Madikeri | MLA Manthar Gowda inspects a cracked retaining wall.
ಮಡಿಕೇರಿ : ನಗರ ಸಮೀಪದ ರಾಷ್ಟ್ರೀಯ ಹೆದ್ದಾರಿ 275 ರಲ್ಲಿ ಬಿರುಕು ಬಿಟ್ಟಿರುವ ತಡೆಗೋಡೆಯನ್ನು ಶಾಸಕ ಡಾ.ಮಂಥರ್ಗೌಡ ಶುಕ್ರವಾರ ಭೇಟಿ ನೀಡಿ ವೀಕ್ಷಿಸಿದರು.
ಬಿರುಕು ಬಿಟ್ಟಿರುವ ತಡೆಗೋಡೆ ಕುಸಿದು ಬಿದ್ದರೆ ಹೆದ್ದಾರಿ ಬಂದ್ ಆಗಲಿದೆ. ಆದ್ದರಿಂದ ತಜ್ಞ ಇಂಜಿನಿಯರ್ಗಳನ್ನು ಆಹ್ವಾನಿಸಿ ಅಗತ್ಯ ಮುನ್ನೆಚ್ಚರಿಕಾ ಕ್ರಮ ವಹಿಸಬೇಕೆಂದು ಹೆದ್ದಾರಿ ವಿಭಾಗದ ಇಂಜಿನಿಯರ್ಗೆ ಸೂಚಿಸಿದರು. ನವೆಂಬರ್ವರೆಗೂ ಮಳೆ ಇರುವ ಸಾಧ್ಯತೆ ಇದೆ. ಆದ್ದರಿಂದ ಹೆದ್ದಾರಿ ಸುರಕ್ಷತೆ ಬಗ್ಗೆ ಹೆಚ್ಚಿನ ಮುತುವರ್ಜಿ ವಹಿಸಬೇಕು ಎಂದು ತಿಳಿಸಿದರು.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ 2021-22 ರಲ್ಲಿ ತಡೆಗೋಡೆ ನಿರ್ಮಿಸಿದೆ. ತಡೆಗೋಡೆ ಸಮೀಪದಲ್ಲಿ 5 ಕುಟುಂಬಗಳಿದ್ದು, ತಾತ್ಕಾಲಿಕವಾಗಿ ಸ್ಥಳಾಂತರಗೊಳಿಸಲಾಗಿದೆ. ಹೆದ್ದಾರಿ ಸುರಕ್ಷತೆ ಸಂಬಂಧಿಸಿದಂತೆ ಅಗತ್ಯ ಕ್ರಮಕೈಗೊಳ್ಳಲು ಸೂಚಿಸಲಾಗಿದೆ ಎಂದು ಶಾಸಕರು ಸುದ್ದಿಗಾರರಿಗೆ ತಿಳಿಸಿದರು.
ತಹಶಿಲ್ದಾರ್ ಶ್ರೀಧರ್, ಹೆದ್ದಾರಿ ವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಗಿರೀಶ್, ಲೋಕೋಪಯೋಗಿ ಇಲಾಖೆ ಇಇ ಇಬ್ರಾಹಿಂ, ಎಇಇ ಸತೀಶ್, ಪೌರಾಯುಕ್ತ ರಮೇಶ್, ಜಿ.ಪಂ.ಇಂಜಿನಿಯರ್ಗಳು, ಸ್ಥಳೀಯರು ಹಾಜರಿದ್ದರು.
ಸಫಾರಿ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಅಳವಡಿಸಲು ಖಂಡ್ರೆ ಸೂಚನೆ ಬೆಂಗಳೂರು : ರಾಜ್ಯದ ಐದು ಹುಲಿ…
ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬಂದಿದ್ದ ಭಕ್ತರ ಮೇಲೆ ಮರದ ಕೊಂಬೆ ಬಿದ್ದು ಮೂವರು ಗಾಯಗೊಂಡಿರುವ…
ಬೆಂಗಳೂರು: ಆನ್ಲೈನ್ನಲ್ಲಿ ಔಷಧಿಗಳ ಮಾರಾಟ ವಿರೋಧಿಸಿ ಅಖಿಲ ಭಾರತ ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಕರ್ನಾಟಕ ಬಂದ್ಗೆ ಮಿಶ್ರ…
ಯಳಂದೂರು: ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಯೊಂದು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಸೆರೆಯಾಗಿದೆ. ತಾಲ್ಲೂಕಿನ ಗುಂಬಳ್ಳಿ ಗ್ರಾಮದಲ್ಲಿ…
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಚುನಾವಣೆ ನಡೆಸಲು ಕಾಲಾವಕಾಶ ಕೋರಿದ್ದ ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್ ರಿಲೀಫ್ ನೀಡಿದೆ. ಜಿಬಿಎ ಚುನಾವಣೆಗೆ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಒಂದು ವಾರ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ.20ರಿಂದ 26ರವರೆಗೆ ರಾಜ್ಯದ…