ಕೊಡಗು

ಮಡಿಕೇರಿ: ಮಳೆ ಹಾನಿ ಪ್ರದೇಶಕ್ಕೆ ಸಚಿವರ ಭೇಟಿ, ಪರಿಶೀಲನೆ

ಮಡಿಕೇರಿ: ನಿರಂತರ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಹಾಗೂ ಶಾಸಕರಾದ ಡಾ.ಮಂತರ್ ಗೌಡ ಅವರು ಮಡಿಕೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಳೆ ಹಾನಿ ಪ್ರದೇಶಗಳಿಗೆ ಭಾನುವಾರ(ಜು.21) ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮುಕ್ಕೊಡ್ಲು, ಐಗೂರು, ಮಲ್ಲಳ್ಳಿ ಜಲಪಾತದ ಸೇತುವೆ ಸೇರಿದಂತೆ ಮಳೆಹಾನಿ ಪ್ರದೇಶ ಹಾಗೂ ಮದಾಪುರ ಬಳಿಯ ಜಂಬೂರು ಗ್ರಾಮಕ್ಕೆ ಭೇಟಿ ನೀಡಿ ಅಲ್ಲಿನ ಜನರ ಕುಂದುಕೊರತೆ ಆಲಿಸಿದರು.

ನಂತರ ಸೋಮವಾರಪೇಟೆಯಲ್ಲಿ ಸುದ್ದಿಗೋಷ್ಠಿ ಮಾತನಾಡಿದ ಸಚಿವರು, ಪ್ರಾಕೃತಿಕ ವಿಕೋಪ ಎದುರಿಸಲು ಜಿಲ್ಲಾಡಳಿತ ಸಜ್ಜಾಗಿದ್ದು, ಸರ್ಕಾರದಿಂದ ಎಲ್ಲಾ ರೀತಿಯ ನೆರವು ನೀಡಲಾಗುವುದು ಎಂದರು.
ಮನೆ, ರಸ್ತೆ, ಸೇತುವೆ, ತಡೆಗೋಡೆ, ವಿದ್ಯುತ್ ಕಂಬ ಹಾಗೂ ಪರಿವರ್ತಕಗಳು, ಬೆಳೆ ಹಾನಿ ಹೀಗೆ ಮಳೆಯಿಂದ ವಿವಿಧ ರೀತಿಯ ಹಾನಿಯಾಗಿದ್ದು, ಈ ಸಂಬಂಧ ನಷ್ಟದ ಅಂದಾಜು ಮಾಡಿ ಮುಖ್ಯಮಂತ್ರಿ ಅವರು ಹಾಗೂ ಕಂದಾಯ ಸಚಿವರಿಗೆ ವರದಿ ನೀಡಿ, ವಿಶೇಷ ಅನುದಾನ ಬಿಡುಗಡೆಗೆ ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದರು.

ಪ್ರಾಕೃತಿಕ ವಿಕೋಪ ಎದುರಿಸಲು ಜಿಲ್ಲಾಡಳಿತದ ಬಳಿ ಈಗಾಗಲೇ 30 ಕೋಟಿ ರೂ ಇದ್ದು, ಇದರಿಂದ ಪರಿಹಾರ ನೀಡಲಾಗುತ್ತಿದೆ. ಪ್ರಾಕೃತಿಕ ವಿಕೋಪ ನಿರ್ವಹಣೆಗೆ ಹಣದ ಕೊರತೆ ಇಲ್ಲ ಎಂದು ಸಚಿವರು ಹೇಳಿದರು.

ಮನೆ ಹಾನಿ ಸಂಬಂಧ ಎನ್ ಡಿಆರ್ ಎಫ್ ನಿರ್ದೇಶನದಂತೆ ಕ್ರಮವಹಿಸಲಾಗುವುದು. ಸಂತ್ರಸ್ತರಿಗೆ ಯಾವುದೇ ರೀತಿ ತೊಂದರೆ ಆಗದಂತೆ ಗಮನಹರಿಸಲಾಗುವುದು ಎಂದರು.

