ಕೊಡಗು

ಮಡಿಕೇರಿ| ಪರಿಸರ ಪ್ರಿಯರನ್ನು ತನ್ನತ್ತ ಆಕರ್ಷಿಸುತ್ತಿರುವ ಜಲಪಾತಗಳು

ಮಡಿಕೇರಿ: ಮಳೆಗಾಲ ಆರಂಭವಾಯಿತೆಂದರೆ ಸಾಕು ಕೊಡಗಿನತ್ತ ಹೆಚ್ಚಿನ ಪ್ರವಾಸಿಗರು ಮುಖ ಮಾಡುತ್ತಾರೆ. ಇಲ್ಲಿನ ತಂಪಾದ ವಾತಾವರಣ, ಹಚ್ಚಹಸಿರಿನ ಪರಿಸರದೊಂದಿಗೆ ಮಳೆಗೆ ಮೈದುಂಬಿ ಸೌಂದರ್ಯ ಹೆಚ್ಚಿಸಿಕೊಳ್ಳುವ ಜಲಪಾತಗಳನ್ನು ನೋಡುವುದೇ ಕಣ್ಣಿಗೆ ಹಬ್ಬ. ಅದರಲ್ಲೂ ಗ್ರಾಮವೊಂದಕ್ಕೆ ತೆರಳುವ ರಸ್ತೆಯಲ್ಲೇ ೨೦ಕ್ಕೂ ಅಧಿಕ ಜಲಪಾತ ಸೃಷ್ಟಿಯಾಗುವ ಕರಿಕೆ ಈಗ ಪ್ರವಾಸಿಗರ ಹಾಟ್‌ಸ್ಪಾಟ್ ಆಗಿದೆ.

ಭಾಗಮಂಡಲ – ಕರಿಕೆ ಅಂತರ್ ರಾಜ್ಯ ಹೆದ್ದಾರಿಯ ಇಕ್ಕೆಲಗಳಲ್ಲಿ ಹರಿಯುತ್ತಿರುವ ಹತ್ತಾರು ಝರಿಗಳು, ಸುತ್ತಲೂ ಮನಮೋಹಕ ನೈಸರ್ಗಿಕ ಸೊಬಗು ಪ್ರವಾಸಿಗರನ್ನು ಆಕರ್ಷಿಸುತ್ತಿದೆ.

ಈ ಭಾಗದಲ್ಲಿ ಧಾರಾಕಾರ ಮಳೆ ಸುರಿದಿದ್ದು, ಎಲ್ಲೆಡೆ ಹಸಿರಿನಿಂದ ಕಂಗೊಳಿಸುತ್ತಿದೆ. ಕರಿಕೆ ಜಲಪಾತಗಳು ತುಂಬಿ ಧುಮ್ಮಿಕ್ಕುವ ದೃಶ್ಯ ನೋಡುಗರ ಕಣ್ಮನ ಸೆಳೆಯುತ್ತಿದೆ.

ಈ ಬಾರಿ ವರುಣ ಮೇ ಅಂತ್ಯದಿಂದಲೇ ಬಿರುಸುಗೊಂಡಿದ್ದು, ಅವಧಿಗೂ ಮುನ್ನವೇ ಉತ್ತಮ ಮಳೆಯಾಗಿದೆ. ಇದರಿಂದ ನೀರಿಲ್ಲದೆ ಕಳೆಗುಂದಿದ್ದ ಜಲ ಕನ್ಯೆಯರು ಮೈದುಂಬಿ ಪರಿಸರ ಪ್ರಿಯರನ್ನು ತನ್ನತ್ತ ಆಕರ್ಷಿಸುತ್ತಿವೆ. ಪ್ರಕೃತಿಯ ಹಚ್ಚ ಹಸಿರಿನ ಸುಂದರ ತಾಣ ಬ್ರಹ್ಮಗಿರಿ ಬೆಟ್ಟದ ತಪ್ಪಲಿನ ತಲಕಾವೇರಿ ಅಭಯಾರಣ್ಯದ ವ್ಯಾಪ್ತಿಯಲ್ಲಿರುವ ೨೦ಕ್ಕೂ ಅಧಿಕ ಜಲಪಾತಗಳು ಹಾಲ್ನೊರೆ ಸೂಸುತ್ತಿವೆ.

