ಕೊಡಗು

ಮಡಿಕೇರಿ| ಪರಿಸರ ಪ್ರಿಯರನ್ನು ತನ್ನತ್ತ ಆಕರ್ಷಿಸುತ್ತಿರುವ ಜಲಪಾತಗಳು

ಮಡಿಕೇರಿ: ಮಳೆಗಾಲ ಆರಂಭವಾಯಿತೆಂದರೆ ಸಾಕು ಕೊಡಗಿನತ್ತ ಹೆಚ್ಚಿನ ಪ್ರವಾಸಿಗರು ಮುಖ ಮಾಡುತ್ತಾರೆ. ಇಲ್ಲಿನ ತಂಪಾದ ವಾತಾವರಣ, ಹಚ್ಚಹಸಿರಿನ ಪರಿಸರದೊಂದಿಗೆ ಮಳೆಗೆ ಮೈದುಂಬಿ ಸೌಂದರ್ಯ ಹೆಚ್ಚಿಸಿಕೊಳ್ಳುವ ಜಲಪಾತಗಳನ್ನು ನೋಡುವುದೇ ಕಣ್ಣಿಗೆ ಹಬ್ಬ. ಅದರಲ್ಲೂ ಗ್ರಾಮವೊಂದಕ್ಕೆ ತೆರಳುವ ರಸ್ತೆಯಲ್ಲೇ ೨೦ಕ್ಕೂ ಅಧಿಕ ಜಲಪಾತ ಸೃಷ್ಟಿಯಾಗುವ ಕರಿಕೆ ಈಗ ಪ್ರವಾಸಿಗರ ಹಾಟ್‌ಸ್ಪಾಟ್ ಆಗಿದೆ.

ಭಾಗಮಂಡಲ – ಕರಿಕೆ ಅಂತರ್ ರಾಜ್ಯ ಹೆದ್ದಾರಿಯ ಇಕ್ಕೆಲಗಳಲ್ಲಿ ಹರಿಯುತ್ತಿರುವ ಹತ್ತಾರು ಝರಿಗಳು, ಸುತ್ತಲೂ ಮನಮೋಹಕ ನೈಸರ್ಗಿಕ ಸೊಬಗು ಪ್ರವಾಸಿಗರನ್ನು ಆಕರ್ಷಿಸುತ್ತಿದೆ.

ಈ ಭಾಗದಲ್ಲಿ ಧಾರಾಕಾರ ಮಳೆ ಸುರಿದಿದ್ದು, ಎಲ್ಲೆಡೆ ಹಸಿರಿನಿಂದ ಕಂಗೊಳಿಸುತ್ತಿದೆ. ಕರಿಕೆ ಜಲಪಾತಗಳು ತುಂಬಿ ಧುಮ್ಮಿಕ್ಕುವ ದೃಶ್ಯ ನೋಡುಗರ ಕಣ್ಮನ ಸೆಳೆಯುತ್ತಿದೆ.

ಈ ಬಾರಿ ವರುಣ ಮೇ ಅಂತ್ಯದಿಂದಲೇ ಬಿರುಸುಗೊಂಡಿದ್ದು, ಅವಧಿಗೂ ಮುನ್ನವೇ ಉತ್ತಮ ಮಳೆಯಾಗಿದೆ. ಇದರಿಂದ ನೀರಿಲ್ಲದೆ ಕಳೆಗುಂದಿದ್ದ ಜಲ ಕನ್ಯೆಯರು ಮೈದುಂಬಿ ಪರಿಸರ ಪ್ರಿಯರನ್ನು ತನ್ನತ್ತ ಆಕರ್ಷಿಸುತ್ತಿವೆ. ಪ್ರಕೃತಿಯ ಹಚ್ಚ ಹಸಿರಿನ ಸುಂದರ ತಾಣ ಬ್ರಹ್ಮಗಿರಿ ಬೆಟ್ಟದ ತಪ್ಪಲಿನ ತಲಕಾವೇರಿ ಅಭಯಾರಣ್ಯದ ವ್ಯಾಪ್ತಿಯಲ್ಲಿರುವ ೨೦ಕ್ಕೂ ಅಧಿಕ ಜಲಪಾತಗಳು ಹಾಲ್ನೊರೆ ಸೂಸುತ್ತಿವೆ.

