ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ ಅನುಷ್ಠಾನ
ಮಡಿಕೇರಿ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರ ಮತ್ತು ಆಯುಕ್ತರು, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಬೆಂಗಳೂರು ಅವರ ಸೂಚನೆ ಮೇರೆಗೆ ಎರಡು ದಿನಗಳ ಕಾಲ ಅಂಕಿತಾಧಿಕಾರಿಗಳ ಕಚೇರಿ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ, ಕೊಡಗು ಜಿಲ್ಲೆ ಅವರಿಂದ ವಿಶೇಷ ಆಂದೋಲನ ಹಮ್ಮಿಕೊಳ್ಳಲಾಗಿತ್ತು.
ಈ ಆಂದೋಲನದಲ್ಲ್ಷಿ ಜಿಲ್ಲೆಯಾದ್ಯಾಂತ ಹೋಟೆಲ್, ರೆಸ್ಟೋರೆಂಟ್, ಬೇಕರಿ, ಬೀದಿಬದಿಯ ವ್ಯಾಪಾರಿಗಳು ಕ್ಯಾಂಟೀನ್ ಮತ್ತಿತರ ಸುಮಾರು 54 ಘಟಕಗಳಿಗೆ ಭೇಟಿ ನೀಡಿ ಕಾಯ್ದೆಯಡಿ ಪರಿಶೀಲನೆ ನಡೆಸಿ ಆಹಾರ ಮಾದರಿಗಳನ್ನು ಸಂಗ್ರಹಿಸಲಾಯಿತು.
ಕಾಯ್ದೆ ಉಲಂಘನೆ ಸಂಬಂಧಿಸಿದಂತೆ ಸುಮಾರು 10 ಸಾವಿರ ದಂಡವನ್ನು ಮತ್ತು 37 ಆಹಾರ ಉದ್ದಿಮೆದಾರರಿಗೆ ನೋಟೀಸ್ ನೀಡಲಾಯಿತು. ಸಾರ್ವಜನಿಕರ ಹಿತದೃಪ್ಠಿಯಿಂದ ಶುಚಿತ್ವ ಕಾಪಾಡಿಕೊಂಡು ಶುದ್ಧವಾದ ಆಹಾರವನ್ನು ಗ್ರಾಹಕರಿಕೆ ನೀಡುವುದು, ಕಾಯ್ದೆಯ ಮಾನದಂಡಗಳಿಗೆ ಮೀರಿ ಕೃತಕ ಬಣ್ಣಗಳನ್ನು ಆಹಾರ ತಯಾರಿಕೆ ಬಳಸುವುದನ್ನು ಕಡ್ಡಾಯವಾಗಿ ನಿಷೇದಿಸಲಾಗಿದೆ ಎಂಬ ಮಾಹಿತಿಯನ್ನು ಈ ಆಂದೋಲನದಲ್ಲಿ ಸೂಚಿಸಲಾಯಿತು.
ಆಯುಕ್ತರು (ಎಫ್.ಎಸ್.ಎಸ್.ಎ) ಅವರ ಸೂಚನೆಯಂತೆ ಸೋಮವಾರ ವಿಶೇಷವಾದ ಆಂದೋಲನವನ್ನು ಹಮ್ಮಿಕೊಂಡು ಜಿಲ್ಲೆಯಾದ್ಯಾಂತ ಮೊಟ್ಟೆ, ಕೋಳಿ, ಮಾಂಸ/ಮಾಂಸದ ಪದಾರ್ಥಗಳ ಸಂಗ್ರಹಕರು, ಮಾರಾಟಗಾರರು ಮತ್ತು ತಯಾರಿಕಾ ಸ್ಥಳಗಳಿಗೆ ದಿಡೀರ್ ಭೇಟಿ ನೀಡಿ ಪದಾರ್ಥಗಳನ್ನು ಸೂಕ್ತವಾದ ತಾಪಮಾನದಲ್ಲಿ ಸಂಗ್ರಹಿಸಿ ಗ್ರಾಹಕರಿಗೆ ನೀಡುತ್ತಿದ್ದಾರೆಯೇ ಮತ್ತು ತ್ಯಾಜ್ಯ ವಸ್ತುಗಳ ಸೂಕ್ತ ನಿರ್ವಹಣೆ ಸಂಬಂಧಿಸಿದಂತೆ ಪರಿಶೀಲನೆ ನಡೆಸಲಾಯಿತು.
ಹಳೆಯ ಮಾಂಸ/ಮಾಂಸದ ಪದಾರ್ಥಗಳನ್ನು ಕೆಡದಂತೆ ಹಾನಿಕಾರಕ ರಾಸಾಯನಿಕಗಳನ್ನು ಬಳಸಲಾಗುತ್ತಿದೆಯೇ ಎಂಬ ಬಗ್ಗೆಯೂ ಪರಿಶೀಲನೆಯನ್ನು ನಡೆಸಿ ಸಂಶಯಾಸ್ಪದ 11 ಆಹಾರ ಪದಾರ್ಥಗಳನ್ನು ಸಂಗ್ರಹಿಸಲಾಯಿತು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಲಗುಮೂಲೆ ಗ್ರಾಮದಲ್ಲಿ 3 ವರ್ಷಕ್ಕೊಮ್ಮೆ ನಡೆಯುವ ಶ್ರೀ ಬಸವೇಶ್ವರ…
ನಂಜನಗೂಡು: ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕೆಲಸಗಳಿಗೂ ಆದ್ಯತೆ ನೀಡಲಾಗುತ್ತಿದ್ದು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು…
ಬೆಂಗಳೂರು: ಪ್ರಸಕ್ತ ಎಸ್ಎಸ್ಎಲ್ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾಗಿರುವ ಎಲ್ಲಾ ವಿದ್ಯಾರ್ಥಿಗಳನ್ನು ಮುಂಬರುವ ಪರೀಕ್ಷೆ-2ಕ್ಕೆ ಕಡ್ಡಾಯವಾಗಿ ನೋಂದಾಯಿಸಿ, ಅವರನ್ನು ಶೈಕ್ಷಣಿಕವಾಗಿ ಸಜ್ಜುಗೊಳಿಸಲು ಅಗತ್ಯ…
ರಾಮನಗರ: ಮೇ.15ಕ್ಕೆ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗುವುದು ಫಿಕ್ಸ್ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು,…
ಮಂಡ್ಯ: ಮಳವಳ್ಳಿ ಕ್ಷೇತ್ರದ ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ ಅವರ ಸಹೋದರ ಪಿ.ಎಂ. ಪರಶಿವಮೂರ್ತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪರಶಿವಮೂರ್ತಿ ಅವರ…
ನವದೆಹಲಿ: ಭಾರತದ ಮೋಸ್ಟ್ ವಾಂಟೆಡ್ ಭೂಗತಪಾತಕಿ ಹಾಗೂ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ರೂವಾರಿ ದಾವುದ್ ಇಬ್ರಾಹಿಂನ ಆಪ್ತ…