನ್ನು ರಚಿಸಿ ಮಾಹಿತಿ ಸಂಗ್ರಹಿಸಿ ನ.10ರಂದು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರಿಂದ 8,50,000 ರೂ. ನಗದು ಮತ್ತು 120 ಗ್ರಾಂ ತೂಕದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.

ಪ್ರಕರಣದ ಆರೋಪಿಗಳನ್ನು ಪತ್ತೆ ಮಾಡಿ ಕಳವು ಮಾಲನ್ನು ವಶಪಡಿಸಿಕೊಳ್ಳುವಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ಪೊಲೀಸ್ ಅಧಿಕ್ಷಕ ಕೆ.ರಾಮರಾಜನ್, ಹೆಚ್ಚುವರಿ ಪೊಲೀಸ್ ಅಧಿಕ್ಷಕ ಬಿ.ಪಿ.ದಿನೇಶ್ ಕುಮಾರ್ ಶ್ಲಾಘಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಚಾ.ನಗರ | ಟೊಮೆಟೊ ದರ ಕುಸಿತ; ರೈತರಿಂದ ಹೆದ್ದಾರಿ ತಡೆ

ಚಾಮರಾಜನಗರ : ಟೊಮೆಟೊ ದರ ಕುಸಿತ ಖಂಡಿಸಿ, ಬೆಲೆ ತಾರತಮ್ಯ ವಿರೋಧಿಸಿ ತಾಲ್ಲೂಕಿನ ಚಿಕ್ಕಹೊಳೆ ಚೆಕ್‌ಪೋಸ್ಟ್ ಬಳಿ ಸಾಮೂಹಿಕ ನಾಯಕತ್ವದ…

7 hours ago

ಪಂಜಾಬ್‌ | ಪಾಕ್‌ ಪೋಷಿತ ಉಗ್ರ ಘಟಕದ ಮೇಲೆ ದಾಳಿ, ಇಬ್ಬರ ಬಂಧನ

ಅಮೃತಸರ : ಪಂಜಾಬ್‌ ಪೊಲೀಸರು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ಪೋಷಿತ ಭಯೋತ್ಪಾದಕ ಘಟಕವೊಂದನ್ನು ಭೇದಿಸಿ, ಇಬ್ಬರು ಶಂಕಿತರನ್ನು ಬಂಧಿಸಿದ್ದಾರೆ.…

7 hours ago

ಅಮೆರಿಕದೊಂದಿಗೆ ಮಾತುಕತೆ ಇಲ್ಲ, ದೀರ್ಘಕಾಲದ ಯುದ್ಧಕ್ಕೆ ಸಿದ್ಧ ; ಇರಾನ್‌

ಹೊಸದಿಲ್ಲಿ : ಇರಾನ್‌ ನಮ್ಮ ಜೊತೆ ಮಾತುಕತೆಗೆ ಸಿದ್ಧವಿದೆ ಎಂದಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿಕೆಯನ್ನು ತಳ್ಳಿ ಹಾಕಿರುವ…

8 hours ago

ನಂಜನಗೂಡು | ನಾಲೆಯಲ್ಲಿ ನವಜಾತ ಶಿಶು ಪತ್ತೆ

ನಂಜನಗೂಡು : ನವಜಾತ ಶಿಶುವನ್ನು ನಾಲೆಗೆ ಎಸೆದ ದುರಂತ ಘಟನೆ ನಂಜನಗೂಡು ತಾಲ್ಲೂಕಿನ ನಗರ್ಲೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶ್ರೀ…

9 hours ago

ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ : ಮುಖ್ಯಮಂತ್ರಿ

ಬಾಗಲಕೋಟೆ : ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ…

10 hours ago

ಮಹದೇಶ್ವರ ಬೆಟ್ಟ | ದಾಸೋಹ-ಲಾಡು ಪ್ರಸಾದಕ್ಕೆ ಸಿಲಿಂಡರ್ ಕೊರತೆ ಇಲ್ಲ ; ಅಪಪ್ರಚಾರಕ್ಕೆ ಕಿವಿಗೊಡದಿರಿ

ಹನೂರು : ಶ್ರೀಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುವ ದಾಸೋಹ, ಲಾಡು ಪ್ರಸಾದ ತಯಾರಿಸಲು ಯಾವುದೇ ರೀತಿಯ ಸಿಲಿಂಡರ್ ಕೊರತೆಯಾಗಿಲ್ಲ…

11 hours ago