ಮಡಿಕೇರಿ: ಎಲ್ಲರೂ ಪಾಲ್ಗೊಳ್ಳುವಿಕೆಯ ಮೂಲಕ ವಿಜ್ರಂಭಣೆಯ ದಸರಾ ಆಚರಣೆಗೆ ಅಗತ್ಯ ಸಿದ್ದತೆ ಪ್ರಾರಂಭಿಸುವಂತೆ ಕೊಡಗು ಜಿಲ್ಲಾಡಳಿತಕ್ಕೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಎಸ್ ಭೋಸರಾಜು ಸೂಚನೆ ನೀಡಿದರು.
ಇಂದು ಮಡಿಕೇರಿಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು, ಅಧಿಕಾರಿಗಳು, ದಸರಾ ಸಮಿತಿ ಹಾಗೂ ಮಂಟಪ ಉಸ್ತುವಾರಿ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿ ಸಲಹೆ ಮತ್ತು ಅಭಿಪ್ರಾಯಗಳನ್ನು ಸಂಗ್ರಹಿಸಿ ಮಾತನಾಡಿದರು.
ವಿಜ್ರಂಭಣೆಯ ದಸರಾ ಆಚರಣೆ
ಮಡಿಕೇರಿ ಹಾಗೂ ಗೋಣಿಕೋಪ್ಪ ದಸರಾ ತನ್ನದೇ ಆದ ಇತಿಹಾಸವನ್ನು ಹೊಂದಿದೆ. ದೇಶ ವಿದೇಶದ ಮಟ್ಟದಲ್ಲಿ ಖ್ಯಾತಿಯನ್ನು ಹೊಂದಿದೆ. ಈ ಬಾರಿಯ ಮಡಿಕೇರಿ – ಗೋಣಿಕೊಪ್ಪ ದಸರಾವನ್ನ ವಿಜ್ರಂಭಣೆಯಿಂದ ಆಚರಿಸಲು ಅಗತ್ಯ ತಯಾರಿ ನಡೆಸಿಕೊಳ್ಳಬೇಕು. ಸಮಿತಿ ಹಾಗೂ ದಶಾ ಮಂಟಪಗಳ ಸಮಿತಿ ಸಭೆಯನ್ನು ನಡೆಸಿ ಉತ್ತಮ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಸರಕಾರದ ವತಿಯಿಂದ ಹಿಂದಿನ ಬಾರಿಗಿಂತಲೂ ಹೆಚ್ಚಿನ ಅನುದಾನ ದೊರಕಿಸಿ ಕೊಡಲು ನಾವೆಲ್ಲರೂ ಪ್ರಯತ್ನ ನಡೆಸಿದ್ದೇವೆ ಎಂದರು.
ರಸ್ತೆಗಳ ಕಾಮಗಾರಿ ಮುಗಿಸಲು ಗಡುವು
ದಸರಾ ಸಂಭ್ರಮದಲ್ಲಿ ಭಾಗವಹಿಸಲು ಸುಮಾರು ನಾಲ್ಕು ಲಕ್ಷ ಜನರು ಜಿಲ್ಲೆಗೆ ಭೇಟಿ ನೀಡುತ್ತಾರೆ. ಜಿಲ್ಲೆಯನ್ನು ಸಂಪರ್ಕಿಸುವ ರಸ್ತೆಗಳು ಹಾಗೂ ನಗರದಲ್ಲಿನ ರಸ್ತೆಗಳನ್ನು ಸುಸ್ಥಿಯಲ್ಲಿಡುವ ನಿಟ್ಟಿನಲ್ಲಿ ಕಾಮಗಾರಿಗಳನ್ನು ಚುರುಕುಗೊಳಿಸಬೇಕು. ಯುದ್ದೋಪಾದಿಯಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯವನ್ನು ಕೈಗೊಳ್ಳಬೇಕು. ಸೆಪ್ಟೆಂಬರ್ ತಿಂಗಳ ಅಂತ್ಯದ ಒಳಗಾಗಿ ಕಾಮಗಾರಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.
