ಮಡಿಕೇರಿ: ಕೊಡಗಿನಲ್ಲಿ ಮಳೆ ತಗ್ಗಿದ ಪರಿಣಾಮ ನಿಸರ್ಗದ ಚೆಲುವಿನ ಲಾಸ್ಯ ಎಲ್ಲರ ಕಣ್ಮನ ತಣಿಸುತ್ತಿದೆ. ಹೀಗಾಗಿ ಕೊಡಗಿನತ್ತ ಪ್ರವಾಸಿಗರ ದಂಡೇ ಆಗಮಿಸುತ್ತಿದೆ.
ಕೊಡಗಿನ ಪ್ರವಾಸಿ ತಾಣಗಳಿಗೆ ಭೇಟಿ ನೀಡುವ ಪ್ರವಾಸಿಗರು ಒಂದಷ್ಟು ಸಮಯವನ್ನು ಪ್ರಶಾಂತ ವಾತಾವರಣ ನಿಸರ್ಗದ ಮಡಿಲಲ್ಲಿ ಕಳೆದು ಹೋಗುವುದೇ ಎಲ್ಲಿಲ್ಲದ ಸಡಗರವಾಗಿದೆ. ಅದರಲ್ಲೂ ಮಡಿಕೇರಿ ನಗರಕ್ಕೆ ಭೇಟಿ ನೀಡಿದವರು ರಾಜಾಸೀಟ್ಗೆ ತೆರಳಿ ಅಲ್ಲಿ ಕಾಲ ಕಳೆಯುವುದು ಖುಚಿ ಕೊಡುತ್ತಿದೆ.
ಕೊಡಗಿನ ಪ್ರವಾಸಿ ತಾಣಗಳ ಪೈಕಿ ನಿಸರ್ಗದ ಸುಂದರತೆಯಿಂದಲೇ ಹೆಸರು ವಾಸಿಯಾಗಿರುವುದು ಮಡಿಕೇರಿಯ ರಾಜಾಸೀಟ್. ಇದು ಪ್ರವಾಸಿಗರ ಪ್ರಮುಖ ಸಂದರ್ಶನಕ್ಕೆ ಯೋಗ್ಯ ತಾಣವಾಗಿದೆ. ಇಲ್ಲಿ ಮಟ ಮಟ ಮಧ್ಯಾಹ್ನದ ವೇಳೆಯೂ ತಂಗಾಳಿ ಬೀಸಿದ ಅನುಭವವಾಗುತ್ತದೆ.
ಇಲ್ಲಿಂದ ನಿಂತು ನೋಡುವ ಕಣ್ಣುಗಳಿಗೆ ಹತ್ತಾರು ಸುಂದರ ದೃಶ್ಯಗಳು ಕಣ್ಣ ಮುಂದೆ ಹಾದು ಹೋಗುತ್ತಲೇ ಇರುತ್ತದೆ. ಇಲ್ಲಿ ಉಸಿರಾಡಲು ಒಳ್ಳೆಯ ಗಾಳಿ, ಸದ್ದು ಗದ್ದಲವಿಲ್ಲದ ಪ್ರಶಾಂತತೆ, ಕಣ್ಣನ್ನು ತಂಪಾಗಿಸುವ ಹಸಿರು ನೆಮ್ಮದಿ ನೀಡುತ್ತಿದೆ.
ಈ ಹಿನ್ನೆಲೆಯಲ್ಲಿ ರಾಜಾಸೀಟ್ಗೆ ಬರುವ ಪ್ರವಾಸಿಗರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಹೋಗುತ್ತಿದ್ದು, ಪ್ರವಾಸೋದ್ಯಮ ಈಗ ಬಹಳ ಚೇತರಿಕೆ ಕಾಣುತ್ತಿದೆ.
ನವದೆಹಲಿ : ಹ್ಯಾಜಲ್ವುಡ್, ಭುವನೇಶ್ವರ್ ಬೌಲಿಂಗ್ ಅಬ್ಬರ, ಸಂಘಟಿತ ಫೀಲ್ಡಿಂಗ್ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು…
ಮೈಸೂರು : ಕೆ-ಸೆಟ್ ಮತ್ತು ಯುಜಿಸಿ-ನೆಟ್, ಜೆಆರ್ಎಫ್ ಅರ್ಹತಾ ಪರೀಕ್ಷೆ ಬರೆಯುವವರಿಗೆ 45 ದಿನಗಳ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕರ್ನಾಟಕ…
ಹಾಸನ : ಹಠಾತ್ ಕುಸಿದು ಬಿದ್ದು ಮೆದುಳಿನಲ್ಲಿ ತೀವ್ರ ರಕ್ತಸ್ರಾವವಾಗಿ ಕೋಮಾಗೆ ಜಾರಿದ್ದ ಸಾಫ್ಟ್ವೇರ್ ಇಂಜಿನಿಯರ್ ಯುವತಿ ಚಿಕಿತ್ಸೆ ಫಲಿಸದೆ…
ಮೈಸೂರು : ಮೈಸೂರು ಪ್ರಾಂತ್ಯದಲ್ಲೇ ಪ್ರಸೂತಿ, ಸ್ತ್ರೀರೋಗ ಮತ್ತು ಮಕ್ಕಳಿಗೆ ಗುಣಮಟ್ಟದ ಚಿಕಿತ್ಸೆ ನೀಡುವಲ್ಲಿ ಹೆಸರುವಾಸಿಯಾಗಿದ್ದ ಮೈಸೂರಿನ ಚೆಲುವಾಂಬ ಆಸ್ಪತ್ರೆಯ…
ಕೊಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಬಹಿರಂಗ ಚುನಾವಣೆ ಸೋಮವಾರ ಅಂತ್ಯವಾಗಿದೆ. ಏ.29ರಂದು ಮತದಾನ ನಡೆಯಲಿದ್ದು,…
ಶಿವಮೊಗ್ಗ : ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ‘ಕಾಪಿ ಹೊಡೆಸಿ ಶೇ.94.1 ಫಲಿತಾಂಶ ತಂದಿದ್ದಾರೆ’ ಎಂಬ ಬಿಜೆಪಿ ಎಂಎಲ್ಸಿ ಎಚ್.ವಿಶ್ವನಾಥ್ ಅವರ ಹೇಳಿಕೆಗೆ…