ಮಡಿಕೇರಿ: ಸೂರ್ಲಬ್ಬಿಯಲ್ಲಿ ಮೇ ೯ರಂದು ನಡೆದಿದ್ದ ವಿದ್ಯಾರ್ಥಿನಿಯ ಭೀಕರ ಕೊಲೆ ಪ್ರಕರಣ ಇಡೀ ಜಿಲ್ಲೆಯನ್ನು ಬೆಚ್ಚಿ ಬೀಳಿಸಿದ್ದು, ಕೊಲೆ ಆರೋಪಿ ಪ್ರಕಾಶ್ ಓಂಕಾರಪ್ಪನನ್ನು ಇಂದು ( ಮೇ 11 ) ಬೆಳಗ್ಗೆ ಬಂಧನ ಮಾಡಲಾಗಿದೆ.
ಬಂಧನಕ್ಕೊಳಗಾದ ಪ್ರಕಾಶ್ ಓಂಕಾರಪ್ಪ ಪೊಲೀಸ್ ವಿಚಾರಣೆ ವೇಳೆ ಹತ್ಯೆಗೀಡಾದ ವಿದ್ಯಾರ್ಥಿನಿ ಯುಎಸ್ ಮೀನಾಳ (16) ರುಂಡವನ್ನು ಪೊದೆಯೊಂದರಲ್ಲಿ ಇಟ್ಟಿದ್ದಾಗಿ ಬಾಯಿಬಿಟ್ಟಿದ್ದಾನೆ. ಆರೋಪಿ ನೀಡಿದ ಮಾಹಿತಿಯ ಅನುಸಾರ ಆತ ಕೃತ್ಯ ಎಸಗಿದ 300 ಮೀಟರ್ ದೂರದ ಪೊದೆಯೊಂದರಲ್ಲಿ ಬಾಲಕಿಯ ರುಂಡ ಪತ್ತೆಯಾಯಿತು. ಯಾವುದೇ ದೊಡ್ಡ ಹಾನಿಯಾಗದ ಸ್ಥಿತಿಯಲ್ಲಿ ತುಂಡರಿಸಿದ ತಲೆಯನ್ನು ವಶಪಡಿಸಿಕೊಳ್ಳಲಾಗಿದೆ. ಇದರ ಜತೆಗೆ ಕೃತ್ಯಕ್ಕೆ ಬಳಸಿದ್ದ ಮಾರಕಾಸ್ತ್ರ ಮತ್ತು ರಕ್ತಸಿಕ್ತ ಬಟ್ಟೆಗಳನ್ನೂ ಸಹ ವಶಪಡಿಸಿಕೊಂಡಿದ್ದೇವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ತಿಳಿಸಿದ್ದಾರೆ.
ಮೀನಾಳೊಂದಿಗೆ ನಿಶ್ಚಿತಾರ್ಥವನ್ನು ರದ್ದುಗೊಳಿಸಿದ ನಂತರ ನಾನು ಕಂಗಾಲಾದೆ. ಕಾಡಿನಲ್ಲಿ ಆಕೆಯೊಂದಿಗೆ ತೀವ್ರ ವಾಗ್ದಾದಕ್ಕಿಳಿದು ನಂತರ ಕೃತ್ಯ ಎಸಗಿರುವುದಾಗಿ ಆರೋಪಿ ಪೊಲೀಸರ ಬಳಿ ತಪ್ಪೊಪ್ಪಿಕೊಂಡಿದ್ದಾನೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…