ಕೊಡಗು

ಮಡಿಕೇರಿ: ಹೋಟೆಲ್, ರೆಸ್ಟೋರೆಂಟ್, ಬೇಕರಿ, ಮಾಂಸದ ಅಂಗಡಿಗಳ ಪರಿಶೀಲನೆ

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ ಅನುಷ್ಠಾನ

ಮಡಿಕೇರಿ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರ ಮತ್ತು ಆಯುಕ್ತರು, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಬೆಂಗಳೂರು ಅವರ ಸೂಚನೆ ಮೇರೆಗೆ ಎರಡು ದಿನಗಳ ಕಾಲ ಅಂಕಿತಾಧಿಕಾರಿಗಳ ಕಚೇರಿ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ, ಕೊಡಗು ಜಿಲ್ಲೆ ಅವರಿಂದ ವಿಶೇಷ ಆಂದೋಲನ ಹಮ್ಮಿಕೊಳ್ಳಲಾಗಿತ್ತು.

ಈ ಆಂದೋಲನದಲ್ಲ್ಷಿ ಜಿಲ್ಲೆಯಾದ್ಯಾಂತ ಹೋಟೆಲ್, ರೆಸ್ಟೋರೆಂಟ್, ಬೇಕರಿ, ಬೀದಿಬದಿಯ ವ್ಯಾಪಾರಿಗಳು ಕ್ಯಾಂಟೀನ್ ಮತ್ತಿತರ ಸುಮಾರು 54 ಘಟಕಗಳಿಗೆ ಭೇಟಿ ನೀಡಿ ಕಾಯ್ದೆಯಡಿ ಪರಿಶೀಲನೆ ನಡೆಸಿ ಆಹಾರ ಮಾದರಿಗಳನ್ನು ಸಂಗ್ರಹಿಸಲಾಯಿತು.

ಕಾಯ್ದೆ ಉಲಂಘನೆ ಸಂಬಂಧಿಸಿದಂತೆ ಸುಮಾರು 10 ಸಾವಿರ ದಂಡವನ್ನು ಮತ್ತು 37 ಆಹಾರ ಉದ್ದಿಮೆದಾರರಿಗೆ ನೋಟೀಸ್ ನೀಡಲಾಯಿತು. ಸಾರ್ವಜನಿಕರ ಹಿತದೃಪ್ಠಿಯಿಂದ ಶುಚಿತ್ವ ಕಾಪಾಡಿಕೊಂಡು ಶುದ್ಧವಾದ ಆಹಾರವನ್ನು ಗ್ರಾಹಕರಿಕೆ ನೀಡುವುದು, ಕಾಯ್ದೆಯ ಮಾನದಂಡಗಳಿಗೆ ಮೀರಿ ಕೃತಕ ಬಣ್ಣಗಳನ್ನು ಆಹಾರ ತಯಾರಿಕೆ ಬಳಸುವುದನ್ನು ಕಡ್ಡಾಯವಾಗಿ ನಿಷೇದಿಸಲಾಗಿದೆ ಎಂಬ ಮಾಹಿತಿಯನ್ನು ಈ ಆಂದೋಲನದಲ್ಲಿ ಸೂಚಿಸಲಾಯಿತು.

ಆಯುಕ್ತರು (ಎಫ್.ಎಸ್.ಎಸ್.ಎ) ಅವರ ಸೂಚನೆಯಂತೆ ಸೋಮವಾರ ವಿಶೇಷವಾದ ಆಂದೋಲನವನ್ನು ಹಮ್ಮಿಕೊಂಡು ಜಿಲ್ಲೆಯಾದ್ಯಾಂತ ಮೊಟ್ಟೆ, ಕೋಳಿ, ಮಾಂಸ/ಮಾಂಸದ ಪದಾರ್ಥಗಳ ಸಂಗ್ರಹಕರು, ಮಾರಾಟಗಾರರು ಮತ್ತು ತಯಾರಿಕಾ ಸ್ಥಳಗಳಿಗೆ ದಿಡೀರ್ ಭೇಟಿ ನೀಡಿ ಪದಾರ್ಥಗಳನ್ನು ಸೂಕ್ತವಾದ ತಾಪಮಾನದಲ್ಲಿ ಸಂಗ್ರಹಿಸಿ ಗ್ರಾಹಕರಿಗೆ ನೀಡುತ್ತಿದ್ದಾರೆಯೇ ಮತ್ತು ತ್ಯಾಜ್ಯ ವಸ್ತುಗಳ ಸೂಕ್ತ ನಿರ್ವಹಣೆ ಸಂಬಂಧಿಸಿದಂತೆ ಪರಿಶೀಲನೆ ನಡೆಸಲಾಯಿತು.

