ಸಿದ್ದಾಪುರ : ವಿದ್ಯುತ್ ತಗುಲಿ ಕಾಡಾನೆ ಸಾವನಪ್ಪಿದ ಕಾರಣ ತೋಟದ ಕಾರ್ಮಿಕನನ್ನು ಅರಣ್ಯ ಇಲಾಖೆ ಬಂಧಿಸಿದ ಕ್ರಮದ ವಿರುದ್ದ ರೈತ, ಕಾರ್ಮಿಕ ಸಂಘಟನೆಗಳು ಖಂಡಿಸಿದೆ.
ಈ ಸಂಬಂಧ ಮಾ.14ರ ಶುಕ್ರವಾರ ಸಂಜೆ 5ಗಂಟೆಗೆ ಪಟ್ಟಣದಲ್ಲಿ ಮಾನವ ಸರಪಳಿ ರಚಿಸಿ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ.
ನಗರದಲ್ಲಿ ಗುರವಾರ ಸಂಜೆ ಕರೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ರೈತ ಸಂಘದ ವಿರಾಜಪೇಟೆ ತಾಲ್ಲೂಕು ಅಧ್ಯಕ್ಷ ಮಂಡೇಪಂಡ ಪ್ರವೀಣ್ ಬೋಪಯ್ಯ ಕಾಡಾನೆ ವಿದ್ಯುತ್ ಸ್ಪರ್ಶದಿಂದ ಸಾವನ್ನಪಿದ ಘಟನೆಗೆ ಸಂಬಂಧಿಸಿದಂತೆ ತೋಟದ ಕಾರ್ಮಿಕನನ್ನು ಬಂಧಿಸಿ ಹಲ್ಲೆನಡೆಸಿರುವ ಅರಣ್ಯ ಇಲಾಖೆ ತಕ್ಷಣ ಆತನನ್ನು ಬಿಡುಗಡೆ ಮಾಡಿ ಆತನ ಮೇಲಿನ ಮೊಕದ್ದಮೆ ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದರು.
ಮಾ.18 ರಂದು ಕಾಡಾನೆ ತೋಟಕ್ಕೆ ಬಾರದಂತೆ ತಡೆಗಟ್ಟಬೇಕು ಹಾಗೂ ವನ್ಯಮೃಗಗಳು ಮೃತಪಟ್ಟರೆ ಆಧಾರ ರಹಿತ ಸುಳ್ಳು ಮೊಕದ್ದಮೆ ಸೃಷ್ಟಿಸಿ ರೈತ-ಕಾರ್ಮಿಕನನ್ನು ಆರೋಪಿಸ್ಥಾನದಲ್ಲಿ ನಿಲ್ಲಿಸುವ ಕ್ರಮ ಆಗುತ್ತಿದ್ದು ಅರಣ್ಯ ಇಲಾಖೆ ಯಲ್ಲಿ ದಾಖಲಾದ ಮೊಕದ್ದಮೆ ಕೈಬಿಡಬೇಕು ಎಂದು ಒತ್ತಾಯಿಸಿ ಮಡಿಕೇರಿ ಅರಣ್ಯ ಭವನ ಕ್ಕೆ ರೈತ ಸಂಘ, ಕಾರ್ಮಿಕ ಸಂಘಟನೆಗಳು,ಮನವಿ ಸಲ್ಲಿಸಲಾಗುವುದು ಎಂದರು.
ವೇದಿಕೆಯಲ್ಲಿ ಅಮ್ಮತ್ತಿ ಹೋಬಳಿ ಅಧ್ಯಕ್ಷ ಬಿ.ಸಿ ಬೋಪಣ್ಣ, ಕಾರ್ಮಿಕ ಮುಖಂಡ ಭರತ್, ಜಿಲ್ಲಾ ಸಮಿತಿ ಖಜಾಂಚಿ ಸಬೀತಾ ಭೀಮಯ್ಯ ವಿಕ್ರಮ್ ಬಿದ್ದಪ್ಪ ಸಜೀವನ್,ಲಿಖಿತ್ ಸೋಮಣ್ಣ,ಸಂಚಾಲಕರಾದ ಸಿ.ಬಿ ಪೂಣಚ್ಚ,ಹರೀಶ್ ಸೋಮಯ್ಯ.
ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…
ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…
ಮಂಡ್ಯ : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸುತ್ತೂರಿನ ಆದಿ ಜಗದ್ಗುರು ಶ್ರೀ ಶಿವರಾತ್ರಿ ಶಿವ ಯೋಗಿಗಳರವರ 1066ನೇ ಜಯಂತಿ…
ಸಿದ್ದಾಪುರ : ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಗ್ರಾ.ಪಂ. ಮಾಜಿ ಅಧ್ಯಕ್ಷನ ವಿರುದ್ಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ…
ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರ ನೇತೃತ್ವದ ಕೇಂದ್ರ ಸಚಿವ ಸಂಪುಟವು ೨೦೨೬ರ ಹಂಗಾಮಿನ ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆಯನ್ನು…
ಹಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ೩೦ ಡಿ.ಸೆ. ಬೆಂಗಳೂರು : ಈಗಾಗಲೇ ರಾಜ್ಯದಲ್ಲಿ ಹೆಚ್ಚಾಗಿರುವ ಮಾಗಿ ಚಳಿಯ ವಾತಾವರಣಕ್ಕೆ ಜನರು…