ಮಡಿಕೇರಿಯ ಕಾನ್ವೆಂಟ್ ಜಂಕ್ಷನ್ ಬಳಿ ಇರುವ ಲೋಕೋಪಯೋಗಿ ಇಲಾಖೆಯ (PWD) ಕಚೇರಿಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಗಿರೀಶ್ ಅವರ ವಿರುದ್ಧ ಅಕ್ರಮ ಆಸ್ತಿ ಸಂಪಾದನೆ ಆರೋಪದ ದೂರಿನ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಲೋಕಾಯುಕ್ತ ತಂಡ ಹಲವು ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದೆ.
ಲೋಕಾಯುಕ್ತ ಡಿವೈಎಸ್ಪಿ ದಿನಕರ್ ಶೆಟ್ಟಿ ಅವರ ನೇತೃತ್ವದಲ್ಲಿ ಮೈಸೂರಿನಲ್ಲಿರುವ ಗಿರೀಶ್ ಅವರ ನಿವಾಸ ಹಾಗೂ ಸಂಬಂಧಿತ ಆಸ್ತಿಗಳ ಮೇಲೆ ಶೋಧ ನಡೆದಿದೆ. ಇದೇ ವೇಳೆ ಮಡಿಕೇರಿಯಲ್ಲಿ ಲೋಕಾಯುಕ್ತ ಸಬ್ಇನ್ಸ್ಪೆಕ್ಟರ್ ವೀಣಾ ನಾಯ್ಕ್ ಅವರ ತಂಡ ಗಿರೀಶ್ ಅವರ ಕಚೇರಿ ಮತ್ತು ಇತರೆ ಸ್ಥಳಗಳಲ್ಲಿ ಪರಿಶೀಲನೆ ನಡೆಸಿದೆ.
ಅಕ್ರಮ ಆಸ್ತಿ ಸಂಗ್ರಹಿಸಿದರೆಂಬ ಆರೋಪದ ಹಿನ್ನೆಲೆಯಲ್ಲಿ ಗಿರೀಶ್ ಅವರ ಆದಾಯಕ್ಕೆ ಹೊಂದಿಕೆ ಆಗದ ಆಸ್ತಿಗಳ ವಿವರಗಳನ್ನು ಪರಿಶೀಲಿಸುವ ಕಾರ್ಯ ಸ್ಥಳೀಯ ಲೋಕಾಯುಕ್ತ ತಂಡಗಳಿಂದ ಮುಂದುವರೆಯುತ್ತಿದೆ. ದಾಖಲೆಗಳು, ಮಹತ್ವದ ದಾಖಲೆಪತ್ರಗಳು ಹಾಗೂ ಸಂಪತ್ತಿನ ವಿವರಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…
ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…
ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…