ಸಿದ್ದಾಪುರ : ವಿದ್ಯುತ್ ತಗುಲಿ ಕಾಡಾನೆ ಸಾವನಪ್ಪಿದ ಕಾರಣ ತೋಟದ ಕಾರ್ಮಿಕನನ್ನು ಅರಣ್ಯ ಇಲಾಖೆ ಬಂಧಿಸಿದ ಕ್ರಮದ ವಿರುದ್ದ ರೈತ, ಕಾರ್ಮಿಕ ಸಂಘಟನೆಗಳು ಖಂಡಿಸಿದೆ.
ಈ ಸಂಬಂಧ ಮಾ.14ರ ಶುಕ್ರವಾರ ಸಂಜೆ 5ಗಂಟೆಗೆ ಪಟ್ಟಣದಲ್ಲಿ ಮಾನವ ಸರಪಳಿ ರಚಿಸಿ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ.
ನಗರದಲ್ಲಿ ಗುರವಾರ ಸಂಜೆ ಕರೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ರೈತ ಸಂಘದ ವಿರಾಜಪೇಟೆ ತಾಲ್ಲೂಕು ಅಧ್ಯಕ್ಷ ಮಂಡೇಪಂಡ ಪ್ರವೀಣ್ ಬೋಪಯ್ಯ ಕಾಡಾನೆ ವಿದ್ಯುತ್ ಸ್ಪರ್ಶದಿಂದ ಸಾವನ್ನಪಿದ ಘಟನೆಗೆ ಸಂಬಂಧಿಸಿದಂತೆ ತೋಟದ ಕಾರ್ಮಿಕನನ್ನು ಬಂಧಿಸಿ ಹಲ್ಲೆನಡೆಸಿರುವ ಅರಣ್ಯ ಇಲಾಖೆ ತಕ್ಷಣ ಆತನನ್ನು ಬಿಡುಗಡೆ ಮಾಡಿ ಆತನ ಮೇಲಿನ ಮೊಕದ್ದಮೆ ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದರು.
ಮಾ.18 ರಂದು ಕಾಡಾನೆ ತೋಟಕ್ಕೆ ಬಾರದಂತೆ ತಡೆಗಟ್ಟಬೇಕು ಹಾಗೂ ವನ್ಯಮೃಗಗಳು ಮೃತಪಟ್ಟರೆ ಆಧಾರ ರಹಿತ ಸುಳ್ಳು ಮೊಕದ್ದಮೆ ಸೃಷ್ಟಿಸಿ ರೈತ-ಕಾರ್ಮಿಕನನ್ನು ಆರೋಪಿಸ್ಥಾನದಲ್ಲಿ ನಿಲ್ಲಿಸುವ ಕ್ರಮ ಆಗುತ್ತಿದ್ದು ಅರಣ್ಯ ಇಲಾಖೆ ಯಲ್ಲಿ ದಾಖಲಾದ ಮೊಕದ್ದಮೆ ಕೈಬಿಡಬೇಕು ಎಂದು ಒತ್ತಾಯಿಸಿ ಮಡಿಕೇರಿ ಅರಣ್ಯ ಭವನ ಕ್ಕೆ ರೈತ ಸಂಘ, ಕಾರ್ಮಿಕ ಸಂಘಟನೆಗಳು,ಮನವಿ ಸಲ್ಲಿಸಲಾಗುವುದು ಎಂದರು.
ವೇದಿಕೆಯಲ್ಲಿ ಅಮ್ಮತ್ತಿ ಹೋಬಳಿ ಅಧ್ಯಕ್ಷ ಬಿ.ಸಿ ಬೋಪಣ್ಣ, ಕಾರ್ಮಿಕ ಮುಖಂಡ ಭರತ್, ಜಿಲ್ಲಾ ಸಮಿತಿ ಖಜಾಂಚಿ ಸಬೀತಾ ಭೀಮಯ್ಯ ವಿಕ್ರಮ್ ಬಿದ್ದಪ್ಪ ಸಜೀವನ್,ಲಿಖಿತ್ ಸೋಮಣ್ಣ,ಸಂಚಾಲಕರಾದ ಸಿ.ಬಿ ಪೂಣಚ್ಚ,ಹರೀಶ್ ಸೋಮಯ್ಯ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…