ಮಡಿಕೇರಿ : ಕೇಂದ್ರ ಸರ್ಕಾರದ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಕೊಡಗು ಜಿಲ್ಲಾ ಸುನ್ನಿ ಸಮನ್ವಯ ಸಮಿತಿ ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು.
ಸಮಿತಿಯ ಮಾರ್ಗದರ್ಶನದಲ್ಲಿ ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಪ್ರತಿಭಟನಾಕಾರರು ಮೆರವಣಿಗೆ ಉದ್ದಕ್ಕೂ ವಕ್ಫ್ ತಿದ್ದುಪಡಿಗೆ ತೀವ್ರ ವಿರೋಧ ವ್ಯಕ್ತಪಡಿಸಿದರು.
ಬಳಿಕ ಗಾಂಧಿ ಮೈದಾನಕ್ಕೆ ಆಗಮಿಸಿದ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಅರ್ಪಿಸಿದರು.
ಪ್ರತಿಭಟನೆಯಲ್ಲಿ ಕೊಡಗು ಜಿಲ್ಲಾ ಜಮಯತುಲ್ ಉಲಮಾ ಅಧ್ಯಕ್ಷ ಸೈಯದ್ ಶಹಾಬುದ್ದೀನ್ ಆಲ್, ಹೈದ್ರೋಸಿ ತಂಙಳ್,
ಕೊಡಗು ಜಿಲ್ಲಾ ಸಹಾಯಕ ಖಾಝಿ ಅಬ್ದುಲ್ಲಾ ಫೈಸಿ, ಲತೀಫ್ ಸುಂಟಿಕೊಪ್ಪ, ಎಂ ಬಿ.ಹಮೀದ್, ಯಾಕೂಬ್ ಬಜೆಗುಂಡಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಹೊಸ ವರ್ಷದ ಆಗಮನವೆಂದರೆ ಬಣ್ಣಬಣ್ಣದ ದೀಪಗಳ ಅಲಂಕಾರ, ಸಿಹಿ ವಿತರಣೆ ಅಥವಾ ಮಧ್ಯರಾತ್ರಿಯ ಸಂಭ್ರಮಾಚರಣೆಯಷ್ಟೇ ಅಲ್ಲ. ಅದು ಕಾಲ ಚಕ್ರದ…
ಪಂಜುಗಂಗೊಳ್ಳಿ ಸಮಾಜದಿಂದ ಪರಿತ್ಯಕ್ತರಾದ ಮಕ್ಕಳ ಬಾಳಲ್ಲಿ ಬೆಳಕು ಮೂಡಿಸಿದ ಆನಂದ ಗ್ರಾಮ ಮಹಾರಾಷ್ಟ್ರದ ಬೀಡ್ನ ಜಿಲ್ಲಾ ಆಸ್ಪತ್ರೆಯ ರಕ್ತದ ಬ್ಯಾಂಕಿನಲ್ಲಿ…
ಪುನೀತ್ ಮಡಿಕೇರಿ ಹೊಸ ವರ್ಷಾಚರಣೆಗೆ ಕೊಡಗಿನತ್ತ ಮುಖ ಮಾಡಿದ ಜನರು; ಜಿಲ್ಲೆಯಲ್ಲಿ ಹೆಚ್ಚಿದ ವಾಹನ ದಟ್ಟಣೆ ಮಡಿಕೇರಿ: ಹೊಸ ವರ್ಷವನ್ನು…
೨೦೨೫ರ ಅವಧಿಯಲ್ಲಿ ರಾಜಕೀಯವಾಗಿ ಗಂಭೀರ ವಿಪ್ಲವಗಳನ್ನು ಕಾಣದೆ ಹೋದರೂ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಒಂದಷ್ಟು ಬದಲಾವಣೆಗಳು ನಡೆದಿರುವುದು…
ಶಾಲೆಗೆ ಬೀಗ ಹಾಕಿರುವುದನ್ನು ಫೋಟೊ ತೆಗೆದು ಸಾಬೀತುಪಡಿಸಿದ ಕರವೇ; ಶಿಕ್ಷಕರ ವಿರುದ್ಧ ಆಕ್ರೋಶ ಹನೂರು: ಹನೂರು ಶೈಕ್ಷಣಿಕ ವಲಯದ ಕೆಲವೆಡೆ…
ಚಾಮರಾಜನಗರ: ಹೊಸ ವರ್ಷ-೨೦೨೬ರ ಸ್ವಾಗತಕ್ಕೆ ಜಿಲ್ಲೆಯ ಧಾರ್ಮಿಕ ಹಾಗೂ ಪ್ರವಾಸಿ ತಾಣಗಳಿಗೆ ನಾನಾ ಕಡೆಯಿಂದ ಧಾವಿಸುವ ಪ್ರವಾಸಿಗರು ಅದಾಗಲೇ ವಸತಿ…