ಮಡಿಕೇರಿ: ಇಲ್ಲಿ ಶನಿವಾರ(ಜು.7) ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮೊದಲ ಬಾರಿಗೆ ಭಾಗವಹಿಸಿದ್ದ ನೂತನ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಒಂದೂ ಮಾತನಾಡದೇ ಸಭೆಯುದ್ದಕ್ಕೂ ಮೌನವಾಗಿಯೇ ಕುಳಿತಿದ್ದರು.
ಸಭೆಯಲ್ಲಿ ಭಾಗವಹಿಸಿದ ಉಸ್ತುವಾರಿ ಸಚಿವ ಎನ್.ಎಸ್ ಭೋದರಾಜು ಹಾಗೂ ಶಾಸಕ ಡಾ.ಮಂತರ್ಗೌಡ ಜಿಲ್ಲೆಯನ್ನು ಬಾಧಿಸುತ್ತಿರುವ ಕೆಲವು ಸಮಸ್ಯೆಗಳಿಗೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದರು. ಜಿಲ್ಲೆಯಲ್ಲಿ ಮಾನವ-ಪ್ರಾಣಿ ಸಂಘರ್ಷ, ಡೆಂಗ್ಯೂ, ಮಳೆ ಹಾಗೂ ಪ್ರಾಕೃತಿಕ ವಿಕೋಪ ಸೇರಿದಂತೆ ಮೊದಲಾದ ಸಮಸ್ಯೆಗಳ ಕುರಿತು ಸಭೆಯಲ್ಲಿದ್ದ ಚುನಾಯಿತರು ಅಧಿಕಾರಿಗಳನ್ನು ಪ್ರಶ್ನಿಸಿ, ಸಮಸ್ಯೆಗಳನ್ನು ಪ್ರಸ್ತಾಪಿಸುತ್ತಿದ್ದರು. ಆದರೆ, ನೂತನ ಸಂಸದ ಯದುವೀರ್ ಸಭೆಯುದ್ದಕ್ಕೂ ಯಾವುದೇ ಚರ್ಚೆಯಲ್ಲಿ ಭಾಗವಹಿಸದೆ, ಮೂಕಪ್ರೇಕ್ಷಕರಂತೆ ಕುಳಿತು ಅರ್ಧದಲ್ಲೇ ಸಭೆಯಿಂದ ನಿರ್ಗಮಿಸಿದರು.
ಇದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿ, ಮಡಿಕೇರಿ ಕೆಡಿಪಿ ಸಭೆಗೆ ಆಹ್ವಾನ ಬಂದಿತ್ತು. ಅದರಂತೆ ಸಭೆಗೆ ಬಂದಿದ್ದೇನೆ. ನಾನು ಕಲಿಯುವುದು ಬಹಳ ಇದೆ. ಇದೊಂದು ಅನುಭವ. ಸದ್ಯದಲ್ಲೇ ದಿಶಾ ಸಮಿತಿ ಸಭೆ ನಡೆಯಲಿದೆ. ಅಲ್ಲಿ ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ಎಲ್ಲಾ ಸಮಸ್ಯೆ ಬಗ್ಗೆ ಚರ್ಚಿಸಿವೆ ಎಂದು ಹೇಳಿದರು.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…