ಕೊಡಗು ಜಿಲ್ಲೆಗೆ ಸಂಬಂಧಿಸಿದಂತೆ ಸರ್ಕಾರದಿಂದ ಆಗಬೇಕಿರುವ ಕೆಲಸಗಳ ಬಗ್ಗೆ ಮುಖ್ಯಮಂತ್ರಿ ಅವರ ಗಮನ ಸೆಳೆಯಲಾಗುವುದು. ಪ್ರವಾಹದ ಸಂತ್ರಸ್ತ ಕುಟುಂಬಗಳಿಗೆ ಮನೆ ನಿರ್ಮಾಣ ಹಾಗೂ ಜಂಬೂರು ಗ್ರಾಮದಲ್ಲಿ ಅಗತ್ಯ ಮೂಲ ಸೌಲಭ್ಯ ಸೇರಿದಂತೆ ಹಲವು ಯೋಜನೆಗಳಿಗೆ ಶಾಶ್ವತ ಪರಿಹಾರ ಒದಗಿಸಲಾಗುವುದು ಎಂದು ಸಚಿವರು ವಿವರಿಸಿದರು.

ಕೊಡಗು ಜಿಲ್ಲೆಯಲ್ಲಿ ಜುಲೈ ತಿಂಗಳಲ್ಲಿ ಹೆಚ್ಚಿನ ಮಳೆಯಾಗಿದೆ. ಇನ್ನೂ ಮುಂದಿನ ದಿನಗಳಲ್ಲಿಯೂ ಮಳೆ ಇರುವುದರಿಂದ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ರಾಜ್ಯದಲ್ಲಿ ಪ್ರಾಕೃತಿಕ ವಿಕೋಪ ಎದುರಿಸಲು ಈಗಾಗಲೇ ಎಲ್ಲಾ ಜಿಲ್ಲೆಗಳಿಗೆ ಸರ್ಕಾರ ಹೆಚ್ಚಿನ ಹಣ ಬಿಡುಗಡೆ ಮಾಡಿದೆ. ಇನ್ನೂ 200 ಕೋಟಿ ರೂ ಬಿಡುಗಡೆ ಮಾಡಲಿದೆ ಎಂದು ಸಚಿವರು ಇದೇ ಸಂದರ್ಭದಲ್ಲಿ ತಿಳಿಸಿದರು.

ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಮಾತನಾಡಿ, ಜಂಬೂರು ಗ್ರಾಮದ ನಿವಾಸಿಗಳಿಗೆ ಅಗತ್ಯ ಮೂಲ ಸೌಲಭ್ಯ ಕಲ್ಪಿಸಲಾಗುವುದು. ಜಂಬೂರಿನಲ್ಲಿ ವಿದ್ಯುತ್ ಉಪ ಕೇಂದ್ರ ನಿರ್ಮಾಣ ಮಾಡುತ್ತಿರುವುದರಿಂದ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಈ ಸಮಸ್ಯೆಯನ್ನು ಶೀಘ್ರವೇ ಪರಿಹರಿಸಲಾಗುವುದು ಎಂದರು.

ಒಳಚರಂಡಿ ಕಾಮಗಾರಿ ಸಂಪೂರ್ಣ ಪೂರ್ಣಗೊಂಡಿಲ್ಲ, ಹಾಗಾಗಿ ಕೆಲವು ಸಮಸ್ಯೆ ಉಂಟಾಗುತ್ತಿದ್ದು, ಈ ಬಗ್ಗೆ ತುರ್ತು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಮಳೆ ಹಾನಿ ಬಗ್ಗೆ ಮಾಹಿತಿ ನೀಡಿ, ಎನ್ ಡಿಆರ್ ಎಫ್ ನಿರ್ದೇಶನದಂತೆ ಪರಿಹಾರ ನೀಡಲಾಗುತ್ತದೆ ಎಂದು ತಿಳಿಸಿದರು.

ಈ ಸಂದರ್ಭ ವಿಧಾನ ಪರಿಷತ್ ಮಾಜಿ ಸದಸ್ಯರಾದ ವೀಣಾ ಅಚ್ಚಯ್ಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ. ಸಿಇಒ ಆನಂದ್ ಪ್ರಕಾಶ್ ಮೀನಾ, ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ಧರ್ಮಜ ಉತ್ತಪ್ಪ ಸೇರಿದಂತೆ ಇನ್ನಿತರರು ಇದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಹೊಣೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…

5 hours ago

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

7 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

15 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

15 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

15 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

15 hours ago