ಕೊಡಗು

ಮಡಿಕೇರಿ | ಆ .10ರಂದು ಕೆಸರು ಗದ್ದೆ ಕ್ರೀಡಾಕೂಟ

ಮಡಿಕೇರಿ : ಆಟಿ ಪ್ರಯುಕ್ತ ಕೊಡಗು ಜಿಲ್ಲಾ ಬಂಟರ ಸಂಘ, ಕೊಡಗು ಯುವ ಬಂಟ್ಸ್ ಅಸೋಸಿಯೇಷನ್ ಆಶ್ರಯದಲ್ಲಿ ಆ. 10ರಂದು ಕಗ್ಗೋಡ್ಲುವಿನಲ್ಲಿ ಆಟಿಡೊಂಜಿ ದಿನ ಕೆಸರ‍್ದ ಗೊಬ್ಬು ಕೆಸರುಗದ್ದೆ ಕ್ರೀಡಾಕೂಟ ನಡೆಯಲಿದೆ ಎಂದು ಯುವ ಬಂಟ್ಸ್ ಅಸೋಸಿಯೇಷನ್ ಸದಸ್ಯ ಶರತ್ ಕುಮಾರ್ ಶೆಟ್ಟಿ ತಿಳಿಸಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಡಿಕೇರಿ ನಗರ ಬಂಟರ ಮಹಿಳಾ ಘಟಕ, ಮಡಿಕೇರಿ ತಾಲ್ಲೂಕು ಬಂಟರ ಮಹಿಳಾ ಘಟಕ, ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲ್ಲೂಕು ಮಹಿಳಾ ಬಂಟರ ಸಂಘ, ಕಗ್ಗೊಡ್ಲು ಹೋಬಳಿ ಬಂಟರ ಸಂಘದ ಸಹಯೋಗದಲ್ಲಿ ಕಗ್ಗೋಡ್ಲುವಿನಲ್ಲಿರುವ ದಿ.ರಾಮಣ್ಣನವರ ಪತ್ನಿ ಸುಮಲತಾ ಅವರ ಗದ್ದೆಯಲ್ಲಿ ಬೆಳಿಗ್ಗೆ 7 ಗಂಟೆಗೆ ಕ್ರೀಡಾಕೂಟಕ್ಕೆ ಚಾಲನೆ ದೊರೆಯಲಿದೆ. ಸಂಜೆ 6 ಗಂಟೆಗೆ ಕಗ್ಗೊಡ್ಲುವಿನ ಅಂಬಾರ ಸಭಾಂಗಣದಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ ಎಂದು ತಿಳಿಸಿದರು.

ಪುರುಷರಿಗೆ ಹ್ಯಾಂಡ್ ಬಾಲ್ (7+2), ವಿವಿಧ ವಿಭಾಗದಲ್ಲಿ 100 ಮೀ. ಓಟ, ಹಗ್ಗಜಗ್ಗಾಟ, ದಂಪತಿ ಓಟ, ಮಹಿಳೆಯರಿಗೆ 100 ಮೀ. ಓಟ, ಹಗ್ಗಜಗ್ಗಾಟ, ನಿಂಬೆ ಚಮಚ, ಪಾಸಿಂಗ್ ಬಾಲ್ ನಡೆಯಲಿದೆ. ಮಕ್ಕಳಿಗೆ 100 ಮೀ. ಓಟ ಹಾಗೂ ಮನೋರಂಜನಾ ಸ್ಪರ್ಧೆ ನಡೆಯಲಿದೆ. ಅಲ್ಲದೆ ತುಳುನಾಡಿನ ಜಾನಪದ ಕಲೆ, ಆಟಿ ಕಳೆಂಜ ಹಾಗೂ ನಗರ ಮಹಿಳಾ ಘಟಕದಿಂದ ಮಳೆಗಾಲದ ವಿಶೇಷ ಖಾದ್ಯಗಳ ಪ್ರದರ್ಶನ ಗಮನ ಸೆಳೆಯಲಿದೆ ಎಂದರು.

2023-24 ಮತ್ತು 2024-25ನೇ ಸಾಲಿನಲ್ಲಿ ಶೇ.90ರಷ್ಟು ಅಂಕ ಪಡೆದ ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಪ್ರೋತ್ಸಾಹಿಸಲಾಗುವುದು ಎಂದರು.

ಹಗ್ಗಜಗ್ಗಾಟ ಮತ್ತು ಹ್ಯಾಂಡ್ ಬಾಲ್ ಸ್ಪರ್ಧೆಗೆ ಜು.25ರ ಒಳಗೆ ತಂಡಗಳು ನೋಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಮೊ.ಸಂ.9972477982, 9535946519 ಅನ್ನು ಸಂಪರ್ಕಿಸಬಹುದು ಎಂದು ಹೇಳಿದರು.

