ಮಡಿಕೇರಿ : ನಗರದಲ್ಲಿ ಮಂಗಳವಾರ ಸಂಜೆ ಸುರಿದ ಮಳೆಯಿಂದ ವಿದ್ಯಾರ್ಥಿಗಳು ಪರದಾಡಿದರೆ, ತಗ್ಗುಪ್ರದೇಶದ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಯಿತು.
ಜಿಲ್ಲೆಯಲ್ಲಿ ಮಳೆ ಕಡಿಮೆಯಾಗಿದ್ದು, ಕಳೆದ ಕೆಲ ದಿನಗಳಿಂದ ಬಿಸಿಲಿನ ವಾತಾವರಣ ಕಂಡುಬಂದಿದೆ. ಆದರೆ, ಮಂಗಳವಾರ ಸಂಜೆ ವೇಳೆಗೆ ದಿಢೀರನೇ ಮಳೆಯಾಗಿದ್ದು, ಕಾವೇರಿ ಬಡಾವಣೆಯಲ್ಲಿ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಸಿದೆ. ಮಳೆಗೆ ವಾಹನ ಸವಾರರು ಕೂಡ ಸಮಸ್ಯೆ ಎದುರಿಸುವಂತಾಯಿತು.
ಜಿಲ್ಲೆಯಲ್ಲಿ ಕಳೆದ ೨೪ ಗಂಟೆಗಳ ಅವಧಿಯಲ್ಲಿ ಸರಾಸರಿ ೧.೪೩ ಮಿ.ಮೀ. ಮಳೆಯಾಗಿದೆ. ಮಡಿಕೇರಿ ತಾಲ್ಲೂಕಿನಲ್ಲಿ ೨.೨೭ ಮಿ.ಮೀ., ವಿರಾಜಪೇಟೆ ತಾಲ್ಲೂಕಿನಲ್ಲಿ ೦.೨೫ ಮಿ.ಮೀ., ಪೊನ್ನಂಪೇಟೆ ತಾಲ್ಲೂಕಿನಲ್ಲಿ ೦.೦೦ ಮಿ.ಮೀ., ಸೋಮವಾರಪೇಟೆ ತಾಲ್ಲೂಕಿನಲ್ಲಿ ೩.೦೫ ಮಿ.ಮೀ., ಕುಶಾಲನಗರ ತಾಲ್ಲೂಕಿನಲ್ಲಿ ೧.೬೦ ಮಿ.ಮೀ. ಮಳೆಯಾಗಿದೆ. ಮಡಿಕೇರಿ ಕಸಬಾ ೧, ಸಂಪಾಜೆ ೭.೫೦, ಭಾಗಮಂಡಲ ೦.೬೦, ಅಮ್ಮತ್ತಿ ೦.೫೦, ಸೋಮವಾರಪೇಟೆ ೨.೮೦, ಶನಿವಾರಸಂತೆ ೧, ಶಾಂತಳ್ಳಿ ೨.೪೦, ಕೊಡ್ಲಿಪೇಟೆ ೬, ಕುಶಾಲನಗರ ೧, ಸುಂಟಿಕೊಪ್ಪ ೨.೨೦ ಮಿ.ಮೀ. ಮಳೆಯಾಗಿದೆ.
ಮೈಸೂರಿನ ಕುವೆಂಪುನಗರದ ನೃಪತುಂಗ ರಸ್ತೆಯಲ್ಲಿ ಚರಂಡಿ, ಪಾದಚಾರಿಮಾರ್ಗ ಮತ್ತು ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಸಿದ್ದಲಿಂಗೇಶ್ವರ ಅಂಗಡಿ ಬಳಿ ವಿದ್ಯುತ್…
ಮೈಸೂರು ನಗರದ ಪ್ರತಿಷ್ಠಿತ ಸಹಕಾರ ಬ್ಯಾಂಕ್ ಒಂದರಲ್ಲಿ ಸಾಲ ನೀಡುವಿಕೆಯಲ್ಲಿ ಕೊಟ್ಯಂತರ ರೂ. ಅವ್ಯವಹಾರ ನಡೆದಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ.…
ಕರ್ನಾಟಕ ಲೋಕಸೇವಾ ಆಯೋಗವು ರಾಜ್ಯದ ಅತ್ಯುನ್ನತ ನಾಗರಿಕ ಸೇವೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಜವಾಬ್ದಾರಿಯುತ ಸಂಸ್ಥೆಯಾಗಿದೆ. ಆದರೆ ಇತ್ತೀಚಿನ…
ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಮಾವುತ - ಆನೆ ನಡುವೆ ಹೃದಯಸ್ಪರ್ಶಿ ಸಂಬಂಧ ಮೈಸೂರು ದಸರಾ ಎಂದಾಕ್ಷಣ ನಮ್ಮ ಕಣ್ಣ…
ಚಿರಂಜೀವಿ ಸಿ. ಹುಲ್ಲಹಳ್ಳಿ ಜಿಲ್ಲೆಯಲ್ಲಿ ಎಚ್ಪಿವಿ ಅಭಿಯಾನ; ಶೇ.೬೮.೮ರಷ್ಟು ಪ್ರಗತಿ ೧೫,೫೧೮ ಬಾಲಕಿಯರಿಗೆ ಲಸಿಕೆ ನೀಡುವ ಗುರಿ; ೮,೩೬೦ ಸಾಧನೆ…
ಎಸ್.ಎ. ಹುಸೇನ್ ಆಯುಧಗಳಿಗೆ ವಿಶೇಷ ಪೂಜೆ; ಜಿಲ್ಲೆಯಾದ್ಯಂತ ಸಂಭ್ರಮದ ಹಬ್ಬದಾಚರಣೆಗೆ ಸಿದ್ಧತೆ ಮಡಿಕೇರಿ: ಕೊಡಗಿನ ವಿಶಿಷ್ಟ ಸಂಸ್ಕೃತಿ ಹಾಗೂ ಪರಂಪರೆಯ…