ಕೊಡಗು

ಮಡಿಕೇರಿ | ಆ .10ರಂದು ಕೆಸರು ಗದ್ದೆ ಕ್ರೀಡಾಕೂಟ

ಮಡಿಕೇರಿ : ಆಟಿ ಪ್ರಯುಕ್ತ ಕೊಡಗು ಜಿಲ್ಲಾ ಬಂಟರ ಸಂಘ, ಕೊಡಗು ಯುವ ಬಂಟ್ಸ್ ಅಸೋಸಿಯೇಷನ್ ಆಶ್ರಯದಲ್ಲಿ ಆ. 10ರಂದು ಕಗ್ಗೋಡ್ಲುವಿನಲ್ಲಿ ಆಟಿಡೊಂಜಿ ದಿನ ಕೆಸರ‍್ದ ಗೊಬ್ಬು ಕೆಸರುಗದ್ದೆ ಕ್ರೀಡಾಕೂಟ ನಡೆಯಲಿದೆ ಎಂದು ಯುವ ಬಂಟ್ಸ್ ಅಸೋಸಿಯೇಷನ್ ಸದಸ್ಯ ಶರತ್ ಕುಮಾರ್ ಶೆಟ್ಟಿ ತಿಳಿಸಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಡಿಕೇರಿ ನಗರ ಬಂಟರ ಮಹಿಳಾ ಘಟಕ, ಮಡಿಕೇರಿ ತಾಲ್ಲೂಕು ಬಂಟರ ಮಹಿಳಾ ಘಟಕ, ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲ್ಲೂಕು ಮಹಿಳಾ ಬಂಟರ ಸಂಘ, ಕಗ್ಗೊಡ್ಲು ಹೋಬಳಿ ಬಂಟರ ಸಂಘದ ಸಹಯೋಗದಲ್ಲಿ ಕಗ್ಗೋಡ್ಲುವಿನಲ್ಲಿರುವ ದಿ.ರಾಮಣ್ಣನವರ ಪತ್ನಿ ಸುಮಲತಾ ಅವರ ಗದ್ದೆಯಲ್ಲಿ ಬೆಳಿಗ್ಗೆ 7 ಗಂಟೆಗೆ ಕ್ರೀಡಾಕೂಟಕ್ಕೆ ಚಾಲನೆ ದೊರೆಯಲಿದೆ. ಸಂಜೆ 6 ಗಂಟೆಗೆ ಕಗ್ಗೊಡ್ಲುವಿನ ಅಂಬಾರ ಸಭಾಂಗಣದಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ ಎಂದು ತಿಳಿಸಿದರು.

ಪುರುಷರಿಗೆ ಹ್ಯಾಂಡ್ ಬಾಲ್ (7+2), ವಿವಿಧ ವಿಭಾಗದಲ್ಲಿ 100 ಮೀ. ಓಟ, ಹಗ್ಗಜಗ್ಗಾಟ, ದಂಪತಿ ಓಟ, ಮಹಿಳೆಯರಿಗೆ 100 ಮೀ. ಓಟ, ಹಗ್ಗಜಗ್ಗಾಟ, ನಿಂಬೆ ಚಮಚ, ಪಾಸಿಂಗ್ ಬಾಲ್ ನಡೆಯಲಿದೆ. ಮಕ್ಕಳಿಗೆ 100 ಮೀ. ಓಟ ಹಾಗೂ ಮನೋರಂಜನಾ ಸ್ಪರ್ಧೆ ನಡೆಯಲಿದೆ. ಅಲ್ಲದೆ ತುಳುನಾಡಿನ ಜಾನಪದ ಕಲೆ, ಆಟಿ ಕಳೆಂಜ ಹಾಗೂ ನಗರ ಮಹಿಳಾ ಘಟಕದಿಂದ ಮಳೆಗಾಲದ ವಿಶೇಷ ಖಾದ್ಯಗಳ ಪ್ರದರ್ಶನ ಗಮನ ಸೆಳೆಯಲಿದೆ ಎಂದರು.

2023-24 ಮತ್ತು 2024-25ನೇ ಸಾಲಿನಲ್ಲಿ ಶೇ.90ರಷ್ಟು ಅಂಕ ಪಡೆದ ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಪ್ರೋತ್ಸಾಹಿಸಲಾಗುವುದು ಎಂದರು.

ಹಗ್ಗಜಗ್ಗಾಟ ಮತ್ತು ಹ್ಯಾಂಡ್ ಬಾಲ್ ಸ್ಪರ್ಧೆಗೆ ಜು.25ರ ಒಳಗೆ ತಂಡಗಳು ನೋಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಮೊ.ಸಂ.9972477982, 9535946519 ಅನ್ನು ಸಂಪರ್ಕಿಸಬಹುದು ಎಂದು ಹೇಳಿದರು.