ಯುವ ಬಂಟ್ಸ್ ಅಸೋಸಿಯೇಷನ್ ಅಧ್ಯಕ್ಷ ಸದಾನಂದ ರೈ ಮಾತನಾಡಿ, ಸಮುದಾಯ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

ಮಡಿಕೇರಿ ತಾಲ್ಲೂಕು ಮಹಿಳಾ ಬಂಟ್ಸ್ ಘಟಕದ ಅಧ್ಯಕ್ಷೆ ಶಶಿಕಲಾ ಲೋಕೇಶ್ ರೈ, ಮಡಿಕೇರಿ ನಗರ ಘಟಕದ ಅಧ್ಯಕ್ಷೆ ಬಿ.ಜೆ.ಬೇಬಿ ಜಯರಾಂ ರೈ, ಬಿ.ಆರ್.ನೀತು ರೈ, ಬಿ.ಜೆ.ಕಮಲಾಕ್ಷಿ ರೈ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಯತೀಂದ್ರ ಸಿದ್ಧರಾಮಯ್ಯ ಅವಹೇಳನ ಪ್ರಕರಣ: ಪ್ರತಾಪ್ ಸಿಂಹ ಹಾಗೂ ಬಿಜೆಪಿ ಐಟಿ ಸೆಲ್ ವಿರುದ್ಧ ದೂರು ದಾಖಲು

ಮೈಸೂರು: ಎಂಎಲ್‌ಸಿ ಯತಿಂದ್ರ ಸಿದ್ದರಾಮಯ್ಯ ವಿರುದ್ಧ ಅವಹೇಳನ ಪೋಸ್ಟ್‌ ಮಾಡಿದ್ದ ಮಾಜಿ ಸಂಸದ ಪ್ರತಾಪ್‌ ಸಿಂಹ ಹಾಗೂ ಬಿಜೆಪಿ ಐಟಿ…

2 hours ago

ಫೆಬ್ರವರಿ.13ರಿಂದ ಹಂಪಿ ಉತ್ಸವ-2026

ವಿಜಯನಗರ: ವಿಜಯನಗರ ಸಾಮ್ರಾಜ್ಯದ ಗತವೈಭವ ನೆನಪು ಮಾಡಿಕೊಡುವ ಹಂಪಿ ಉತ್ಸವದ ತಯಾರಿ ನಡೆಯುತ್ತಿದೆ. ಫೆಬ್ರವರಿ.13, 14 ಹಾಗೂ 15ರಂದು ಹಂಪಿ…

2 hours ago

ಹನೂರು ಕ್ಷೇತ್ರದಲ್ಲಿ 15 ವರ್ಷಗಳಿಂದ ಆಗದೇ ಇದ್ದ ಅಭಿವೃದ್ಧಿ ಕಾರ್ಯ ನಾನು ಮಾಡಿ ತೋರಿಸಿದ್ದೇನೆ: ಶಾಸಕ ಎಂ.ಆರ್.ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ವಿಧಾನಸಭಾ ಕ್ಷೇತ್ರದ ಮತದಾರರ ಋಣದಿಂದ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಚುನಾವಣಾ ಪೂರ್ವದಲ್ಲಿ…

2 hours ago

ಬೆಂಗಳೂರು ಏರ್‌ಪೋರ್ಟ್‌ನಲ್ಲಿ 3.39 ಕೋಟಿ ಮೌಲ್ಯದ ಗಾಂಜಾ ಸೀಜ್‌

ಬೆಂಗಳೂರು: ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್‌ ಅಧಿಕಾರಿಗಳು ವಿದೇಶದಿಂದ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 3.39 ಕೋಟಿ ರೂ…

3 hours ago

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್‌ ಮ್ಯಾಚ್‌ ಬಗ್ಗೆ ಸಂಪುಟ ಸಭೆಯಲ್ಲಿ ನಿರ್ಧಾರ: ಗೃಹ ಸಚಿವ ಪರಮೇಶ್ವರ್‌

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಮ್ಯಾಚ್‌ ಆಡಿಸುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ನಂತರ ನಿರ್ಧಾರ ಪ್ರಕಟಿಸುತ್ತೇವೆ ಎಂದು…

3 hours ago

ಹೋಗೇನಕಲ್‌ ಫಾಲ್ಸ್‌ಗೆ ಬರುವ ಪ್ರವಾಸಿಗರ ಅನುಕೂಲಕ್ಕಾಗಿ 50 ಕೋಟಿ ವೆಚ್ಚದಲ್ಲಿ ಸೇತುವೆ ನಿರ್ಮಾಣ: ಶಾಸಕ ಎಂ.ಆರ್.ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೊಗೆನಕಲ್ ಫಾಲ್ಸ್ ಗೆ ಬರುವ ಪ್ರವಾಸಿಗರ…

4 hours ago