ಮಡಿಕೇರಿ: ಮಡಿಕೇರಿಯ ಮಲ್ಲಿಕಾರ್ಜುನ ನಗರದ ಶ್ರೀ ಕೋದಂಡ ರಾಮ ದೇವಾಲಯದಲ್ಲಿ ಶ್ರೀ ಕೋದಂಡ ರಾಮೋತ್ಸವ ಸಮಿತಿ ವತಿಯಿಂದ 35ನೇ ವರ್ಷದ ರಾಮೋತ್ಸವ ಕಾರ್ಯಕ್ರಮಗಳು ಎರಡು ದಿನಗಳ ಕಾಲ ವಿಜೃಂಭಣೆಯಿಂದ ನಡೆಯಿತು.
ಏ.5 ರಂದು ಸಂಜೆ ನಗರದ ಗಾಂಧಿ ಮೈದಾನದಿಂದ ಧಾರ್ಮಿಕ ಮತ್ತು ಸಾಂಸ್ಕೃತಿಕ ಮೆರವಣಿಗೆ ಸಾಗಿತು. ಮೆರವಣಿಗೆಯಲ್ಲಿ ಚಂಡೆ, ತೈಯಂ ಕುಣಿತ, ಫ್ಲವರ್ ಡ್ಯಾನ್ಸ್, ತಮಟೆ, ರಾಮ, ಆಂಜನೇಯ ವೇ?ಧಾರಿಗಳು, ಹುಲಿ ವೇಷ, ಭಜನಾ ತಂಡಗಳು, ಕಳಸ ಹಾಗೂ ರಾಮನ ಪಲ್ಲಕ್ಕಿ ಮೆರವಣಿಗೆ ಆಕರ್ಷಿಸಿತು.
ಮೆರವಣಿಗೆಯಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಮಡಿಕೇರಿ ಶಾಸಕ ಡಾ.ಮಂತರ್ ಗೌಡ, ರಾಮೋಹಳ್ಳಿ ಶ್ರೀ ಸಿದ್ದಾರೂಢ ಮಿಷನ್ ಆಶ್ರಮದ ಶ್ರೀ ಡಾ.ಆರೂಢ ಭಾರತಿ ಸ್ವಾಮೀಜಿ ಮತ್ತಿತರ ಪ್ರಮುಖರು ಪಾಲ್ಗೊಂಡಿದ್ದರು.
ದೇವಾಲಯದಲ್ಲಿ ಪಲ್ಲಕ್ಕಿಯನ್ನು ಹೊತ್ತು ಪೂಜೆ ಸಲ್ಲಿಸಿದ ನಂತರ ಅನ್ನದಾನ ನೆರವೇರಿತು. ರಾತ್ರಿ ವಿವಿಧ ಸಮುದಾಯಗಳಿಂದ ಆಕರ್ಷಕ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.
ಏ.6 ರಂದು ಶ್ರೀ ಕೋದಂಡ ರಾಮ ದೇವಾಲಯದ ಕ್ಷೇತ್ರ ತಂತ್ರಿಗಳಾದ ಬ್ರ.ಶ್ರೀ.ವೇ.ಮೂ. ಶ್ರೀಕೃಷ್ಣ ಉಪಾಧ್ಯ ಅವರಿಂದ ತತ್ವ ಕಳಸ ಹೋಮ, ನವಗ್ರಹ ಹೋಮ, ತತ್ವ ಕಳಶಾಭಿಷೇಕ, ಗುರು ಗಣಪತಿ ಪೂಜೆ, ಪುಣ್ಯಾಹ, ಸಂಕಲ್ಪ, ಮಹಾಗಣಪತಿ ಹೋಮ, ನವಗ್ರಹ ಹೋಮ, ರಾಮ ತಾರಕ ಹೋಮ, ಕಲಾ ಹೋಮ, ಬಟ್ಟಲು ಕಾಣಿಕೆ, ಅಲಂಕಾರ ಪೂಜೆ ನೆರವೇರಿತು. ಮಹಾಪೂಜೆಯ ನಂತರ ತೀರ್ಥಪ್ರಸಾದ, ಕೋಸಂಬರಿ, ಪಾನಕ ವಿತರಣೆ ಮತ್ತು ಅನ್ನಸಂತರ್ಪಣೆಯಾಯಿತು.
ಆರೋಗ್ಯ ಶಿಬಿರ: ರಾಮೋತ್ಸವದ ಅಂಗವಾಗಿ ಕೊಡಗು ಮೆಡಿಕಲ್ ಕಾಲೇಜು ವತಿಯಿಂದ ಶ್ರೀ ಕೋದಂಡರಾಮ ದೇವಾಲಯದ ಆವರಣದಲ್ಲಿ ರಕ್ತ ಪರೀಕ್ಷೆ ಮತ್ತು ರಕ್ತದೊತ್ತಡ (ಬಿಪಿ) ಪರೀಕ್ಷೆ ನಡೆಯಿತು. 40 ವರ್ಷ ಮೇಲ್ಪಟ್ಟವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
ಚಾಮರಾಜನಗರ : ಆರು ತಿಂಗಳ ಹೆಣ್ಣು ಮಗುವನ್ನು ಮಾರಾಟ ಮಾಡಿರುವ ಪ್ರಕರಣ ನಗರದಲ್ಲಿ ನಡೆದಿದ್ದು, ಈ ಸಂಬಂಧ ಪೋಷಕರು ಸೇರಿದಂತೆ…
ಹನೂರು : ಜಮೀನಿನಲ್ಲಿ ಹುರುಳಿ ಫಸಲನ್ನು ಹಸು ಮೇಯ್ದಿದ್ದದನ್ನು ಪ್ರಶ್ನೆಸಿದ್ದಕ್ಕೆ ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ…
ಹಾಸನ : ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಸಿದ್ಧತೆ ನಡೆಸುವ ಸಂದೇಶವನ್ನು ರಾಜ್ಯದ ಜನರಿಗೆ ತಲುಪಿಸುವ ಗುರಿಯೊಂದಿಗೆ ನಗರದಲ್ಲಿ ಆಯೋಜಿಸಿದ್ದ…
ಮಳವಳ್ಳಿ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಹತ್ತುಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಹೊಸಹಳ್ಳಿ…
ನಂಜನಗೂಡು : ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿನ ಅನಧಿಕೃತ ಅಂಗಡಿಗಳನ್ನು ಇಂದು(ಜ.24) ಮತ್ತೋಮ್ಮೆ ತೆರವು ಗೊಳಿಸಲಾಯಿತು. ದೇವಾಲಯದ ನೂತನ ಕಾರ್ಯನಿರ್ವಾಹಕ ಅಧಿಕಾರ…
ಮುಂಬೈ : ಸೌದಿ ಅರೇಬಿಯಾದಿಂದ ಅಂತರರಾಷ್ಟ್ರೀಯ ಕೊರಿಯರ್ ಟರ್ಮಿನಲ್ನಲ್ಲಿ ಸಾಗಿಸುತ್ತಿದ್ದ ಗ್ರೈಂಡರ್ನಲ್ಲಿ ಬಚ್ಚಿಟ್ಟಿದ್ದ 2.89 ಕೋಟಿ ರೂ.ಮೌಲ್ಯದ ಚಿನ್ನವನ್ನು ಕಂದಾಯ…