ಕೊಡಗು

ಮಡಿಕೇರಿ: PWD ಎಂಜಿನಿಯರ್ ಗಿರೀಶ್ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ

ಮಡಿಕೇರಿಯ ಕಾನ್ವೆಂಟ್ ಜಂಕ್ಷನ್ ಬಳಿ ಇರುವ ಲೋಕೋಪಯೋಗಿ ಇಲಾಖೆಯ (PWD) ಕಚೇರಿಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಗಿರೀಶ್ ಅವರ ವಿರುದ್ಧ ಅಕ್ರಮ ಆಸ್ತಿ ಸಂಪಾದನೆ ಆರೋಪದ ದೂರಿನ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಲೋಕಾಯುಕ್ತ ತಂಡ ಹಲವು ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದೆ.

ಲೋಕಾಯುಕ್ತ ಡಿವೈಎಸ್ಪಿ ದಿನಕರ್ ಶೆಟ್ಟಿ ಅವರ ನೇತೃತ್ವದಲ್ಲಿ ಮೈಸೂರಿನಲ್ಲಿರುವ ಗಿರೀಶ್ ಅವರ ನಿವಾಸ ಹಾಗೂ ಸಂಬಂಧಿತ ಆಸ್ತಿಗಳ ಮೇಲೆ ಶೋಧ ನಡೆದಿದೆ. ಇದೇ ವೇಳೆ ಮಡಿಕೇರಿಯಲ್ಲಿ ಲೋಕಾಯುಕ್ತ ಸಬ್‌ಇನ್ಸ್‌ಪೆಕ್ಟರ್ ವೀಣಾ ನಾಯ್ಕ್ ಅವರ ತಂಡ ಗಿರೀಶ್ ಅವರ ಕಚೇರಿ ಮತ್ತು ಇತರೆ ಸ್ಥಳಗಳಲ್ಲಿ ಪರಿಶೀಲನೆ ನಡೆಸಿದೆ.

ಅಕ್ರಮ ಆಸ್ತಿ ಸಂಗ್ರಹಿಸಿದರೆಂಬ ಆರೋಪದ ಹಿನ್ನೆಲೆಯಲ್ಲಿ ಗಿರೀಶ್ ಅವರ ಆದಾಯಕ್ಕೆ ಹೊಂದಿಕೆ ಆಗದ ಆಸ್ತಿಗಳ ವಿವರಗಳನ್ನು ಪರಿಶೀಲಿಸುವ ಕಾರ್ಯ ಸ್ಥಳೀಯ ಲೋಕಾಯುಕ್ತ ತಂಡಗಳಿಂದ ಮುಂದುವರೆಯುತ್ತಿದೆ. ದಾಖಲೆಗಳು, ಮಹತ್ವದ ದಾಖಲೆಪತ್ರಗಳು ಹಾಗೂ ಸಂಪತ್ತಿನ ವಿವರಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಆಂದೋಲನ ಡೆಸ್ಕ್

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 27 ಶನಿವಾರ

2 hours ago

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

18 hours ago

ವೆನಿಜುವೆಲಾ ಭೂಕಂಪ ; ಮೃತರ ಸಂಖ್ಯೆ 235ಕ್ಕೆ ಏರಿಕೆ

ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…

18 hours ago

ಡಿಕೆಶಿ ಜೊತೆಗಿನ ಬಾಂಧ್ಯವ : ಧರ್ಮಸ್ಥಳದಲ್ಲಿ ವಿಜಯೇಂದ್ರ ಹೇಳಿದಿಷ್ಟು

ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…

21 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

23 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

23 hours ago