ಆಂದೋಲನ ಡೆಸ್ಕ್

Recent Posts

ಎಸ್‌ಸಿ, ಎಸ್‌ಟಿಗಳ ಹಕ್ಕು ರಕ್ಷಣೆಗೆ ಕ್ರಮ : ಡಾ.ಮೂರ್ತಿ

ಮೈಸೂರು : ಆದಿವಾಸಿ ಸಮುದಾಯಗಳ ಮೇಲಿನ ದೌರ್ಜನ್ಯ, ಸಾಮಾಜಿಕ ಬಹಿಷ್ಕಾರ ಹಾಗೂ ಮೈಸೂರು ಭಾಗದಲ್ಲಿ ದಾಖಲಾಗಿರುವ 134 ಪೋಕ್ಸೊ ಪ್ರಕರಣಗಳು…

5 hours ago

ಬೆಂಕಿ ಅವಘಡ | ಅಬಕಾರಿ ಡಿಸಿ ಅಮಾನತಿಗೆ ಶಿಫಾರಸ್ಸು ಮಾಡಲು ಸೂಚನೆ ಕೊಟ್ಟ ಯತೀಂದ್ರ ಸಿದ್ದರಾಮಯ್ಯ!

ಮೈಸೂರು : ಸೋಮವಾರ ಪಬ್‌ನಲ್ಲಿ ಸಂಭವಿಸಿದ್ದ ಬೆಂಕಿ ಅವಘಡದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ತವ್ಯ ಲೋಪದ ಕಾರಣಕ್ಕಾಗಿ ಅಬಕಾರಿ…

6 hours ago

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ತಮಿಳುನಾಡು ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ರೈತರಿಗೆ ಸಿಎಂ ವಿಜಯ್‌ ಬಂಪರ್‌ ಕೊಡುಗೆ ನೀಡಿದ್ದಾರೆ. ವಿವಿಧ ಸಹಕಾರಿ ಬ್ಯಾಂಕುಗಳಲ್ಲಿ ರೈತರು ಪಡೆದಿರುವ 75,000 ರೂ…

10 hours ago

ಮುಂಗಾರು ಕೊರತೆ: ಹಾರಂಗಿ ಜಲಾಶಯದ ಒಳಹರಿವು ತೀವ್ರ ಕುಸಿತ

ಮಡಿಕೇರಿ: ಮುಂಗಾರು ಮಳೆ ಕೊರತೆಯಿಂದ ಹಾರಂಗಿ ಜಲಾಶಯಕ್ಕೆ ಒಳಹರಿವು ತೀವ್ರವಾಗಿ ಕುಸಿದಿದ್ದು, ರೈತರಲ್ಲಿ ಆತಂಕ ಹೆಚ್ಚಾಗಿದೆ. ಮಳೆಗಾಲವಾದರೂ ಜಿಲ್ಲೆಯಲ್ಲಿ ಮಳೆ…

11 hours ago

ಮೆಡಿಕಲ್‌ನಲ್ಲಿ ಇನ್ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಮೆಡಿಕಲ್‌ ಶಾಪ್‌ಗಳಲ್ಲಿ ಇನ್ಮು ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಆದೇಶ…

12 hours ago

ನಟ ವಿಜಯ್‌ ರಾಘವೇಂದ್ರ, ಶ್ರೀಮುರಳಿಗೆ ಮಾತೃ ವಿಯೋಗ

ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಸಿದ್ಧ ನಿರ್ಮಾಪಕರಾದ ಎಸ್.ಎ.ಚಿನ್ನೇಗೌಡ ಅವರ ಪತ್ನಿ ಹಾಗೂ ನಟರಾದ ವಿಜಯ್‌ ರಾಘವೇಂದ್ರ, ಶ್ರೀಮುರಳಿ ಅವರ ತಾಯಿ…

13 hours ago