ಶಾಶ್ವತ ವೇದಿಕೆ ನಿರ್ಮಾಣಕ್ಕೆ ಚಿಂತನೆ
ಪ್ರತಿ ಬಾರಿ ದಸರಾ ಹಬ್ಬದ ಸಂಧರ್ಭದಲ್ಲಿ ಹೆಚ್ಚಿನ ಅನುದಾನ ವೇದಿಕೆ ನಿರ್ಮಾಣದ ಕಡೆಗೆ ವ್ಯಯವಾಗುತ್ತಿದೆ. ಇದನ್ನ ಉಳಿಸುವ ಹಾಗೂ ಜಿಲ್ಲಾ ಕೇಂದ್ರದಲ್ಲಿ ಜಿಲ್ಲಾ ಮಟ್ಟದ ಕಾರ್ಯಕ್ರಮಗಳಿಗೆ ವೇದಿಕೆ ಒದಗಿಸುವ ನಿಟ್ಟಿನಲ್ಲಿ ಶಾಶ್ವತ ವೇದಿಕೆ ನಿರ್ಮಾಣ ಅಗತ್ಯವಾಗಿದೆ. ಈ ಬಾರಿಯ ದಸರಾ ನಂತರ ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.
ಕಾರ್ಯಕ್ರಮ ಆಯೋಜನೆಯಲ್ಲಿ ಎಲ್ಲರೂ ಕೈಜೋಡಿಸುವುದು ಅಗತ್ಯವಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ದಸರಾ ಆಚರಣೆ ನಡೆಸುವ ನಿಟ್ಟಿನಲ್ಲಿ ಜಿಲ್ಲಾಡಳಿತದ ಜೊತೆಗೆ ಜನರು ಕೈಜೋಡಿಸಬೇಕು. ಮಂಟಪಗಳ ಎತ್ತರ ಹಾಗೂ ಸೌಂಡ್ ಸಿಸ್ಟಮ್ ಬಳಕೆಯ ಬಗ್ಗೆ ದಶಮಂಟಪಗಳ ಮುಖಂಡರು ಒಮ್ಮತದ ನಿರ್ಧಾರ ಕೈಗೊಳ್ಳಬೇಕು. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸ್ಥಳೀಯ ಕಲಾವಿದರಿಗೆ ಆದ್ಯತೆ ನೀಡಲಾಗುವುದು. ಈ ಬಾರಿ ಕಾಫಿ ಫೆಸ್ಟಿವಲ್ ಸೇರಿದಂತೆ ವಿನೂತನ ಕಾರ್ಯಕ್ರಮಗಳ ಆಯೋಜನೆಗೂ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಸಭೆಯಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಪೊನ್ನಣ್ಣ, ಶಾಸಕರಾದ ಮಂಥರ್ ಗೌಡ, ಜಿಲ್ಲಾಧಿಕಾರಿ ವೆಂಕಟರಾಜು, ಮಡಿಕೇರಿ ಹಾಗೂ ಗೊಣಿಕೊಪ್ಪ ದಸರಾ ಸಮಿತಿಯ ಸದಸ್ಯರು, ದಶಾಮಂಟಪಗಳ ಪ್ರಮುಖರು ಸೇರಿದಂತೆ, ಸಮಿತಿಗಳ ಸದಸ್ಯರು ಪಾಲ್ಗೊಂಡಿದ್ದರು .
ಹೊಸದಿಲ್ಲಿ : ಮುಂಬರುವ ಏಪ್ರಿಲ್ನಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ರಸ್ತೆಗಳ ಟೋಲ್ ಪ್ಲಾಜಾಗಳಲ್ಲಿ ನಗದು ವಹಿವಾಟುಗಳನ್ನು ಸ್ವೀಕರಿಸುವುದಿಲ್ಲ ಎಂದು ರಸ್ತೆ…
ಸಿದ್ದಾಪುರ : ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಸಮೀಪದ ತಟ್ಟಳ್ಳಿಯಲ್ಲಿ ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ…
ಮೈಸೂರು : ಫೆ.28ರಿಂದ ಮಾ.17ರವರೆಗೆ ಮೈಸೂರು ನಗರದ 28 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಸದರಿ ಪರೀಕ್ಷೆಗಳನ್ನು…
ತಿ.ನರಸೀಪುರ : ತಾಲ್ಲೂಕಿನ ಕೇತಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಗ್ರಾಮದಲ್ಲಿ ರಾತ್ರಿ ವೇಳೆ ಚಿರತೆ ಸಂಚರಿಸುತ್ತಿದ್ದುದನ್ನು ಯುವಕರಿಬ್ಬರು…
ಮೈಸೂರು : ಈ ಹಿಂದೆ ಎಂಡಿಎ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಡಿ.ಬಿ.ನಟೇಶ್ ಅವರ ವಿರುದ್ಧ ಲಂಚ ನೀಡಿರುವ ಆರೋಪ ಹೊರಿಸಿದ್ದ…
ಹನೂರು : ಇಲ್ಲಿನ ಗುಂಡಾಲ್ ಜಲಾಶಯದಲ್ಲಿ ಹುಲಿ ಕಳೇಬರ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.…