ಕೊಡಗು

ಮಡಿಕೇರಿ | ಆ .10ರಂದು ಕೆಸರು ಗದ್ದೆ ಕ್ರೀಡಾಕೂಟ

ಮಡಿಕೇರಿ : ಆಟಿ ಪ್ರಯುಕ್ತ ಕೊಡಗು ಜಿಲ್ಲಾ ಬಂಟರ ಸಂಘ, ಕೊಡಗು ಯುವ ಬಂಟ್ಸ್ ಅಸೋಸಿಯೇಷನ್ ಆಶ್ರಯದಲ್ಲಿ ಆ. 10ರಂದು ಕಗ್ಗೋಡ್ಲುವಿನಲ್ಲಿ ಆಟಿಡೊಂಜಿ ದಿನ ಕೆಸರ‍್ದ ಗೊಬ್ಬು ಕೆಸರುಗದ್ದೆ ಕ್ರೀಡಾಕೂಟ ನಡೆಯಲಿದೆ ಎಂದು ಯುವ ಬಂಟ್ಸ್ ಅಸೋಸಿಯೇಷನ್ ಸದಸ್ಯ ಶರತ್ ಕುಮಾರ್ ಶೆಟ್ಟಿ ತಿಳಿಸಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಡಿಕೇರಿ ನಗರ ಬಂಟರ ಮಹಿಳಾ ಘಟಕ, ಮಡಿಕೇರಿ ತಾಲ್ಲೂಕು ಬಂಟರ ಮಹಿಳಾ ಘಟಕ, ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲ್ಲೂಕು ಮಹಿಳಾ ಬಂಟರ ಸಂಘ, ಕಗ್ಗೊಡ್ಲು ಹೋಬಳಿ ಬಂಟರ ಸಂಘದ ಸಹಯೋಗದಲ್ಲಿ ಕಗ್ಗೋಡ್ಲುವಿನಲ್ಲಿರುವ ದಿ.ರಾಮಣ್ಣನವರ ಪತ್ನಿ ಸುಮಲತಾ ಅವರ ಗದ್ದೆಯಲ್ಲಿ ಬೆಳಿಗ್ಗೆ 7 ಗಂಟೆಗೆ ಕ್ರೀಡಾಕೂಟಕ್ಕೆ ಚಾಲನೆ ದೊರೆಯಲಿದೆ. ಸಂಜೆ 6 ಗಂಟೆಗೆ ಕಗ್ಗೊಡ್ಲುವಿನ ಅಂಬಾರ ಸಭಾಂಗಣದಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ ಎಂದು ತಿಳಿಸಿದರು.

ಪುರುಷರಿಗೆ ಹ್ಯಾಂಡ್ ಬಾಲ್ (7+2), ವಿವಿಧ ವಿಭಾಗದಲ್ಲಿ 100 ಮೀ. ಓಟ, ಹಗ್ಗಜಗ್ಗಾಟ, ದಂಪತಿ ಓಟ, ಮಹಿಳೆಯರಿಗೆ 100 ಮೀ. ಓಟ, ಹಗ್ಗಜಗ್ಗಾಟ, ನಿಂಬೆ ಚಮಚ, ಪಾಸಿಂಗ್ ಬಾಲ್ ನಡೆಯಲಿದೆ. ಮಕ್ಕಳಿಗೆ 100 ಮೀ. ಓಟ ಹಾಗೂ ಮನೋರಂಜನಾ ಸ್ಪರ್ಧೆ ನಡೆಯಲಿದೆ. ಅಲ್ಲದೆ ತುಳುನಾಡಿನ ಜಾನಪದ ಕಲೆ, ಆಟಿ ಕಳೆಂಜ ಹಾಗೂ ನಗರ ಮಹಿಳಾ ಘಟಕದಿಂದ ಮಳೆಗಾಲದ ವಿಶೇಷ ಖಾದ್ಯಗಳ ಪ್ರದರ್ಶನ ಗಮನ ಸೆಳೆಯಲಿದೆ ಎಂದರು.

2023-24 ಮತ್ತು 2024-25ನೇ ಸಾಲಿನಲ್ಲಿ ಶೇ.90ರಷ್ಟು ಅಂಕ ಪಡೆದ ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಪ್ರೋತ್ಸಾಹಿಸಲಾಗುವುದು ಎಂದರು.

ಹಗ್ಗಜಗ್ಗಾಟ ಮತ್ತು ಹ್ಯಾಂಡ್ ಬಾಲ್ ಸ್ಪರ್ಧೆಗೆ ಜು.25ರ ಒಳಗೆ ತಂಡಗಳು ನೋಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಮೊ.ಸಂ.9972477982, 9535946519 ಅನ್ನು ಸಂಪರ್ಕಿಸಬಹುದು ಎಂದು ಹೇಳಿದರು.