ಹಳೆಯ ಮಾಂಸ/ಮಾಂಸದ ಪದಾರ್ಥಗಳನ್ನು ಕೆಡದಂತೆ ಹಾನಿಕಾರಕ ರಾಸಾಯನಿಕಗಳನ್ನು ಬಳಸಲಾಗುತ್ತಿದೆಯೇ ಎಂಬ ಬಗ್ಗೆಯೂ ಪರಿಶೀಲನೆಯನ್ನು ನಡೆಸಿ ಸಂಶಯಾಸ್ಪದ 11 ಆಹಾರ ಪದಾರ್ಥಗಳನ್ನು ಸಂಗ್ರಹಿಸಲಾಯಿತು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕುರ್ಚಿಗಾಗಿ ಜಾತಿ ಎಳೆದು ತಂದಿದ್ದಾರೆ ಎಂಬ ಎಚ್‌ಡಿಕೆ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ರಿಯಾಕ್ಷನ್‌

ಬೆಂಗಳೂರು: ಸಾಮಾಜಿಕ ದಿನದ ಆಚರಣೆಯ ಅಂಗವಾಗಿ ಪತ್ರಿಕೆಯೊಂದಕ್ಕೆ ನಾನು ಬರೆದಿದ್ದ ಲೇಖನ ರಾಜ್ಯದ ರಾಜಕೀಯ ವಲಯದಲ್ಲಿ ಬಹುಮುಖಿ ಚರ್ಚೆಗೆ ಒಳಗಾಗಿದೆ…

1 hour ago

ಹನೂರು| ಫೆ.25ರಂದು ವಾಂಗಾಳಿ ಅಮ್ಮನವರ ವಿಗ್ರಹ ಪ್ರತಿಷ್ಠಾಪನೆ ಕಾರ್ಯಕ್ರಮ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಚಂಗವಾಡಿ ಗ್ರಾಮದ ಭೋವಿ ಬಡಾವಣೆಯಲ್ಲಿ ನೂತನವಾಗಿ ನಿರ್ಮಾಣ ಮಾಡಿರುವ…

1 hour ago

ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್‌ ಮತ್ತೆ ಆಸ್ಪತ್ರೆಗೆ ದಾಖಲು

ಮುಂಬೈ: ರಾಷ್ಟ್ರೀಯತಾವಾದಿ ಕಾಂಗ್ರೆಸ್‌ ಪಕ್ಷದ ಮುಖ್ಯಸ್ಥ ಶರದ್‌ ಪವಾಋ ಅವರನ್ನು ಇಂದು ಪುಣೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶರದ್‌ ಪವಾರ್‌…

2 hours ago

ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಶೀಘ್ರದಲ್ಲಿಯೇ ಬ್ಯಾನ್‌ ಆಗಲಿದೆ ಮೊಬೈಲ್?:‌ ಸಿಎಂ ಸಿದ್ದರಾಮಯ್ಯ ಸುಳಿವು

ಬೆಂಗಳೂರು: ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಮೊಬೈಲ್‌ ಫೋನ್‌ ನಿಷೇಧ ಮಾಡುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಚಿಂತನೆ ನಡೆಸಿದೆ.…

3 hours ago

ಎಐ ಇಂಪ್ಯಾಕ್ಟ್‌ ಶೃಂಗಸಭೆ ಒಂದು ಮಹತ್ವದ ತಿರುವು: 131ನೇ ಮನ್‌ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ ಸಂತಸ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ ಮನ್‌ ಕಿ ಬಾತ್‌ನ 131ನೇ ಸಂಚಿಕೆಯಲ್ಲಿ…

3 hours ago

ಮಾಜಿ ಶಾಸಕ ಸುರೇಶ್‌ ಗೌಡ ಕಾರು ಅಪಘಾತ

ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ನಾಗಮಂಗಲದ ಜೆಡಿಎಸ್‌ ಮಾಜಿ ಶಾಸಕ ಸುರೇಶ್‌ ಗೌಡ ಕಾರು ಪಲ್ಟಿಯಾಗಿ ಅಪಘಾತ ಸಂಭವಿಸಿರುವ ಘಟನೆ…

3 hours ago