ಆಂದೋಲನ ಡೆಸ್ಕ್

Recent Posts

ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಇಂದು 60 ಇಂಡಿಗೋ ವಿಮಾನಗಳ ಹಾರಾಟ ರದ್ದು

ಬೆಂಗಳೂರು: ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಇಂದು ಕೂಡ 60 ಇಂಡಿಗೋ ವಿಮಾನಗಳ ಹಾರಾಟ ರದ್ದಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯಲ್ಲಿರುವ ಕೆಂಪೇಗೌಡ…

14 mins ago

ಓದುಗರ ಪತ್ರ:  ನಂಜನಗೂಡಿನ ಪ್ರಮುಖ ವೃತ್ತಕ್ಕೆ ಬಿ.ವಿ.ಪಂಡಿತರ ಹೆಸರಿಡಿ

ನಂಜನಗೂಡಿನ ಸದ್ವೈದ್ಯ ಶಾಲಾ ಸಂಸ್ಥಾಪಕರಾಗಿದ್ದ ಬಿ.ವಿ.ಪಂಡಿತರು ಆಯುರ್ವೇದ ಉತ್ಪನ್ನಗಳನ್ನು ರೂಪಿಸಿದ ಹಿರಿಮೆ ಹೊಂದಿದ್ದಾರೆ. ದಂತಧಾವನ ಚೂರ್ಣ (ನಂಜನಗೂಡು ಹಲ್ಲು ಪುಡಿ)…

26 mins ago

ಓದುಗರ ಪತ್ರ:  ಭೈರಪ್ಪ ಸ್ಮಾರಕ, ತಿಮ್ಮಕ್ಕ ವಸ್ತು ಸಂಗ್ರಹಾಲಯ ಸ್ವಾಗತಾರ್ಹ

ಮೈಸೂರಿನಲ್ಲಿ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕ ನಿರ್ಮಾಣ ಹಾಗೂ ಬೇಲೂರಿನಲ್ಲಿ ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಅವರ ವಸ್ತು ಸಂಗ್ರಹಾಲಯ…

32 mins ago

ಓದುಗರ ಪತ್ರ:  ಗೋಪಾಲಸ್ವಾಮಿ ಬೆಟ್ಟದ ಬಸ್ ಪ್ರಯಾಣ ದರ ಇಳಿಕೆ ಮಾಡಿ

ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ಇತಿಹಾಸ ಪ್ರಸಿದ್ಧ ಕ್ಷೇತ್ರ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಖಾಸಗಿ ವಾಹನಗಳಿಗೆ ಪ್ರವೇಶವಿರುವುದಿಲ್ಲ. ರಾಜ್ಯ ರಸ್ತೆ ಸಾರಿಗೆ ನಿಗಮದ…

35 mins ago

ಓದುಗರ ಪತ್ರ: ಮಸೂದೆ ಅಂಗೀಕಾರಕ್ಕಷ್ಟೇ ವಿಧಾನಸಭೆ ಅಧಿವೇಶನ ಸೀಮಿತವಾಗದಿರಲಿ

ಬೆಳಗಾವಿಯಲ್ಲಿ ವಿಧಾನಸಭಾ ಅಧಿವೇಶನ ಆರಂಭವಾಗಿದೆ. ಇತ್ತೀಚಿನ ವರ್ಷಗಳಲ್ಲಿ ಸದನದಲ್ಲಿ ಯಾವುದೇ ವಿಷಯ, ಜನರ ಸಮಸ್ಯೆ, ಮಸೂದೆಗಳ ಬಗ್ಗೆ ರಚನಾತ್ಮಕ ಚರ್ಚೆ…

38 mins ago

ಥಿಯೇಟರ್‌ಗಳಲ್ಲಿ ಡೆವಿಲ್‌ ಅಬ್ಬರ: ದರ್ಶನ್‌ ಅಭಿಮಾನಿಗಳ ಸಂಭ್ರಮ

ಬೆಂಗಳೂರು: ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅಭಿನಯದ ಡೆವಿಲ್‌ ಚಿತ್ರ ಇಂದು ರಾಜ್ಯಾದ್ಯಂತ ರಿಲೀಸ್‌ ಆಗಿದ್ದು, ಅಭಿಮಾನಿಗಳ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ.…

40 mins ago