ಕೊಡಗು

ಮಡಿಕೇರಿ: ಪ್ರತ್ಯೇಕ ಘಟನೆಯಲ್ಲಿ ಕಾಡಾನೆ ದಾಳಿ

ಮಡಿಕೇರಿ: ಸುಂಟಿಕೊಪ್ಪ ಸಮೀಪದ 7ನೇ ಹೊಸಕೋಟೆ ಅಂದಗೋವೆ ಪೈಸಾರಿಯಲ್ಲಿ ಕಾಡಾನೆಯೊಂದು ವ್ಯಕ್ತಿಯೊರ್ವ ಮೇಲೆ ದಾಳಿ ಮಾಡಿ ಗಾಯಗೊಳಿಸಿರುವ ಘಟನೆ ನಡೆದಿದೆ. ಈ ಬೆನ್ನಲ್ಲೇ ಮತ್ತೊಂದು ಘಟನೆ ಸುಂಟಿಕೊಪ್ಪ ಸಮೀಪದ ಅತ್ತೂರು ನಲ್ಲೂರು ತೋಟದಲ್ಲಿಯೂ ಮಹಿಳೆ ಮೇಲೆ ಕಾಡನೆ ದಾಳಿ ನಡೆಸಿದೆ.

ತೋಟದಲ್ಲಿ ಎಂದಿನಂತೆ ಕಾರ್ಮಿಕರು ಕೆಲಸದಲ್ಲಿ ನಿರತರಾಗಿದ್ದ ವೇಳೆ ಏಕಾಏಕಿ ಕಾರ್ಮಿಕರ ಮದ್ಯೆ ನುಗ್ಹಿದ ಕಾಡಾನೆ ಮಹಾದೇವಮ್ಮ ಎಂಬುವವರ ಮೇಲೆ ದಾಳಿ ನಡೆಸಿದೆ. ಇದರಿಂದ ಕಾಫಿ ಗಿಡದ ಮೇಲೆ ಬಿದ್ದ ಪರಿಣಾಮ ಆಕೆಯ ತೊಡೆಭಾಗಕ್ಕೆ ಗಂಭೀರ ಗಾಯವಾಗಿದ್ದು, ಕೂಡಲೇ ಚಿಕಿತ್ಸೆಗಾಗಿ ಮಡಿಕೇರಿ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.

ಬೆಳ್ಳಂಬೆಳಗ್ಗೆ ಕಾಡಾನೆಯೊಂದು ಗ್ರಾಮ ಪಂಚಾಯತಿಯ ವಾಟರ್ ಮ್ಯಾನ್ ಮೇಲೆ ದಾಳಿ ಮಾಡಿ ಗಾಯಗೋಳಿಸಿರುವ ಘಟನೆ 7ನೇ ಹೊಸಕೋಟೆ ಅಂದಗೋವೆ ಪೈಸಾರಿಯಲ್ಲಿ ನಡೆದಿದೆ. ಅದೃಷ್ಟವಶಾತ್ ಕಾಡಾನೆ ಅವರನ್ನು ಮೋರಿಯೊಳಗೆ ನೂಕಿದ್ದರಿಂದ ಜೀವ ಉಳಿದಿದೆ.

ಕೊಡಗರಹಳ್ಳಿ ಗ್ರಾಮ ಪಂಚಾಯತಿಗೆ ಒಳಪಟ್ಟಿರುವ ಅಂದ ಗೋವೆ ಪೈಸಾರಿ ವ್ಯಾಪ್ತಿಯಲ್ಲಿ ವಾಟರ್ ಮ್ಯಾನ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಹುಸೇನ್ ಎಂಬುವವರು ಎಂದಿನಂತೆ ಇಂದು ಬೆಳಗ್ಗೆ ನೀರು ಸರಬರಾಜು ಕರ್ತವ್ಯಕ್ಕೆಂದು ತೆರಳುತ್ತಿದ್ದ ಸಂದರ್ಭ ತೋಟದ ಒಳಗಿನಿಂದ ದಿಡೀರ್ ಪ್ರತ್ಯಕ್ಷವಾದ ಕಾಡಾನೆ ವ್ಯಕ್ತಿ ಮೇಲೆ ಎರಗಿದೆ. ಕೂಡಲೇ ಜಾಗೃತರಾದ ಹುಸೇನ್ ಎತ್ತರದ ಜಾಗದಲ್ಲಿ ಒಡಲಾರಂಭಿಸಿದಾಗ ಅವರನ್ನು ಕಾಡಾನೆ ಸೊಂಡಿಲಿನಿಂದ ರಸ್ತೆ ಬದಿಯಲ್ಲಿದ್ದ ಮೋರಿಯೊಳಗೆ ನೂಕಿದೆ. ಅದರ ಒಳಗೆ ಸೇರಿಕೊಂಡ ಹುಸೇನ್ ಅವರು ಜೀವ ಉಳಿಸಿಕೊಂಡಿದ್ದಾರೆ. ಇದರಿಂದ ಇನ್ನಷ್ಟು ರೋಷಗೊಂಡ ಕಾಡಾನೆ ಮೋರಿಯ ಮೇಲೆ ಎರಗಿ ಹಾನಿಪಡಿಸಿದೆ. ಆನೆ ಹೊರಟು ಹೋದ ನಂತರ ಸ್ಥಳೀಯರು ಗಾಯಾಳುವನ್ನು ಮಡಿಕೇರಿ ಜಿಲ್ಲಾಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

55 mins ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

2 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

12 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

12 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

12 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

12 hours ago