Mysore
26
broken clouds

Social Media

ಮಂಗಳವಾರ, 24 ಫೆಬ್ರವರಿ 2026
Light
Dark

ಮಡಿಕೇರಿ | ಟ್ರಾಕ್ಟರ್ ಮಗುಚಿ ಕಾರ್ಮಿಕ ಸಾವು

ಸಿದ್ದಾಪುರ : ವಾಹನ ಚಲಾಯಿಸುವ ಆಸೆಯಿಂದ ಟ್ರಾಕ್ಟರ್ ಚಲಾಯಿಸಿದ ಕಾರ್ಮಿಕ ನಿಯಂತ್ರಣ ತಪ್ಪಿ ಹಳ್ಳಕ್ಕೆ ಮಗುಚಿದ ಪರಿಣಾಮ ಸ್ಥಳದಲ್ಲೆ ಮೃತ ಪಟ್ಟ ಘಟನೆ ಹಿಲ್ ಕಿಲ್ ಎಸ್ವೇಟ್ನಲ್ಲಿ ಸಂಭವಿಸಿದೆ.

ಬಾಗಲಕೋಟೆಯ ನಿವಾಸಿ ಪ್ರವೀಣ್ (35) ಮೃತ ಯುವಕ. ಎಸ್ಟೇಟ್ ನಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿಗೆ ಮುಂಜಾನೆ ಸಾಮಗ್ರಿಗಳನ್ನು ಒದಗಿಸಲು ಚಾಲಕ ಇಲ್ಲದ ಸಂದರ್ಭ ವಾಹನ ಚಲಾಯಿಸುವ ಆಸೆಯಿಂದ ಟ್ರಾಕ್ಟರ್ ಚಲಾಯಿಸಿದ್ದಾನೆ. ಈ ವೇಳೆ ದುರ್ಘಟನೆ ಸಂಭವಿಸಿದೆ.

ಘಟನಾ ಸ್ಥಳಕ್ಕೆ ಪೋಲೀಸ್ ಠಾಣಾಧಿಕಾರಿ ಮಂಜುನಾಥ್, ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಮಹಜರು ನಡೆಸಿದ್ದಾರೆ.

Tags:
error: Content is protected !!