ಕೊಡಗು

ಮಡಿಕೇರಿ | ಮನೆಗಳವು ಮಾಡಿದ್ದ ಖದೀಮರು ಬಂಧನ

ಮಡಿಕೇರಿ : ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಒಳನುಗ್ಗಿ ನಗದು ಹಾಗೂ ಚಿನ್ನಾಭರಣ ಕಳವು ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಮಡಿಕೇರಿ ಗ್ರಾಮಾಂತರ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ.

ಶಿವಮೊಗ್ಗ ಜಿಲ್ಲೆ ಭದ್ರವತಿ ತಾಲ್ಲೂಕಿನ ಸಿದ್ದಾಪುರ ಗ್ರಾಮದ ನಿವಾಸಿಗಳಾದ ಎನ್.ಸಿದ್ದಲಿಂಗ (28) ಮತ್ತು ಎನ್.ರಘು (26) ಬಂಧಿತ ಆರೋಪಿಗಳು.

ನ.5ರಂದು ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ಸರಹದ್ದಿನಲ್ಲಿರುವ ಎಂ.ಚೆಂಬು ಗ್ರಾಮದ ನಿವಾಸಿ ಪಿ.ಪಿ. ವೀರಪ್ಪ ಅವರ ಮನೆಯ ರೂಮಿನಲ್ಲಿದ್ದ ಗಾಡ್ರೇಜ್‌ನ ಸಣ್ಣ ಕ್ಯಾಶ್ ಲಾಕರ್‌ನಲ್ಲಿ ಇಟ್ಟಿದ್ದ 15,000 ರೂ. ನಗದು ಮತ್ತು 120 ಗ್ರಾಂ ಚಿನ್ನಾಭರಣಗಳನ್ನು ಕಳವು ಮಾಡಲಾಗಿತ್ತು. ಈ ಸಂಬಂಧ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನು ಓದಿ: ಶಬರಿಮಲೆಯಲ್ಲಿ ಚಿನ್ನ ಕಳ್ಳತನ ಪ್ರಕರಣ: ಮಾಜಿ ಕಾರ್ಯನಿರ್ವಾಹಕ ಅಧಿಕಾರಿ ಸುಧೀಶ್‌ ಕುಮಾರ್‌ ಬಂಧನ

ಪ್ರಕರಣದ ಆರೋಪಿಗಳ ಪತ್ತೆಗಾಗಿ ಮಡಿಕೇರಿ ಉಪವಿಭಾಗ ಡಿಎಸ್‌ಪಿ ಪಿ.ಎ.ಸೂರಜ್, ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆ ಪಿಐ ಹೆಚ್.ವಿ. ಚಂದ್ರಶೇಖರ್, ಸಿದ್ದಾಪುರ ಪೊಲೀಸ್ ಠಾಣೆ ಪಿಎಸ್‌ಐ ಮಂಜುನಾಥ್ ಮತ್ತು ಉಪವಿಭಾಗ ಮಟ್ಟದ ಅಪರಾಧ ಪತ್ತೆ ಸಿಬ್ಬಂದಿ ಮತ್ತು ತಾಂತ್ರಿಕ ಸಿಬ್ಬಂದಿ ಒಳಗೊಂಡಂತೆ ವಿಶೇಷ ತನಿಖಾ ತಂಡವನ್ನು ರಚಿಸಿ ಮಾಹಿತಿ ಸಂಗ್ರಹಿಸಿ ನ.10ರಂದು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರಿಂದ 8,50,000 ರೂ. ನಗದು ಮತ್ತು 120 ಗ್ರಾಂ ತೂಕದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.

ಪ್ರಕರಣದ ಆರೋಪಿಗಳನ್ನು ಪತ್ತೆ ಮಾಡಿ ಕಳವು ಮಾಲನ್ನು ವಶಪಡಿಸಿಕೊಳ್ಳುವಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ಪೊಲೀಸ್ ಅಧಿಕ್ಷಕ ಕೆ.ರಾಮರಾಜನ್, ಹೆಚ್ಚುವರಿ ಪೊಲೀಸ್ ಅಧಿಕ್ಷಕ ಬಿ.ಪಿ.ದಿನೇಶ್ ಕುಮಾರ್ ಶ್ಲಾಘಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

2 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

2 hours ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

3 hours ago

ಕಪ್ಪು ವರ್ಣೀಯರ ಕಣ್ಣೀರ ಕಥನ

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…

3 hours ago

ಯಶ್: ‘ಟಾಕ್ಸಿಕ್’ ಬೆನ್ನೇರಿದ ಯಶೋ ಮಾರ್ಗ

ವೈಡ್‌ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…

3 hours ago

ರೈತರ ಪಾಲಿಗೆ ಕಹಿಯಾದ ಸಿಹಿಗುಂಬಳ

ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ  ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…

3 hours ago