ಕೊಡಗು

ಮಡಿಕೇರಿ| ಪರಿಸರ ಪ್ರಿಯರನ್ನು ತನ್ನತ್ತ ಆಕರ್ಷಿಸುತ್ತಿರುವ ಜಲಪಾತಗಳು

ಮಡಿಕೇರಿ: ಮಳೆಗಾಲ ಆರಂಭವಾಯಿತೆಂದರೆ ಸಾಕು ಕೊಡಗಿನತ್ತ ಹೆಚ್ಚಿನ ಪ್ರವಾಸಿಗರು ಮುಖ ಮಾಡುತ್ತಾರೆ. ಇಲ್ಲಿನ ತಂಪಾದ ವಾತಾವರಣ, ಹಚ್ಚಹಸಿರಿನ ಪರಿಸರದೊಂದಿಗೆ ಮಳೆಗೆ ಮೈದುಂಬಿ ಸೌಂದರ್ಯ ಹೆಚ್ಚಿಸಿಕೊಳ್ಳುವ ಜಲಪಾತಗಳನ್ನು ನೋಡುವುದೇ ಕಣ್ಣಿಗೆ ಹಬ್ಬ. ಅದರಲ್ಲೂ ಗ್ರಾಮವೊಂದಕ್ಕೆ ತೆರಳುವ ರಸ್ತೆಯಲ್ಲೇ ೨೦ಕ್ಕೂ ಅಧಿಕ ಜಲಪಾತ ಸೃಷ್ಟಿಯಾಗುವ ಕರಿಕೆ ಈಗ ಪ್ರವಾಸಿಗರ ಹಾಟ್‌ಸ್ಪಾಟ್ ಆಗಿದೆ.

ಭಾಗಮಂಡಲ – ಕರಿಕೆ ಅಂತರ್ ರಾಜ್ಯ ಹೆದ್ದಾರಿಯ ಇಕ್ಕೆಲಗಳಲ್ಲಿ ಹರಿಯುತ್ತಿರುವ ಹತ್ತಾರು ಝರಿಗಳು, ಸುತ್ತಲೂ ಮನಮೋಹಕ ನೈಸರ್ಗಿಕ ಸೊಬಗು ಪ್ರವಾಸಿಗರನ್ನು ಆಕರ್ಷಿಸುತ್ತಿದೆ.

ಈ ಭಾಗದಲ್ಲಿ ಧಾರಾಕಾರ ಮಳೆ ಸುರಿದಿದ್ದು, ಎಲ್ಲೆಡೆ ಹಸಿರಿನಿಂದ ಕಂಗೊಳಿಸುತ್ತಿದೆ. ಕರಿಕೆ ಜಲಪಾತಗಳು ತುಂಬಿ ಧುಮ್ಮಿಕ್ಕುವ ದೃಶ್ಯ ನೋಡುಗರ ಕಣ್ಮನ ಸೆಳೆಯುತ್ತಿದೆ.

ಈ ಬಾರಿ ವರುಣ ಮೇ ಅಂತ್ಯದಿಂದಲೇ ಬಿರುಸುಗೊಂಡಿದ್ದು, ಅವಧಿಗೂ ಮುನ್ನವೇ ಉತ್ತಮ ಮಳೆಯಾಗಿದೆ. ಇದರಿಂದ ನೀರಿಲ್ಲದೆ ಕಳೆಗುಂದಿದ್ದ ಜಲ ಕನ್ಯೆಯರು ಮೈದುಂಬಿ ಪರಿಸರ ಪ್ರಿಯರನ್ನು ತನ್ನತ್ತ ಆಕರ್ಷಿಸುತ್ತಿವೆ. ಪ್ರಕೃತಿಯ ಹಚ್ಚ ಹಸಿರಿನ ಸುಂದರ ತಾಣ ಬ್ರಹ್ಮಗಿರಿ ಬೆಟ್ಟದ ತಪ್ಪಲಿನ ತಲಕಾವೇರಿ ಅಭಯಾರಣ್ಯದ ವ್ಯಾಪ್ತಿಯಲ್ಲಿರುವ ೨೦ಕ್ಕೂ ಅಧಿಕ ಜಲಪಾತಗಳು ಹಾಲ್ನೊರೆ ಸೂಸುತ್ತಿವೆ.

ಆಂದೋಲನ ಡೆಸ್ಕ್

Recent Posts

ದಸರಾ ವೆಬ್‌ಸೈಟ್‌ ಲೋಕಾರ್ಪಣೆ : ಅ.11ರಿಂದ 21ರವರೆಗೆ ನಡೆಯಲಿರುವ ಕಾರ್ಯಕ್ರಮಗಳ ಮಾಹಿತಿ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…

11 hours ago

ತಮಿಳುನಾಡಿಗೆ ಕಾವೇರಿ ನೀರು: 3 ಸಾವಿರ ಕ್ಯೂಸೆಕ್‌ಗೆ ಇಳಿಸಲು ರಾಜ್ಯ ಸರ್ಕಾರ ಮನವಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ…

13 hours ago

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸೆಪ್ಟೆಂಬರ್.18 ರಿಂದ ಅಮಿತ್ ಶಾ 2 ದಿನ ರಾಜ್ಯ ಪ್ರವಾಸ ‌

ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…

14 hours ago

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

18 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

23 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

23 hours ago