Madikeri | Waterfalls Drawing Nature Lovers Towards Them
ಮಡಿಕೇರಿ: ಮಳೆಗಾಲ ಆರಂಭವಾಯಿತೆಂದರೆ ಸಾಕು ಕೊಡಗಿನತ್ತ ಹೆಚ್ಚಿನ ಪ್ರವಾಸಿಗರು ಮುಖ ಮಾಡುತ್ತಾರೆ. ಇಲ್ಲಿನ ತಂಪಾದ ವಾತಾವರಣ, ಹಚ್ಚಹಸಿರಿನ ಪರಿಸರದೊಂದಿಗೆ ಮಳೆಗೆ ಮೈದುಂಬಿ ಸೌಂದರ್ಯ ಹೆಚ್ಚಿಸಿಕೊಳ್ಳುವ ಜಲಪಾತಗಳನ್ನು ನೋಡುವುದೇ ಕಣ್ಣಿಗೆ ಹಬ್ಬ. ಅದರಲ್ಲೂ ಗ್ರಾಮವೊಂದಕ್ಕೆ ತೆರಳುವ ರಸ್ತೆಯಲ್ಲೇ ೨೦ಕ್ಕೂ ಅಧಿಕ ಜಲಪಾತ ಸೃಷ್ಟಿಯಾಗುವ ಕರಿಕೆ ಈಗ ಪ್ರವಾಸಿಗರ ಹಾಟ್ಸ್ಪಾಟ್ ಆಗಿದೆ.
ಭಾಗಮಂಡಲ – ಕರಿಕೆ ಅಂತರ್ ರಾಜ್ಯ ಹೆದ್ದಾರಿಯ ಇಕ್ಕೆಲಗಳಲ್ಲಿ ಹರಿಯುತ್ತಿರುವ ಹತ್ತಾರು ಝರಿಗಳು, ಸುತ್ತಲೂ ಮನಮೋಹಕ ನೈಸರ್ಗಿಕ ಸೊಬಗು ಪ್ರವಾಸಿಗರನ್ನು ಆಕರ್ಷಿಸುತ್ತಿದೆ.
ಈ ಭಾಗದಲ್ಲಿ ಧಾರಾಕಾರ ಮಳೆ ಸುರಿದಿದ್ದು, ಎಲ್ಲೆಡೆ ಹಸಿರಿನಿಂದ ಕಂಗೊಳಿಸುತ್ತಿದೆ. ಕರಿಕೆ ಜಲಪಾತಗಳು ತುಂಬಿ ಧುಮ್ಮಿಕ್ಕುವ ದೃಶ್ಯ ನೋಡುಗರ ಕಣ್ಮನ ಸೆಳೆಯುತ್ತಿದೆ.
ಈ ಬಾರಿ ವರುಣ ಮೇ ಅಂತ್ಯದಿಂದಲೇ ಬಿರುಸುಗೊಂಡಿದ್ದು, ಅವಧಿಗೂ ಮುನ್ನವೇ ಉತ್ತಮ ಮಳೆಯಾಗಿದೆ. ಇದರಿಂದ ನೀರಿಲ್ಲದೆ ಕಳೆಗುಂದಿದ್ದ ಜಲ ಕನ್ಯೆಯರು ಮೈದುಂಬಿ ಪರಿಸರ ಪ್ರಿಯರನ್ನು ತನ್ನತ್ತ ಆಕರ್ಷಿಸುತ್ತಿವೆ. ಪ್ರಕೃತಿಯ ಹಚ್ಚ ಹಸಿರಿನ ಸುಂದರ ತಾಣ ಬ್ರಹ್ಮಗಿರಿ ಬೆಟ್ಟದ ತಪ್ಪಲಿನ ತಲಕಾವೇರಿ ಅಭಯಾರಣ್ಯದ ವ್ಯಾಪ್ತಿಯಲ್ಲಿರುವ ೨೦ಕ್ಕೂ ಅಧಿಕ ಜಲಪಾತಗಳು ಹಾಲ್ನೊರೆ ಸೂಸುತ್ತಿವೆ.
ಮೈಸೂರು: ಡಿ.ಕೆ.ಶಿವಕುಮಾರ್ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…
ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್ ಸರ್ಕಾರದ ಪರವಾಗಿ ನಮ್ರತೆಯ ಮನವಿ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ CWRC, CWMA ಆದೇಶ ವಿರೋಧಿಸಿ ರಾಜ್ಯದಲ್ಲಿ ರೈತರ ಹೋರಾಟ ಭುಗಿಲೆದ್ದಿದೆ. ರೈತರ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…
ಮೈಸೂರು: ಇಂದು ಆಷಾಢ ಮಾಸದ ಮೂರನೇ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡದೇವತೆ ಚಾಮುಂಡೇಶ್ವರಿಗೆ ಗಜಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಆಷಾಢ ಮಾಸದ…
ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…