ಕೊಡಗು

ಮಡಿಕೇರಿ: ಹೋಟೆಲ್, ರೆಸ್ಟೋರೆಂಟ್, ಬೇಕರಿ, ಮಾಂಸದ ಅಂಗಡಿಗಳ ಪರಿಶೀಲನೆ

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ ಅನುಷ್ಠಾನ

ಮಡಿಕೇರಿ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರ ಮತ್ತು ಆಯುಕ್ತರು, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಬೆಂಗಳೂರು ಅವರ ಸೂಚನೆ ಮೇರೆಗೆ ಎರಡು ದಿನಗಳ ಕಾಲ ಅಂಕಿತಾಧಿಕಾರಿಗಳ ಕಚೇರಿ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ, ಕೊಡಗು ಜಿಲ್ಲೆ ಅವರಿಂದ ವಿಶೇಷ ಆಂದೋಲನ ಹಮ್ಮಿಕೊಳ್ಳಲಾಗಿತ್ತು.

ಈ ಆಂದೋಲನದಲ್ಲ್ಷಿ ಜಿಲ್ಲೆಯಾದ್ಯಾಂತ ಹೋಟೆಲ್, ರೆಸ್ಟೋರೆಂಟ್, ಬೇಕರಿ, ಬೀದಿಬದಿಯ ವ್ಯಾಪಾರಿಗಳು ಕ್ಯಾಂಟೀನ್ ಮತ್ತಿತರ ಸುಮಾರು 54 ಘಟಕಗಳಿಗೆ ಭೇಟಿ ನೀಡಿ ಕಾಯ್ದೆಯಡಿ ಪರಿಶೀಲನೆ ನಡೆಸಿ ಆಹಾರ ಮಾದರಿಗಳನ್ನು ಸಂಗ್ರಹಿಸಲಾಯಿತು.

ಕಾಯ್ದೆ ಉಲಂಘನೆ ಸಂಬಂಧಿಸಿದಂತೆ ಸುಮಾರು 10 ಸಾವಿರ ದಂಡವನ್ನು ಮತ್ತು 37 ಆಹಾರ ಉದ್ದಿಮೆದಾರರಿಗೆ ನೋಟೀಸ್ ನೀಡಲಾಯಿತು. ಸಾರ್ವಜನಿಕರ ಹಿತದೃಪ್ಠಿಯಿಂದ ಶುಚಿತ್ವ ಕಾಪಾಡಿಕೊಂಡು ಶುದ್ಧವಾದ ಆಹಾರವನ್ನು ಗ್ರಾಹಕರಿಕೆ ನೀಡುವುದು, ಕಾಯ್ದೆಯ ಮಾನದಂಡಗಳಿಗೆ ಮೀರಿ ಕೃತಕ ಬಣ್ಣಗಳನ್ನು ಆಹಾರ ತಯಾರಿಕೆ ಬಳಸುವುದನ್ನು ಕಡ್ಡಾಯವಾಗಿ ನಿಷೇದಿಸಲಾಗಿದೆ ಎಂಬ ಮಾಹಿತಿಯನ್ನು ಈ ಆಂದೋಲನದಲ್ಲಿ ಸೂಚಿಸಲಾಯಿತು.

ಆಯುಕ್ತರು (ಎಫ್.ಎಸ್.ಎಸ್.ಎ) ಅವರ ಸೂಚನೆಯಂತೆ ಸೋಮವಾರ ವಿಶೇಷವಾದ ಆಂದೋಲನವನ್ನು ಹಮ್ಮಿಕೊಂಡು ಜಿಲ್ಲೆಯಾದ್ಯಾಂತ ಮೊಟ್ಟೆ, ಕೋಳಿ, ಮಾಂಸ/ಮಾಂಸದ ಪದಾರ್ಥಗಳ ಸಂಗ್ರಹಕರು, ಮಾರಾಟಗಾರರು ಮತ್ತು ತಯಾರಿಕಾ ಸ್ಥಳಗಳಿಗೆ ದಿಡೀರ್ ಭೇಟಿ ನೀಡಿ ಪದಾರ್ಥಗಳನ್ನು ಸೂಕ್ತವಾದ ತಾಪಮಾನದಲ್ಲಿ ಸಂಗ್ರಹಿಸಿ ಗ್ರಾಹಕರಿಗೆ ನೀಡುತ್ತಿದ್ದಾರೆಯೇ ಮತ್ತು ತ್ಯಾಜ್ಯ ವಸ್ತುಗಳ ಸೂಕ್ತ ನಿರ್ವಹಣೆ ಸಂಬಂಧಿಸಿದಂತೆ ಪರಿಶೀಲನೆ ನಡೆಸಲಾಯಿತು.

ಹಳೆಯ ಮಾಂಸ/ಮಾಂಸದ ಪದಾರ್ಥಗಳನ್ನು ಕೆಡದಂತೆ ಹಾನಿಕಾರಕ ರಾಸಾಯನಿಕಗಳನ್ನು ಬಳಸಲಾಗುತ್ತಿದೆಯೇ ಎಂಬ ಬಗ್ಗೆಯೂ ಪರಿಶೀಲನೆಯನ್ನು ನಡೆಸಿ ಸಂಶಯಾಸ್ಪದ 11 ಆಹಾರ ಪದಾರ್ಥಗಳನ್ನು ಸಂಗ್ರಹಿಸಲಾಯಿತು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

4 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

4 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

4 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

4 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

4 hours ago

ಹಿಂದಿನ ಉಸ್ತುವಾರಿಗಿದ್ದ ಖಾತೆಗಳು ಪುಟ್ಟರಂಗಶೆಟ್ಟರಿಗೆ!

ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ  ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…

4 hours ago