ಕೊಡಗು

ಮಡಿಕೇರಿ: ಎರಡು ದಿನಗಳ ಕಾಲ ನಡೆದ “ರಾಮೋತ್ಸವ” ಕಾರ್ಯಕ್ರಮ

ಮಡಿಕೇರಿ: ಮಡಿಕೇರಿಯ ಮಲ್ಲಿಕಾರ್ಜುನ ನಗರದ ಶ್ರೀ ಕೋದಂಡ ರಾಮ ದೇವಾಲಯದಲ್ಲಿ ಶ್ರೀ ಕೋದಂಡ ರಾಮೋತ್ಸವ ಸಮಿತಿ ವತಿಯಿಂದ 35ನೇ ವರ್ಷದ ರಾಮೋತ್ಸವ ಕಾರ್ಯಕ್ರಮಗಳು ಎರಡು ದಿನಗಳ ಕಾಲ  ವಿಜೃಂಭಣೆಯಿಂದ ನಡೆಯಿತು.

ಏ.5 ರಂದು ಸಂಜೆ ನಗರದ ಗಾಂಧಿ ಮೈದಾನದಿಂದ ಧಾರ್ಮಿಕ ಮತ್ತು ಸಾಂಸ್ಕೃತಿಕ ಮೆರವಣಿಗೆ ಸಾಗಿತು. ಮೆರವಣಿಗೆಯಲ್ಲಿ ಚಂಡೆ, ತೈಯಂ ಕುಣಿತ, ಫ್ಲವರ್ ಡ್ಯಾನ್ಸ್, ತಮಟೆ, ರಾಮ, ಆಂಜನೇಯ ವೇ?ಧಾರಿಗಳು, ಹುಲಿ ವೇಷ, ಭಜನಾ ತಂಡಗಳು, ಕಳಸ ಹಾಗೂ ರಾಮನ ಪಲ್ಲಕ್ಕಿ ಮೆರವಣಿಗೆ ಆಕರ್ಷಿಸಿತು.

ಮೆರವಣಿಗೆಯಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಮಡಿಕೇರಿ ಶಾಸಕ ಡಾ.ಮಂತರ್ ಗೌಡ, ರಾಮೋಹಳ್ಳಿ ಶ್ರೀ ಸಿದ್ದಾರೂಢ ಮಿಷನ್ ಆಶ್ರಮದ ಶ್ರೀ ಡಾ.ಆರೂಢ ಭಾರತಿ ಸ್ವಾಮೀಜಿ ಮತ್ತಿತರ ಪ್ರಮುಖರು ಪಾಲ್ಗೊಂಡಿದ್ದರು.

ದೇವಾಲಯದಲ್ಲಿ ಪಲ್ಲಕ್ಕಿಯನ್ನು ಹೊತ್ತು ಪೂಜೆ ಸಲ್ಲಿಸಿದ ನಂತರ ಅನ್ನದಾನ ನೆರವೇರಿತು. ರಾತ್ರಿ ವಿವಿಧ ಸಮುದಾಯಗಳಿಂದ ಆಕರ್ಷಕ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.

ಏ.6 ರಂದು ಶ್ರೀ ಕೋದಂಡ ರಾಮ ದೇವಾಲಯದ ಕ್ಷೇತ್ರ ತಂತ್ರಿಗಳಾದ ಬ್ರ.ಶ್ರೀ.ವೇ.ಮೂ. ಶ್ರೀಕೃಷ್ಣ ಉಪಾಧ್ಯ ಅವರಿಂದ ತತ್ವ ಕಳಸ ಹೋಮ, ನವಗ್ರಹ ಹೋಮ, ತತ್ವ ಕಳಶಾಭಿಷೇಕ, ಗುರು ಗಣಪತಿ ಪೂಜೆ, ಪುಣ್ಯಾಹ, ಸಂಕಲ್ಪ, ಮಹಾಗಣಪತಿ ಹೋಮ, ನವಗ್ರಹ ಹೋಮ, ರಾಮ ತಾರಕ ಹೋಮ, ಕಲಾ ಹೋಮ, ಬಟ್ಟಲು ಕಾಣಿಕೆ, ಅಲಂಕಾರ ಪೂಜೆ ನೆರವೇರಿತು. ಮಹಾಪೂಜೆಯ ನಂತರ ತೀರ್ಥಪ್ರಸಾದ, ಕೋಸಂಬರಿ, ಪಾನಕ ವಿತರಣೆ ಮತ್ತು ಅನ್ನಸಂತರ್ಪಣೆಯಾಯಿತು.

ಆರೋಗ್ಯ ಶಿಬಿರ: ರಾಮೋತ್ಸವದ ಅಂಗವಾಗಿ ಕೊಡಗು ಮೆಡಿಕಲ್ ಕಾಲೇಜು ವತಿಯಿಂದ ಶ್ರೀ ಕೋದಂಡರಾಮ ದೇವಾಲಯದ ಆವರಣದಲ್ಲಿ ರಕ್ತ ಪರೀಕ್ಷೆ ಮತ್ತು ರಕ್ತದೊತ್ತಡ (ಬಿಪಿ) ಪರೀಕ್ಷೆ ನಡೆಯಿತು. 40 ವರ್ಷ ಮೇಲ್ಪಟ್ಟವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

ಆಂದೋಲನ ಡೆಸ್ಕ್

Recent Posts

ಮಾದಕ ವಸ್ತು ಪತ್ತೆ ; ನಾಲ್ವರು ಸಿಸಿಬಿ ವಶಕ್ಕೆ

ಮೈಸೂರು : ಮಾದಕ ವ್ಯಸನ ಮುಕ್ತ ಮೈಸೂರು ವಿಮುಕ್ತಿ ಅಭಿಯಾನದ ಮುಂದುವರಿದ ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ ಸುಮಾರು…

8 hours ago

ಏಳು ವಿದೇಶಿಯರ ಬಂಧಿಸಿದ ಎನ್‌ಐಎ

ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…

10 hours ago

ಮೈಸೂರು | ಆಕಸ್ಮಿಕ ಬೆಂಕಿಗೆ ವ್ಯಕ್ತಿ ಸಜೀವ ದಹನ

ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್‌ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…

11 hours ago

ಎಸ್‌ಎಸ್‌ಎಲ್‌ಸಿ ಪರೀಕ್ಷೆ : ವಿದ್ಯಾರ್ಥಿಗಳಿಗೆ ಶುಭಕೋರಿದ ಸಿಎಂ

ಬೆಂಗಳೂರು : 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…

11 hours ago

ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಸಂಭ್ರಮ : ಮಾದಪ್ಪನಿಗೆ ಎಣ್ಣೆಮಜ್ಜನ

ಹನೂರು : ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆ ಮಂಗಳವಾರ…

11 hours ago

ಕುಡಿಯುವ ನೀರು ಸಮಸ್ಯೆಗೆ ಸರ್ಕಾರದ ಕ್ರಮವೇನು? : ಅಧಿವೇಶನದಲ್ಲಿ ಎಂಎಲ್‌ಎ ಮಂಜುನಾಥ್‌ ಪ್ರಶ್ನೆ

ಹನೂರು : ತಾಲೂಕು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಶಾಶ್ವತ ಪರಿಹಾರಕ್ಕೆ ಸರ್ಕಾರ…

11 hours ago