Mysore
21
overcast clouds

Social Media

ಗುರುವಾರ, 13 ಆಗಸ್ಟ್ 2026
Light
Dark

ಮಡಿಕೇರಿ: ಎರಡು ದಿನಗಳ ಕಾಲ ನಡೆದ “ರಾಮೋತ್ಸವ” ಕಾರ್ಯಕ್ರಮ

ಮಡಿಕೇರಿ: ಮಡಿಕೇರಿಯ ಮಲ್ಲಿಕಾರ್ಜುನ ನಗರದ ಶ್ರೀ ಕೋದಂಡ ರಾಮ ದೇವಾಲಯದಲ್ಲಿ ಶ್ರೀ ಕೋದಂಡ ರಾಮೋತ್ಸವ ಸಮಿತಿ ವತಿಯಿಂದ 35ನೇ ವರ್ಷದ ರಾಮೋತ್ಸವ ಕಾರ್ಯಕ್ರಮಗಳು ಎರಡು ದಿನಗಳ ಕಾಲ  ವಿಜೃಂಭಣೆಯಿಂದ ನಡೆಯಿತು.

ಏ.5 ರಂದು ಸಂಜೆ ನಗರದ ಗಾಂಧಿ ಮೈದಾನದಿಂದ ಧಾರ್ಮಿಕ ಮತ್ತು ಸಾಂಸ್ಕೃತಿಕ ಮೆರವಣಿಗೆ ಸಾಗಿತು. ಮೆರವಣಿಗೆಯಲ್ಲಿ ಚಂಡೆ, ತೈಯಂ ಕುಣಿತ, ಫ್ಲವರ್ ಡ್ಯಾನ್ಸ್, ತಮಟೆ, ರಾಮ, ಆಂಜನೇಯ ವೇ?ಧಾರಿಗಳು, ಹುಲಿ ವೇಷ, ಭಜನಾ ತಂಡಗಳು, ಕಳಸ ಹಾಗೂ ರಾಮನ ಪಲ್ಲಕ್ಕಿ ಮೆರವಣಿಗೆ ಆಕರ್ಷಿಸಿತು.

ಮೆರವಣಿಗೆಯಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಮಡಿಕೇರಿ ಶಾಸಕ ಡಾ.ಮಂತರ್ ಗೌಡ, ರಾಮೋಹಳ್ಳಿ ಶ್ರೀ ಸಿದ್ದಾರೂಢ ಮಿಷನ್ ಆಶ್ರಮದ ಶ್ರೀ ಡಾ.ಆರೂಢ ಭಾರತಿ ಸ್ವಾಮೀಜಿ ಮತ್ತಿತರ ಪ್ರಮುಖರು ಪಾಲ್ಗೊಂಡಿದ್ದರು.

ದೇವಾಲಯದಲ್ಲಿ ಪಲ್ಲಕ್ಕಿಯನ್ನು ಹೊತ್ತು ಪೂಜೆ ಸಲ್ಲಿಸಿದ ನಂತರ ಅನ್ನದಾನ ನೆರವೇರಿತು. ರಾತ್ರಿ ವಿವಿಧ ಸಮುದಾಯಗಳಿಂದ ಆಕರ್ಷಕ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.

ಏ.6 ರಂದು ಶ್ರೀ ಕೋದಂಡ ರಾಮ ದೇವಾಲಯದ ಕ್ಷೇತ್ರ ತಂತ್ರಿಗಳಾದ ಬ್ರ.ಶ್ರೀ.ವೇ.ಮೂ. ಶ್ರೀಕೃಷ್ಣ ಉಪಾಧ್ಯ ಅವರಿಂದ ತತ್ವ ಕಳಸ ಹೋಮ, ನವಗ್ರಹ ಹೋಮ, ತತ್ವ ಕಳಶಾಭಿಷೇಕ, ಗುರು ಗಣಪತಿ ಪೂಜೆ, ಪುಣ್ಯಾಹ, ಸಂಕಲ್ಪ, ಮಹಾಗಣಪತಿ ಹೋಮ, ನವಗ್ರಹ ಹೋಮ, ರಾಮ ತಾರಕ ಹೋಮ, ಕಲಾ ಹೋಮ, ಬಟ್ಟಲು ಕಾಣಿಕೆ, ಅಲಂಕಾರ ಪೂಜೆ ನೆರವೇರಿತು. ಮಹಾಪೂಜೆಯ ನಂತರ ತೀರ್ಥಪ್ರಸಾದ, ಕೋಸಂಬರಿ, ಪಾನಕ ವಿತರಣೆ ಮತ್ತು ಅನ್ನಸಂತರ್ಪಣೆಯಾಯಿತು.

ಆರೋಗ್ಯ ಶಿಬಿರ: ರಾಮೋತ್ಸವದ ಅಂಗವಾಗಿ ಕೊಡಗು ಮೆಡಿಕಲ್ ಕಾಲೇಜು ವತಿಯಿಂದ ಶ್ರೀ ಕೋದಂಡರಾಮ ದೇವಾಲಯದ ಆವರಣದಲ್ಲಿ ರಕ್ತ ಪರೀಕ್ಷೆ ಮತ್ತು ರಕ್ತದೊತ್ತಡ (ಬಿಪಿ) ಪರೀಕ್ಷೆ ನಡೆಯಿತು. 40 ವರ್ಷ ಮೇಲ್ಪಟ್ಟವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

Tags:
error: Content is protected !!