ಯುವ ಬಂಟ್ಸ್ ಅಸೋಸಿಯೇಷನ್ ಅಧ್ಯಕ್ಷ ಸದಾನಂದ ರೈ ಮಾತನಾಡಿ, ಸಮುದಾಯ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

ಮಡಿಕೇರಿ ತಾಲ್ಲೂಕು ಮಹಿಳಾ ಬಂಟ್ಸ್ ಘಟಕದ ಅಧ್ಯಕ್ಷೆ ಶಶಿಕಲಾ ಲೋಕೇಶ್ ರೈ, ಮಡಿಕೇರಿ ನಗರ ಘಟಕದ ಅಧ್ಯಕ್ಷೆ ಬಿ.ಜೆ.ಬೇಬಿ ಜಯರಾಂ ರೈ, ಬಿ.ಆರ್.ನೀತು ರೈ, ಬಿ.ಜೆ.ಕಮಲಾಕ್ಷಿ ರೈ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಪೂರ್ಣ ಸಿದ್ಧವಾಗದ ಎಕ್ಸ್‌ಪ್ರೇಸ್‌ ವೇ : ಟೋಲ್‌ ಕಡಿತ

ಹೊಸದಿಲ್ಲಿ : ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮಹತ್ವದ ಸುದ್ದಿಯೊಂದನ್ನು ನೀಡಿದೆ.…

3 hours ago

ಸೇವಾ ತೀರ್ಥ ಸಂಕೀರ್ಣ ಉದ್ಘಾಟಿಸಿದ ಪ್ರಧಾನಿ ಮೋದಿ

ಹೊಸದಿಲ್ಲಿ : ಪ್ರಧಾನ ಮಂತ್ರಿ ಕಾರ್ಯಾಲಯ (ಪಿಎಂಒ), ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯ ಮತ್ತು ಸಂಪುಟ ಸಚಿವಾಲಯಗಳನ್ನು ಒಳಗೊಂಡಿರುವ ‘ಸೇವಾ…

4 hours ago

T20 World Cup | ಕೆನಡಾ ವಿರುದ್ಧ ಯುಎಇಗೆ ರೋಚಕ ಜಯ

ಹೊಸದಿಲ್ಲಿ : ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ‘ಡಿ’ಗುಂಪಿನ ಪಂದ್ಯದಲ್ಲಿ ಯುಎಇ ಕ್ರಿಕೆಟ್ ತಂಡವು ಕೆನಡಾ ತಂಡವನ್ನು ಐದು…

4 hours ago

ದಳಪತಿ ವಿಜಯ್‌ ರ‍್ಯಾಲಿಯಲ್ಲಿ ನಿಲ್ಲದ ದುರಂತ : ಮತ್ತೊಬ್ಬನ ಸಾವು

ಸೇಲಂ : ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ರ‍್ಯಾಲಿ ವೇಳೆ ಕುಸಿದು ಬಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗದ ಮಧ್ಯೆ…

4 hours ago

ರೈಲ್‌ಒನ್‌ ಆಪ್‌ : ಒಂದೇ ಕಡೆ ಸಿಗಲಿದೆ ರೈಲು ಸೌಲಭ್ಯಗಳು

ಬೆಂಗಳೂರು : ಭಾರತೀಯ ರೈಲ್ವೆಯು ತನ್ನ ಅಧಿಕೃತ ಆಪ್ ‘ರೈಲ್‌ಒನ್’ ಅನ್ನು ಇತ್ತೀಚೆಗೆ ಬಿಡುಗಡೆ ಮಾಡಿದೆ. ಇದರಲ್ಲಿ ರೈಲ್ವೆ ಸೇವೆಗಳೆಲ್ಲವೂ…

5 hours ago

ತಾರಿಖ್‌ ರೆಹಮಾನ್‌ ಬಾಂಗ್ಲಾದೇಶದ ನೂತನ ಪ್ರಧಾನಿ

ಢಾಕಾ : ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆಯಲ್ಲಿ ಬಾಂಗ್ಲಾದೇಶ ನ್ಯಾಷನಲ್ ಪಾರ್ಟಿ(ಬಿಎನ್‌ಪಿ) ಗೆದ್ದು ಬೀಗಿದೆ. ಸಂಸತ್ತಿನ ಒಟ್ಟು 300 ಸ್ಥಾನಗಳ ಪೈಕಿ…

5 hours ago