ಯುವ ಬಂಟ್ಸ್ ಅಸೋಸಿಯೇಷನ್ ಅಧ್ಯಕ್ಷ ಸದಾನಂದ ರೈ ಮಾತನಾಡಿ, ಸಮುದಾಯ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

ಮಡಿಕೇರಿ ತಾಲ್ಲೂಕು ಮಹಿಳಾ ಬಂಟ್ಸ್ ಘಟಕದ ಅಧ್ಯಕ್ಷೆ ಶಶಿಕಲಾ ಲೋಕೇಶ್ ರೈ, ಮಡಿಕೇರಿ ನಗರ ಘಟಕದ ಅಧ್ಯಕ್ಷೆ ಬಿ.ಜೆ.ಬೇಬಿ ಜಯರಾಂ ರೈ, ಬಿ.ಆರ್.ನೀತು ರೈ, ಬಿ.ಜೆ.ಕಮಲಾಕ್ಷಿ ರೈ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಛತ್ತೀಸ್‌ಗಢ ವಿದ್ಯುತ್‌ ಸ್ಥಾವರ ಸ್ಫೋಟ ದುರಂತ: ಸಾವಿನ ಸಂಖ್ಯೆ 14ಕ್ಕೆ ಏರಿಕೆ

ರಾಯಪುರ: ಛತ್ತೀಸ್‌ಗಢದ ಶಕ್ತಿ ಜಿಲ್ಲೆಯ ವಿದ್ಯುತ್‌ ಸ್ಥಾವರದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಘಟನಾ ಸ್ಥಳದಲ್ಲಿ ರಕ್ಷಣಾ…

18 mins ago

ಓದುಗರ ಪತ್ರ: ನಂಜನಗೂಡು ಕೆ.ಹೆಚ್.ಬಿ. ಕಾಲೋನಿ ರಸ್ತೆ ದುರಸ್ತಿ ಮಾಡಿ

ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ತಾಲ್ಲೂಕು ಮಟ್ಟದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್‌ಬಿ) ಯಿಂದ ಮನೆಗಳನ್ನು ನಿರ್ಮಾಣ ಮಾಡಿ ಹಂಚಿಕೆ ಮಾಡಿದ್ದು…

3 hours ago

ಓದುಗರ ಪತ್ರ: ಸರ್ಕಾರಿ ಶಾಲೆಗಳಿಗೆ ಮೂಲ ಸೌಕರ್ಯ ಕಲ್ಪಿಸಿ

ರಾಜ್ಯದಲ್ಲಿ, ಸುಮಾರು ಮೂರು ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲಾ ಕಟ್ಟಡಗಳು ಶಿಥಿಲಗೊಂಡು, ಈ ಶಾಲೆಗಳು ಕುಸಿಯುವ ಹಂತ ತಲುಪಿವೆ ಎಂದು,…

3 hours ago

ಓದುಗರ ಪತ್ರ: ರಸ್ತೆ ಬದಿಯ ಒಣಗಿದ ಮರಗಳನ್ನು ತೆರವುಗೊಳಿಸಿ

ಎಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದಿಂದ ಕೆಂಡಗಣ್ಣಸ್ವಾಮಿ ಗದ್ದಿಗೆ ಮಾರ್ಗವಾಗಿ ದಿನನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ರಸ್ತೆಯ ಎರಡೂ ಬದಿಗಳಲ್ಲಿರುವ ಬಹುತೇಕ…

3 hours ago

ಓದುಗರ ಪತ್ರ: ಪಾರಂಪರಿಕ ಕಟ್ಟಡಗಳ ಮಾಹಿತಿ ಫಲಕಗಳ ದುಸ್ಥಿತಿ

ಮೈಸೂರು ಮಹಾರಾಜರ ಕಾಲದಲ್ಲಿ ನಿರ್ಮಾಣಗೊಂಡ ಕಟ್ಟಡಗಳು ಇಂದಿಗೂ ಸದೃಢವಾಗಿ ಕಂಗೊಳಿಸುತ್ತಿರುವುದು ಮೈಸೂರಿನ ಭವ್ಯ ಪರಂಪರೆಗೆ ಸಾಕ್ಷಿಯಾಗಿವೆ. ಇಂತಹ ಪಾರಂಪರಿಕ ಕಟ್ಟಡಗಳ…

3 hours ago

ಕೊಡಗು ಜಿಲ್ಲೆಯಲ್ಲೇ ಎರಡನೇ ಸ್ಥಾನ ಪಡೆದ ರೈತ ಪುತ್ರಿ ನಂದಿತಾ

ಮಡಿಕೇರಿ: ಓದುವ ಛಲ, ಆತ್ಮವಿಶ್ವಾಸ, ಪ್ರೋತ್ಸಾಹ, ಮಾರ್ಗದರ್ಶನವಿದ್ದರೆ ಮಕ್ಕಳು ಸರ್ಕಾರಿ ಕಾಲೇಜಿನಲ್ಲಿ  ಓದಿದರೂ ಉತ್ತಮ ಅಂಕ ಗಳಿಸಲು ಸಾಧ್ಯವಿದೆ. ಇದಕ್ಕೆ…

4 hours ago