ಕೊಡಗು

ಮಡಿಕೇರಿ: ಎರಡು ದಿನಗಳ ಕಾಲ ನಡೆದ “ರಾಮೋತ್ಸವ” ಕಾರ್ಯಕ್ರಮ

ಮಡಿಕೇರಿ: ಮಡಿಕೇರಿಯ ಮಲ್ಲಿಕಾರ್ಜುನ ನಗರದ ಶ್ರೀ ಕೋದಂಡ ರಾಮ ದೇವಾಲಯದಲ್ಲಿ ಶ್ರೀ ಕೋದಂಡ ರಾಮೋತ್ಸವ ಸಮಿತಿ ವತಿಯಿಂದ 35ನೇ ವರ್ಷದ ರಾಮೋತ್ಸವ ಕಾರ್ಯಕ್ರಮಗಳು ಎರಡು ದಿನಗಳ ಕಾಲ  ವಿಜೃಂಭಣೆಯಿಂದ ನಡೆಯಿತು.

ಏ.5 ರಂದು ಸಂಜೆ ನಗರದ ಗಾಂಧಿ ಮೈದಾನದಿಂದ ಧಾರ್ಮಿಕ ಮತ್ತು ಸಾಂಸ್ಕೃತಿಕ ಮೆರವಣಿಗೆ ಸಾಗಿತು. ಮೆರವಣಿಗೆಯಲ್ಲಿ ಚಂಡೆ, ತೈಯಂ ಕುಣಿತ, ಫ್ಲವರ್ ಡ್ಯಾನ್ಸ್, ತಮಟೆ, ರಾಮ, ಆಂಜನೇಯ ವೇ?ಧಾರಿಗಳು, ಹುಲಿ ವೇಷ, ಭಜನಾ ತಂಡಗಳು, ಕಳಸ ಹಾಗೂ ರಾಮನ ಪಲ್ಲಕ್ಕಿ ಮೆರವಣಿಗೆ ಆಕರ್ಷಿಸಿತು.

ಮೆರವಣಿಗೆಯಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಮಡಿಕೇರಿ ಶಾಸಕ ಡಾ.ಮಂತರ್ ಗೌಡ, ರಾಮೋಹಳ್ಳಿ ಶ್ರೀ ಸಿದ್ದಾರೂಢ ಮಿಷನ್ ಆಶ್ರಮದ ಶ್ರೀ ಡಾ.ಆರೂಢ ಭಾರತಿ ಸ್ವಾಮೀಜಿ ಮತ್ತಿತರ ಪ್ರಮುಖರು ಪಾಲ್ಗೊಂಡಿದ್ದರು.

ದೇವಾಲಯದಲ್ಲಿ ಪಲ್ಲಕ್ಕಿಯನ್ನು ಹೊತ್ತು ಪೂಜೆ ಸಲ್ಲಿಸಿದ ನಂತರ ಅನ್ನದಾನ ನೆರವೇರಿತು. ರಾತ್ರಿ ವಿವಿಧ ಸಮುದಾಯಗಳಿಂದ ಆಕರ್ಷಕ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.

ಏ.6 ರಂದು ಶ್ರೀ ಕೋದಂಡ ರಾಮ ದೇವಾಲಯದ ಕ್ಷೇತ್ರ ತಂತ್ರಿಗಳಾದ ಬ್ರ.ಶ್ರೀ.ವೇ.ಮೂ. ಶ್ರೀಕೃಷ್ಣ ಉಪಾಧ್ಯ ಅವರಿಂದ ತತ್ವ ಕಳಸ ಹೋಮ, ನವಗ್ರಹ ಹೋಮ, ತತ್ವ ಕಳಶಾಭಿಷೇಕ, ಗುರು ಗಣಪತಿ ಪೂಜೆ, ಪುಣ್ಯಾಹ, ಸಂಕಲ್ಪ, ಮಹಾಗಣಪತಿ ಹೋಮ, ನವಗ್ರಹ ಹೋಮ, ರಾಮ ತಾರಕ ಹೋಮ, ಕಲಾ ಹೋಮ, ಬಟ್ಟಲು ಕಾಣಿಕೆ, ಅಲಂಕಾರ ಪೂಜೆ ನೆರವೇರಿತು. ಮಹಾಪೂಜೆಯ ನಂತರ ತೀರ್ಥಪ್ರಸಾದ, ಕೋಸಂಬರಿ, ಪಾನಕ ವಿತರಣೆ ಮತ್ತು ಅನ್ನಸಂತರ್ಪಣೆಯಾಯಿತು.

ಆರೋಗ್ಯ ಶಿಬಿರ: ರಾಮೋತ್ಸವದ ಅಂಗವಾಗಿ ಕೊಡಗು ಮೆಡಿಕಲ್ ಕಾಲೇಜು ವತಿಯಿಂದ ಶ್ರೀ ಕೋದಂಡರಾಮ ದೇವಾಲಯದ ಆವರಣದಲ್ಲಿ ರಕ್ತ ಪರೀಕ್ಷೆ ಮತ್ತು ರಕ್ತದೊತ್ತಡ (ಬಿಪಿ) ಪರೀಕ್ಷೆ ನಡೆಯಿತು. 40 ವರ್ಷ ಮೇಲ್ಪಟ್ಟವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

ಆಂದೋಲನ ಡೆಸ್ಕ್

Recent Posts

ಮರ್ಯಾದಾ ಹತ್ಯೆ ನಿಷೇಧ ಮಸೂದೆ ಮಂಡನೆ

ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…

42 mins ago

ಮೈಸೂರು ನಗರದಲ್ಲಿ ಮಳೆ ; ತಂಪಾದ ಇಳೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…

1 hour ago

ಯುಗಾದಿ ಸಂಭ್ರಮ : ಮೈಸೂರಲ್ಲಿ ಖರೀದಿ ಜೋರು

ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…

3 hours ago

ನಾಳೆ ಧುರಂಧರ್-2 ಬಿಡುಗಡೆ : ಎಲ್ಲಾ ದಾಖಲೆ ಮುರಿಯುವ ನಿರೀಕ್ಷೆ

ಮುಂಬೈ : ಆದಿತ್ಯ ಧರ್‌ ನಿರ್ದೇಶನದ, ರಣವೀರ್‌ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.‌19) ಬಿಡುಗಡೆಯಾಗಲಿದೆ. ಕಳೆದ ವರ್ಷ…

3 hours ago

ದಳಪತಿ ವಿಜಯ್‌ಗೆ ಮುಖ್ಯಮಂತ್ರಿ ಸ್ಥಾನದ ಆಫರ್‌

ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳಿರುವಾಗ, ನಟ-ರಾಜಕಾರಣಿ ದಳಪತಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ…

4 hours ago

ನ್ಯಾಟೋ ದೇಶಗಳಿಗೆ ಎಚ್ಚರಿಕೆ ನೀಡಿದ ಟ್ರಂಪ್‌

ವಾಷಿಂಗ್ಟನ್‌ : ಅಮೆರಿಕದ ಬೆಂಬಲಕ್ಕೆ ನಿಲ್ಲಬೇಕಿದ್ದ ನ್ಯಾಟೋ ದೇಶಗಳು ಈಗ ಹಿಂದೆ ಸರಿದಿರುವುದು ಟ್ರಂಪ್ ಆಡಳಿತಕ್ಕೆ ದೊಡ್ಡ ಹಿನ್ನಡೆಯಾಗಿದೆ. ಪಶ್ಚಿಮ…

4 hours ago